ETV Bharat / state

ನನ್ನ ಪತಿಯನ್ನು ಉದ್ದೇಶ ಪೂರ್ವಕವಾಗಿ ಆರೋಪಿ ಮಾಡಲಾಗಿದೆ: ಶಫೀಕ್ ಪತ್ನಿ ಅನ್ಸಿಫಾ - Etv bharat kannada

ಪ್ರವೀಣ್​ ಹತ್ಯೆ ಪ್ರಕರಣ- ಶಫೀಕ್ ಬಂಧನ- ನನ್ನ ಪತಿ ಆರೋಪಿಯಲ್ಲ ಎಂದ ಪತ್ನಿ ಅನ್ಸಿಫಾ

Shafiq's wife Ansifa
ಶಫೀಕ್ ಪತ್ನಿ ಅನ್ಸಿಫಾ
author img

By

Published : Jul 28, 2022, 5:22 PM IST

ಸುಳ್ಯ (ದಕ್ಷಿಣ ಕನ್ನಡ): ನನ್ನ ಪತಿ ಆರೋಪಿಯಲ್ಲ. ಅವರನ್ನು ಮನೆಯಿಂದ ತನಿಖೆ ಇದೆ ಎಂದು ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ಇದೀಗ ಅವರನ್ನು ಆರೋಪಿಯನ್ನಾಗಿ ಮಾಡಲಾಗಿದೆ ಎಂದು ಶಫೀಕ್ ಪತ್ನಿ ಅನ್ಸಿಫಾ ಆರೋಪ ಮಾಡಿದ್ದಾರೆ. ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆಯ ತನಿಖೆಯು ಪ್ರಗತಿಯಲ್ಲಿದೆ. ಇಬ್ಬರು ಆರೋಪಿಗಳಾದ ಝಕೀರ್ ಮತ್ತು ಶಫೀಕ್ ಅವರ ಬಂಧನವನ್ನು ಎಡಿಜಿಪಿ ಅಲೋಕ್ ಕುಮಾರ್ ಮತ್ತು ಎಸ್ಪಿ ರಿಷಿಕೇಶ್ ಸೋನಾವಣೆ ದೃಢಪಡಿಸಿದ್ದಾರೆ.

ಈ ನಡುವೆ ಶಫೀಕ್ ಬೆಳ್ಳಾರೆ ಅವರ ಪತ್ನಿ ಅನ್ಸಿಫಾ ಬೆಳ್ಳಾರೆ ಪೊಲೀಸ್ ಠಾಣೆಗೆ ಬಂದು, ನನ್ನ ಪತಿ ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಆರೋಪಿಯಲ್ಲ. ಅವರನ್ನು ಉದ್ದೇಶ ಪೂರ್ವಕವಾಗಿ ಆರೋಪಿಯನ್ನಾಗಿ ಮಾಡಲಾಗಿದೆ. ಮನೆಯಲ್ಲಿದ್ದ ಅವರನ್ನು ತನಿಖೆ ಇದೆ ಎಂದು ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ನಮಗೆ ಅವರನ್ನು ನೋಡಲೂ ಸಹ ಬಿಡುತ್ತಿಲ್ಲ. ಅವರನ್ನು ಕರೆದುಕೊಂಡು ಬಂದು 24 ಗಂಟೆಗಳು ಕಳೆದಿದೆ. ಇದೀಗ ಆರೋಪಿ ಎನ್ನುತ್ತಿದ್ದಾರೆ. ಅವರು ಕೊಲೆ ಆರೋಪಿಯಲ್ಲ ಎಂದು ಅನ್ಸಿಫಾ ಹೇಳಿದ್ದಾರೆ.

ಆರೋಪಿ ಶಫೀಕ್ ಪತ್ನಿ ಅನ್ಸಿಫಾ ಪ್ರತಿಕ್ರಿಯೆ

ಬೆಳ್ಳಾರೆ ಪೊಲೀಸ್ ಠಾಣೆಯಲ್ಲೇ ವೈದ್ಯರು ಆರೋಪಿಗಳ ಆರೋಗ್ಯ ತಪಾಸಣೆ ನಡೆಸಿದ್ದು, ಪುತ್ತೂರು ನ್ಯಾಯಾಲಯಕ್ಕೆ ಹಾಜರು ಪಡಿಸುತ್ತಾರೆಂದು ತಿಳಿದು ಬಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಜೆ ಪ್ರವೀಣ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಲಿದ್ದಾರೆ. ಪೊಲೀಸರಿಂದ ಬಂಧಿಸಲ್ಪಟ್ಟ ಬೆಳ್ಳಾರೆ ಮೂಲದ ಶಫೀಕ್ ಕೆಲಸ ಮಾಡುತ್ತಿದ್ದ, ಗುತ್ತಿಗಾರಿನ ಅಡಿಕೆ ಅಂಗಡಿಯನ್ನು ಆಕ್ರೋಶಿತರು ಧ್ವಂಸಗೊಳಿಸಿದ್ದಾರೆ. ಗುತ್ತಿಗಾರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಇದನ್ನೂ ಓದಿ: ಭಯೋತ್ಪಾದನೆ ಹತ್ತಿಕ್ಕಲು ಯಾವುದೇ ಮಾದರಿಯಾದರೂ ಜಾರಿ ಮಾಡುತ್ತೇವೆ: ಸಚಿವ ಆರ್. ಅಶೋಕ್

ಸುಳ್ಯ (ದಕ್ಷಿಣ ಕನ್ನಡ): ನನ್ನ ಪತಿ ಆರೋಪಿಯಲ್ಲ. ಅವರನ್ನು ಮನೆಯಿಂದ ತನಿಖೆ ಇದೆ ಎಂದು ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ಇದೀಗ ಅವರನ್ನು ಆರೋಪಿಯನ್ನಾಗಿ ಮಾಡಲಾಗಿದೆ ಎಂದು ಶಫೀಕ್ ಪತ್ನಿ ಅನ್ಸಿಫಾ ಆರೋಪ ಮಾಡಿದ್ದಾರೆ. ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆಯ ತನಿಖೆಯು ಪ್ರಗತಿಯಲ್ಲಿದೆ. ಇಬ್ಬರು ಆರೋಪಿಗಳಾದ ಝಕೀರ್ ಮತ್ತು ಶಫೀಕ್ ಅವರ ಬಂಧನವನ್ನು ಎಡಿಜಿಪಿ ಅಲೋಕ್ ಕುಮಾರ್ ಮತ್ತು ಎಸ್ಪಿ ರಿಷಿಕೇಶ್ ಸೋನಾವಣೆ ದೃಢಪಡಿಸಿದ್ದಾರೆ.

ಈ ನಡುವೆ ಶಫೀಕ್ ಬೆಳ್ಳಾರೆ ಅವರ ಪತ್ನಿ ಅನ್ಸಿಫಾ ಬೆಳ್ಳಾರೆ ಪೊಲೀಸ್ ಠಾಣೆಗೆ ಬಂದು, ನನ್ನ ಪತಿ ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಆರೋಪಿಯಲ್ಲ. ಅವರನ್ನು ಉದ್ದೇಶ ಪೂರ್ವಕವಾಗಿ ಆರೋಪಿಯನ್ನಾಗಿ ಮಾಡಲಾಗಿದೆ. ಮನೆಯಲ್ಲಿದ್ದ ಅವರನ್ನು ತನಿಖೆ ಇದೆ ಎಂದು ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ನಮಗೆ ಅವರನ್ನು ನೋಡಲೂ ಸಹ ಬಿಡುತ್ತಿಲ್ಲ. ಅವರನ್ನು ಕರೆದುಕೊಂಡು ಬಂದು 24 ಗಂಟೆಗಳು ಕಳೆದಿದೆ. ಇದೀಗ ಆರೋಪಿ ಎನ್ನುತ್ತಿದ್ದಾರೆ. ಅವರು ಕೊಲೆ ಆರೋಪಿಯಲ್ಲ ಎಂದು ಅನ್ಸಿಫಾ ಹೇಳಿದ್ದಾರೆ.

ಆರೋಪಿ ಶಫೀಕ್ ಪತ್ನಿ ಅನ್ಸಿಫಾ ಪ್ರತಿಕ್ರಿಯೆ

ಬೆಳ್ಳಾರೆ ಪೊಲೀಸ್ ಠಾಣೆಯಲ್ಲೇ ವೈದ್ಯರು ಆರೋಪಿಗಳ ಆರೋಗ್ಯ ತಪಾಸಣೆ ನಡೆಸಿದ್ದು, ಪುತ್ತೂರು ನ್ಯಾಯಾಲಯಕ್ಕೆ ಹಾಜರು ಪಡಿಸುತ್ತಾರೆಂದು ತಿಳಿದು ಬಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಜೆ ಪ್ರವೀಣ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಲಿದ್ದಾರೆ. ಪೊಲೀಸರಿಂದ ಬಂಧಿಸಲ್ಪಟ್ಟ ಬೆಳ್ಳಾರೆ ಮೂಲದ ಶಫೀಕ್ ಕೆಲಸ ಮಾಡುತ್ತಿದ್ದ, ಗುತ್ತಿಗಾರಿನ ಅಡಿಕೆ ಅಂಗಡಿಯನ್ನು ಆಕ್ರೋಶಿತರು ಧ್ವಂಸಗೊಳಿಸಿದ್ದಾರೆ. ಗುತ್ತಿಗಾರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಇದನ್ನೂ ಓದಿ: ಭಯೋತ್ಪಾದನೆ ಹತ್ತಿಕ್ಕಲು ಯಾವುದೇ ಮಾದರಿಯಾದರೂ ಜಾರಿ ಮಾಡುತ್ತೇವೆ: ಸಚಿವ ಆರ್. ಅಶೋಕ್

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.