ETV Bharat / state

ಅಗತ್ಯ ವಸ್ತುಗಳ ಖರೀದಿಗೆ ಸಮಯ ವಿಸ್ತರಿಸಲು ಸಚಿವ ಕೋಟಗೆ ಶಾಸಕ ಕಾಮತ್ ಮನವಿ

author img

By

Published : May 12, 2021, 9:16 PM IST

ರಾಜ್ಯದಲ್ಲಿ ಬೆಂಗಳೂರು ಹೊರತುಪಡಿಸಿದರೆ ಮಂಗಳೂರಿನಲ್ಲಿ ಹೆಚ್ಚಿನ ವಾಣಿಜ್ಯ ವಹಿವಾಟುಗಳು ನಡೆಯುತ್ತವೆ. ಹಾಗಾಗಿ ದ.ಕ. ಜಿಲ್ಲೆಯಲ್ಲಿ ಅಗತ್ಯ ಸಾಮಗ್ರಿಗಳ ಖರೀದಿಗೆ ನೀಡಿರುವ ಸಮಯದ ಅವಧಿಯನ್ನು ಮಂಗಳೂರು ನಗರ ದಕ್ಷಿಣದಲ್ಲಿ ಒಂದು ಗಂಟೆ ವಿಸ್ತರಿಸಬೇಕು ಎಂದು ಮನವಿ ಮಾಡಿದ್ದಾರೆ.

ಕೋಟ
ಕೋಟ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಕೊರೊನಾ ಕರ್ಫ್ಯೂನಿಂದ ನಾಗರಿಕರಿಗೆ ಅಗತ್ಯ ವಸ್ತುಗಳ ಖರೀದಿಗೆ ನೀಡಿರುವ ಸಮಯವನ್ನು ವಿಸ್ತರಿಸುವಂತೆ‌ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದ ನಿಯೋಗ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಈ ಕುರಿತು ಮಾತನಾಡಿರುವ ಶಾಸಕ ಕಾಮತ್, ಇಡೀ ರಾಜ್ಯದಲ್ಲಿ ಬೆಂಗಳೂರು ಹೊರತುಪಡಿಸಿದರೆ ಮಂಗಳೂರಿನಲ್ಲಿ ಹೆಚ್ಚಿನ ವಾಣಿಜ್ಯ ವಹಿವಾಟುಗಳು ನಡೆಯುತ್ತವೆ. ಹಾಗಾಗಿ ದ.ಕ. ಜಿಲ್ಲೆಯಲ್ಲಿ ಅಗತ್ಯ ಸಾಮಗ್ರಿಗಳ ಖರೀದಿಗೆ ನೀಡಿರುವ ಸಮಯದ ಅವಧಿಯನ್ನು ಮಂಗಳೂರು ನಗರ ದಕ್ಷಿಣದಲ್ಲಿ ಒಂದು ಗಂಟೆ ವಿಸ್ತರಿಸಬೇಕು. ಸದ್ಯ ಬೆಳಗ್ಗೆ 6 ಗಂಟೆಯಿಂದ 9 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಸಮಯಾವಕಾಶ ನೀಡಲಾಗಿದೆ. ಆದರೆ ಮಂಗಳೂರು ನಗರದಲ್ಲಿ ಅಂಗಡಿ ಮುಂಗಟ್ಟುಗಳು 7 ಗಂಟೆಯ ನಂತರವೇ ತೆರೆಯಲಾಗುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಖರೀದಿಗೆ ತಡವಾಗುತ್ತಿದೆ. ಹಾಗಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಲಾಕ್ ಡಾನ್ ನಿಯಮಾವಳಿಗಳನ್ನು ಮಂಗಳೂರಿಗೂ ಅನ್ವಯವಾಗುವಂತೆ ಆದೇಶ ಜಾರಿಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿರುವುದಾಗಿ ತಿಳಿಸಿದರು.

ಲಾಕ್ ಡೌನ್ ಸಂದರ್ಭದಲ್ಲಿ ಬ್ಯಾಂಕ್ ನೌಕರರು, ವಿವಿಧ‌ ಸವಲತ್ತುಗಳನ್ನು ಪಡೆಯಲು ಬ್ಯಾಂಕ್ ಅಥವಾ ಅಂಚೆ ಕಚೇರಿಗಳಿಗೆ ತೆರಳುವವರಿಗೆ, ಬೀಡಿ ಉದ್ಯಮಿಗಳಿಗೆ, ಬೀಡಿ ನೌಕರರಿಗೆ, ಹೋಟೆಲ್ ಕಾರ್ಮಿಕರು, ಕಟ್ಟಡ ಕಾರ್ಮಿಕರು ಸೇರಿದಂತೆ ಇತರ ವರ್ಗದ ಕಾರ್ಮಿಕರನ್ನು ಪರಿಗಣಿಸಿ ಓಡಾಟಕ್ಕೆ ಅನುಮತಿ ನೀಡಬೇಕು. ಹಿರಿಯ ನಾಗರಿಕರಿಗೆ ನಡೆದುಕೊಂಡು ಸಾಮಗ್ರಿಗಳನ್ನು ತರಲು ಸಮಸ್ಯೆ ಉಂಟಾಗುತ್ತಿದೆ. ಹಾಗಾಗಿ ಅವರಿಗೆ ಸಾಮಗ್ರಿಗಳ ಖರೀದಿಗೆ ವಾಹನ ಬಳಸಲು ಅವಕಾಶ ಕಲ್ಪಿಸಬೇಕು. ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಹಂಚಲು ಅವಕಾಶ ಕಲ್ಪಿಸಬೇಕೆಂದು ಸಚಿವರಿಗೆ ಮನವಿ ಸಲ್ಲಿಸಿದ್ದೇವೆ. ಅವರು ಮನವಿ ಪರಿಶೀಲಿಸಿ ಆದೇಶ ನೀಡುವ ಭರವಸೆ ನೀಡಿದ್ದಾರೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಕೊರೊನಾ ಕರ್ಫ್ಯೂನಿಂದ ನಾಗರಿಕರಿಗೆ ಅಗತ್ಯ ವಸ್ತುಗಳ ಖರೀದಿಗೆ ನೀಡಿರುವ ಸಮಯವನ್ನು ವಿಸ್ತರಿಸುವಂತೆ‌ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದ ನಿಯೋಗ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಈ ಕುರಿತು ಮಾತನಾಡಿರುವ ಶಾಸಕ ಕಾಮತ್, ಇಡೀ ರಾಜ್ಯದಲ್ಲಿ ಬೆಂಗಳೂರು ಹೊರತುಪಡಿಸಿದರೆ ಮಂಗಳೂರಿನಲ್ಲಿ ಹೆಚ್ಚಿನ ವಾಣಿಜ್ಯ ವಹಿವಾಟುಗಳು ನಡೆಯುತ್ತವೆ. ಹಾಗಾಗಿ ದ.ಕ. ಜಿಲ್ಲೆಯಲ್ಲಿ ಅಗತ್ಯ ಸಾಮಗ್ರಿಗಳ ಖರೀದಿಗೆ ನೀಡಿರುವ ಸಮಯದ ಅವಧಿಯನ್ನು ಮಂಗಳೂರು ನಗರ ದಕ್ಷಿಣದಲ್ಲಿ ಒಂದು ಗಂಟೆ ವಿಸ್ತರಿಸಬೇಕು. ಸದ್ಯ ಬೆಳಗ್ಗೆ 6 ಗಂಟೆಯಿಂದ 9 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಸಮಯಾವಕಾಶ ನೀಡಲಾಗಿದೆ. ಆದರೆ ಮಂಗಳೂರು ನಗರದಲ್ಲಿ ಅಂಗಡಿ ಮುಂಗಟ್ಟುಗಳು 7 ಗಂಟೆಯ ನಂತರವೇ ತೆರೆಯಲಾಗುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಖರೀದಿಗೆ ತಡವಾಗುತ್ತಿದೆ. ಹಾಗಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಲಾಕ್ ಡಾನ್ ನಿಯಮಾವಳಿಗಳನ್ನು ಮಂಗಳೂರಿಗೂ ಅನ್ವಯವಾಗುವಂತೆ ಆದೇಶ ಜಾರಿಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿರುವುದಾಗಿ ತಿಳಿಸಿದರು.

ಲಾಕ್ ಡೌನ್ ಸಂದರ್ಭದಲ್ಲಿ ಬ್ಯಾಂಕ್ ನೌಕರರು, ವಿವಿಧ‌ ಸವಲತ್ತುಗಳನ್ನು ಪಡೆಯಲು ಬ್ಯಾಂಕ್ ಅಥವಾ ಅಂಚೆ ಕಚೇರಿಗಳಿಗೆ ತೆರಳುವವರಿಗೆ, ಬೀಡಿ ಉದ್ಯಮಿಗಳಿಗೆ, ಬೀಡಿ ನೌಕರರಿಗೆ, ಹೋಟೆಲ್ ಕಾರ್ಮಿಕರು, ಕಟ್ಟಡ ಕಾರ್ಮಿಕರು ಸೇರಿದಂತೆ ಇತರ ವರ್ಗದ ಕಾರ್ಮಿಕರನ್ನು ಪರಿಗಣಿಸಿ ಓಡಾಟಕ್ಕೆ ಅನುಮತಿ ನೀಡಬೇಕು. ಹಿರಿಯ ನಾಗರಿಕರಿಗೆ ನಡೆದುಕೊಂಡು ಸಾಮಗ್ರಿಗಳನ್ನು ತರಲು ಸಮಸ್ಯೆ ಉಂಟಾಗುತ್ತಿದೆ. ಹಾಗಾಗಿ ಅವರಿಗೆ ಸಾಮಗ್ರಿಗಳ ಖರೀದಿಗೆ ವಾಹನ ಬಳಸಲು ಅವಕಾಶ ಕಲ್ಪಿಸಬೇಕು. ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಹಂಚಲು ಅವಕಾಶ ಕಲ್ಪಿಸಬೇಕೆಂದು ಸಚಿವರಿಗೆ ಮನವಿ ಸಲ್ಲಿಸಿದ್ದೇವೆ. ಅವರು ಮನವಿ ಪರಿಶೀಲಿಸಿ ಆದೇಶ ನೀಡುವ ಭರವಸೆ ನೀಡಿದ್ದಾರೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.