ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ನೈತಿಕ ಪೊಲೀಸ್ಗಿರಿ ಘಟನೆಗಳು ಮರುಕಳಿಸುತ್ತಿವೆ. ನಿನ್ನೆ ರಾತ್ರಿ ಬೆಂಗಳೂರಿಗೆ ಬಸ್ನಲ್ಲಿ ಹೋಗುತ್ತಿದ್ದ ಜೋಡಿಯನ್ನು ತಡೆದು ಹಲ್ಲೆ ಮಾಡಲಾಗಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ನ ನಗರದ ಪಂಪ್ವೆಲ್ನಲ್ಲಿ ರಾತ್ರಿ ತಡೆಹಿಡಿಯಲಾಗಿದೆ. ಈ ಬಸ್ನೊಳಗೆ ಅನ್ಯಮತೀಯ ಜೋಡಿಯೊಂದು ಹೊರಟಿತ್ತಂತೆ. ಅದಕ್ಕಾಗಿ ಆ ಜೋಡಿಯನ್ನು ಬಸ್ನಿಂದ ಎಳೆದು ಹಲ್ಲೆ ಮಾಡಲಾಗಿದೆ.
ಘಟನೆಯಲ್ಲಿ ಯುವಕ ಗಾಯಗೊಂಡಿದ್ದು, ಮಂಗಳೂರಿನ ಇಂಡಿಯಾನ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವತಿಯನ್ನು ಮನೆಯವರಿಗೆ ಒಪ್ಪಿಸಲಾಗಿದೆ. ಹಲ್ಲೆ ನಡೆಸಿದ ಓರ್ವನನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ.