ಸುಬ್ರಹ್ಮಣ್ಯ: ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಕುಕ್ಕೆ ಸುಬ್ರಹ್ಮಣ್ಯಕ್ಕೆ ಜಯಕರ್ನಾಟಕ ಸಂಘಟನೆಯ ಮುಖ್ಯಸ್ಥ, ಮಾಜಿ ಡಾನ್ ಮುತ್ತಪ್ಪ ರೈ ಅವರ ಕುಟುಂಬವು ಬ್ರಹ್ಮ ರಥವನ್ನು ಸಮರ್ಪಿಸಿತ್ತು.
ಉಡುಪಿಯ ಕೋಟೇಶ್ವರದಲ್ಲಿ ನಿರ್ಮಾಣಗೊಂಡ ಈ ಬ್ರಹ್ಮ ರಥವನ್ನು ಮುತ್ತಪ್ಪ ರೈ ಹಾಗೂ ಉದ್ಯಮಿ ಅಜಿತ್ ಶೆಟ್ಟಿ ಅವರು ಈ ದೇವಸ್ಥಾನಕ್ಕೆ ಸಮರ್ಪಣೆ ಮಾಡಿದ್ದರು. ಈ ರಥವು ರಸ್ತೆ ಮಾರ್ಗ ಮೂಲಕ ಕುಕ್ಕೆ ಸುಬ್ರಹ್ಮಣ್ಯ ತಲುಪಿತ್ತು. ಈ ಸಮಯದಲ್ಲಿ ರಸ್ತೆಯುದ್ದಕ್ಕೂ ಅದ್ಧೂರಿ ಸ್ವಾಗತವನ್ನು ನೀಡಲಾಗಿತ್ತು. ಬಳಿಕ ಸುಬ್ರಹ್ಮಣ್ಯ ದೇವರಿಗೆ ಈ ಬ್ರಹ್ಮರಥವನ್ನು ಜಾತ್ರಾ ಸಮಯದಲ್ಲಿ ಅಧಿಕೃತವಾಗಿ ಸಮರ್ಪಣೆ ಮಾಡಲಾಗಿತ್ತು.