ETV Bharat / state

ಡೇರೆ ಮುಕ್ತ ಕರ್ನಾಟಕಕ್ಕೆ ಅಡಿಗಲ್ಲು: ರವೀಂದ್ರ ಶೆಟ್ಟಿ ಉಳಿದೊಟ್ಟು

ಕರ್ನಾಟಕ ಅಲೆಮಾರಿ‌ ಹಾಗೂ ಅರೆ ಅಲೆಮಾರಿ ನಿಗಮದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ಮೊದಲ ಬಾರಿಗೆ ಮಂಳೂರಿಗೆ ಭೇಟಿ ನೀಡಿದ್ದರು. ಈ ವೇಳೆ ಅವರಿಗೆ ಅದ್ಧೂರಿಯಾಗಿ ಸ್ವಾಗತವನ್ನು ಕೋರಲಾಯಿತು.

author img

By

Published : Apr 10, 2021, 10:27 AM IST

ರವೀಂದ್ರ ಶೆಟ್ಟಿ ಉಳಿದೊಟ್ಟು
Minister Ravindra Shetty Ulidottu

ಮಂಗಳೂರು: ನನ್ನ ಅವಧಿಯಲ್ಲಿ ಕರ್ನಾಟಕವನ್ನು ಡೇರೆ ಮುಕ್ತ ಮಾಡಲು ಅಡಿಗಲ್ಲು ಹಾಕುತ್ತೇನೆ ಎಂದು ಕರ್ನಾಟಕ ಅಲೆಮಾರಿ‌ ಹಾಗೂ ಅರೆ ಅಲೆಮಾರಿ ನಿಗಮದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದರು.

ಮೊದಲ ಬಾರಿಗೆ ಮಂಗಳೂರಿಗೆ ಭೇಟಿ ನೀಡಿದ ರವೀಂದ್ರ ಶೆಟ್ಟಿ ಉಳಿದೊಟ್ಟು

ಅಧಿಕಾರ ಸ್ವೀಕರಿಸಿದ ಬಳಿಕ ಮಂಗಳೂರಿಗೆ ಪ್ರಥಮ ಬಾರಿಗೆ ಬಂದ ಆಗಮಿಸಿದ್ದು, ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ಅಲೆಮಾರಿ‌ ನಿಗಮವು ಕಳೆದ ಬಾರಿ ಆರಂಭವಾಗಿದ್ದು, ಸಿಎಂ ಯಡಿಯೂರಪ್ಪನವರು ನನ್ನನ್ನು ಈ ನಿಗಮದ ಪ್ರಥಮ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದಾರೆ. ಇಡೀ ರಾಜ್ಯದಲ್ಲಿ ಸಾಧ್ಯವಾಗದಿದ್ದರೂ ಕೆಲವು ಜಿಲ್ಲೆಗಳಲ್ಲಾದರೂ ಡೇರೆ ಮುಕ್ತ ಮಾಡಿ ಮುಂದಿನ ಅಧ್ಯಕ್ಷರುಗಳಿಗೆ ಮಾದರಿಯಾಗಿ ಕೆಲಸ ಮಾಡುತ್ತೇನೆ. ಈಗಾಗಲೇ ಹತ್ತಾರು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಈ ಬಗ್ಗೆ ಪರಿಶೀಲನೆ ನಡೆಸಿದ್ದೇನೆ ಎಂದೇಳಿದರು.

ಅಲೆಮಾರಿ ಜನ ಸಮುದಾಯ ಸಾಮಾಜಿಕ ವ್ಯವಸ್ಥೆಯಲ್ಲಿ ಅತ್ಯಂತ ಶೋಚನೀಯ ಸ್ಥಿತಿಯಲ್ಲಿದೆ. ಮೂಲಭೂತ ಸೌಕರ್ಯಗಳಿಂದ ವಂಚಿತರಾದ ಜನಾಂಗದ ಜನರು ಡೇರೆಗಳಲ್ಲಿ ಜೀವನ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿನಲ್ಲಿ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಅದರ ಎಲ್ಲಾ ವಿವರಗಳನ್ನು ಸಿಎಂ ಅವರಿಗೆ ನೀಡಿದ್ದೇನೆ. ಮುಂದಿನ‌ ದಿನಗಳಲ್ಲಿ ಉಳಿದ ಜಿಲ್ಲೆಗಳಿಗೂ ಪ್ರವಾಸ ಕೈಗೊಳ್ಳಲಿದ್ದೇನೆ. ಈ ಮೂಲಕ‌ ಧ್ವನಿ ಇಲ್ಲದವರಿಗೆ ಧ್ವನಿ ಕೊಡುವ ಮೂಲಕ‌ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನ ಸಮುದಾಯದವರಿಗೆ ನ್ಯಾಯವನ್ನು ಒದಗಿಸುವ ಕಾರ್ಯ ಮಾಡುತ್ತೇವೆ ಎಂದು ಹೇಳಿದರು.

ಮಂಗಳೂರು: ನನ್ನ ಅವಧಿಯಲ್ಲಿ ಕರ್ನಾಟಕವನ್ನು ಡೇರೆ ಮುಕ್ತ ಮಾಡಲು ಅಡಿಗಲ್ಲು ಹಾಕುತ್ತೇನೆ ಎಂದು ಕರ್ನಾಟಕ ಅಲೆಮಾರಿ‌ ಹಾಗೂ ಅರೆ ಅಲೆಮಾರಿ ನಿಗಮದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದರು.

ಮೊದಲ ಬಾರಿಗೆ ಮಂಗಳೂರಿಗೆ ಭೇಟಿ ನೀಡಿದ ರವೀಂದ್ರ ಶೆಟ್ಟಿ ಉಳಿದೊಟ್ಟು

ಅಧಿಕಾರ ಸ್ವೀಕರಿಸಿದ ಬಳಿಕ ಮಂಗಳೂರಿಗೆ ಪ್ರಥಮ ಬಾರಿಗೆ ಬಂದ ಆಗಮಿಸಿದ್ದು, ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ಅಲೆಮಾರಿ‌ ನಿಗಮವು ಕಳೆದ ಬಾರಿ ಆರಂಭವಾಗಿದ್ದು, ಸಿಎಂ ಯಡಿಯೂರಪ್ಪನವರು ನನ್ನನ್ನು ಈ ನಿಗಮದ ಪ್ರಥಮ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದಾರೆ. ಇಡೀ ರಾಜ್ಯದಲ್ಲಿ ಸಾಧ್ಯವಾಗದಿದ್ದರೂ ಕೆಲವು ಜಿಲ್ಲೆಗಳಲ್ಲಾದರೂ ಡೇರೆ ಮುಕ್ತ ಮಾಡಿ ಮುಂದಿನ ಅಧ್ಯಕ್ಷರುಗಳಿಗೆ ಮಾದರಿಯಾಗಿ ಕೆಲಸ ಮಾಡುತ್ತೇನೆ. ಈಗಾಗಲೇ ಹತ್ತಾರು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಈ ಬಗ್ಗೆ ಪರಿಶೀಲನೆ ನಡೆಸಿದ್ದೇನೆ ಎಂದೇಳಿದರು.

ಅಲೆಮಾರಿ ಜನ ಸಮುದಾಯ ಸಾಮಾಜಿಕ ವ್ಯವಸ್ಥೆಯಲ್ಲಿ ಅತ್ಯಂತ ಶೋಚನೀಯ ಸ್ಥಿತಿಯಲ್ಲಿದೆ. ಮೂಲಭೂತ ಸೌಕರ್ಯಗಳಿಂದ ವಂಚಿತರಾದ ಜನಾಂಗದ ಜನರು ಡೇರೆಗಳಲ್ಲಿ ಜೀವನ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿನಲ್ಲಿ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಅದರ ಎಲ್ಲಾ ವಿವರಗಳನ್ನು ಸಿಎಂ ಅವರಿಗೆ ನೀಡಿದ್ದೇನೆ. ಮುಂದಿನ‌ ದಿನಗಳಲ್ಲಿ ಉಳಿದ ಜಿಲ್ಲೆಗಳಿಗೂ ಪ್ರವಾಸ ಕೈಗೊಳ್ಳಲಿದ್ದೇನೆ. ಈ ಮೂಲಕ‌ ಧ್ವನಿ ಇಲ್ಲದವರಿಗೆ ಧ್ವನಿ ಕೊಡುವ ಮೂಲಕ‌ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನ ಸಮುದಾಯದವರಿಗೆ ನ್ಯಾಯವನ್ನು ಒದಗಿಸುವ ಕಾರ್ಯ ಮಾಡುತ್ತೇವೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.