ETV Bharat / state

ಸಿಪಿಸಿಆರ್‌ಐ ಮುಚ್ಚೋದಕ್ಕೆ ಬಿಡುವುದಿಲ್ಲ.. ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಭರವಸೆ - ಡಬ ತಾಲೂಕಿನ ನೆಟ್ಟಣ ಕಿದು ಕೇಂದ್ರೀಯ ಕೃಷಿ ಸಂಶೋಧನಾ ಕೇಂದ್ರ

ಸಿಪಿಸಿಆರ್‌ಐನಲ್ಲಿ ನಡೆಯುತ್ತಿರುವ ಕೃಷಿ ಮೇಳಕ್ಕೆ ಭೇಟಿ ನೀಡಿ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಎಲ್ಲರಿಗೂ ತಿಳಿದಿರುವಂತೆ ಅರಣ್ಯ ಇಲಾಖೆ ಹಾಗೂ ಸಂಶೋಧನಾ ಕೇಂದ್ರದಿಂದ ಕೆಲವು ಕಾನೂನಾತ್ಮಕ ತೊಡಕುಗಳು ಎದುರಾಗಿವೆ. ಇದನ್ನೆಲ್ಲ ಕೂಡಲೇ ಸರಿಪಡಿಸುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ‌ ಎಂದರು.

ನಳಿನ್ ಕುಮಾರ್ ಕಟೀಲ್,
author img

By

Published : Oct 13, 2019, 9:01 PM IST

ದಕ್ಷಿಣ ಕನ್ನಡ: ಕಡಬ ತಾಲೂಕಿನ ನೆಟ್ಟಣ ಕಿದು ಕೇಂದ್ರೀಯ ಕೃಷಿ ಸಂಶೋಧನಾ ಕೇಂದ್ರ ಸಿಪಿಸಿಆರ್‌ಐನ ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಸಿಪಿಸಿಆರ್‌ಐನಲ್ಲಿ ನಡೆಯುತ್ತಿರುವ ಕೃಷಿ ಮೇಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಎಲ್ಲರಿಗೂ ತಿಳಿದಿರುವಂತೆ ಅರಣ್ಯ ಇಲಾಖೆ ಹಾಗೂ ಸಂಶೋಧನಾ ಕೇಂದ್ರದಿಂದ ಕೆಲವು ಕಾನೂನಾತ್ಮಕ ತೊಡಕುಗಳು ಎದುರಾಗಿವೆ. ಇದನ್ನೆಲ್ಲ ಕೂಡಲೇ ಸರಿಪಡಿಸುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ‌ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್..

ಎಲ್ಲಾ ಸಮಸ್ಯೆಗಳನ್ನು ಸರಿಪಡಿಸಿ ಈ ಸಂಸ್ಥೆಯನ್ನು ಕರ್ನಾಟಕದ ಕೃಷಿ ಸಂಶೋಧನಾ ಯುನಿವರ್ಸಿಟಿಯಾಗಿ ಉನ್ನತೀಕರಿಸಿ, ಕೃಷಿಯ ಬಗ್ಗೆ ಸಂಶೋಧನೆ ಮಾಡುವಂತಹ ಕೃಷಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಅನುಕೂಲಕರವಾದ ರೀತಿಯಲ್ಲಿ ಬೇಕಾದ ವ್ಯವಸ್ಥೆಗಳನ್ನು ಕಲ್ಪಿಸಲಾಗುವುದು ಎಂದರು.

ಇನ್ನು, ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಈ ಪ್ರದೇಶಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ ಹಿನ್ನೆಲೆ, ಅವರಿಗೆ ಬಿಜೆಪಿ ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿದರು. ಕಾರ್ಯಕ್ರಮದಲ್ಲಿ ಸುಳ್ಯ ಶಾಸಕ ಎಸ್.ಅಂಗಾರ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ: ಕಡಬ ತಾಲೂಕಿನ ನೆಟ್ಟಣ ಕಿದು ಕೇಂದ್ರೀಯ ಕೃಷಿ ಸಂಶೋಧನಾ ಕೇಂದ್ರ ಸಿಪಿಸಿಆರ್‌ಐನ ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಸಿಪಿಸಿಆರ್‌ಐನಲ್ಲಿ ನಡೆಯುತ್ತಿರುವ ಕೃಷಿ ಮೇಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಎಲ್ಲರಿಗೂ ತಿಳಿದಿರುವಂತೆ ಅರಣ್ಯ ಇಲಾಖೆ ಹಾಗೂ ಸಂಶೋಧನಾ ಕೇಂದ್ರದಿಂದ ಕೆಲವು ಕಾನೂನಾತ್ಮಕ ತೊಡಕುಗಳು ಎದುರಾಗಿವೆ. ಇದನ್ನೆಲ್ಲ ಕೂಡಲೇ ಸರಿಪಡಿಸುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ‌ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್..

ಎಲ್ಲಾ ಸಮಸ್ಯೆಗಳನ್ನು ಸರಿಪಡಿಸಿ ಈ ಸಂಸ್ಥೆಯನ್ನು ಕರ್ನಾಟಕದ ಕೃಷಿ ಸಂಶೋಧನಾ ಯುನಿವರ್ಸಿಟಿಯಾಗಿ ಉನ್ನತೀಕರಿಸಿ, ಕೃಷಿಯ ಬಗ್ಗೆ ಸಂಶೋಧನೆ ಮಾಡುವಂತಹ ಕೃಷಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಅನುಕೂಲಕರವಾದ ರೀತಿಯಲ್ಲಿ ಬೇಕಾದ ವ್ಯವಸ್ಥೆಗಳನ್ನು ಕಲ್ಪಿಸಲಾಗುವುದು ಎಂದರು.

ಇನ್ನು, ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಈ ಪ್ರದೇಶಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ ಹಿನ್ನೆಲೆ, ಅವರಿಗೆ ಬಿಜೆಪಿ ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿದರು. ಕಾರ್ಯಕ್ರಮದಲ್ಲಿ ಸುಳ್ಯ ಶಾಸಕ ಎಸ್.ಅಂಗಾರ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Intro:ಕಡಬ

ರಾಜ್ಯದ ಏಕೈಕ ಹಾಗೂ ಪ್ರಮುಖವಾದ ಕಡಬ ತಾಲೂಕಿನ ನೆಟ್ಟಣ ಕಿದು ಕೇಂದ್ರೀಯ ಕೃಷಿ ಸಂಶೋಧನಾ ಕೇಂದ್ರ ಸಿ.ಪಿ.ಸಿ.ಆರ್ .ಐ ಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ. ಎಲ್ಲರಿಗೂ ತಿಳಿದಿರುವಂತೆ ಅರಣ್ಯ ಇಲಾಖೆಯ ಕಡೆಯಿಂದ ಹಾಗೂ ಸಂಶೋಧನಾ ಕೇಂದ್ರದ ಕಡೆಯಿಂದ ಕೆಲವು ಕಾನೂನಾತ್ಮಕ ತೊಡಕುಗಳು ಎದುರಾಗಿದೆ ಇದನ್ನೆಲ್ಲ ಕೂಡಲೇ ಸರಿಪಡಿಸುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ‌. ಮತ್ತು ಆ ತೊಡಕುಗಳನ್ನು ನಿವಾರಿಸಿ ಕರ್ನಾಟಕದ ಕೃಷಿ ಸಂಶೋಧನಾ ಯುನಿವರ್ಸಿಟಿ ಆಗಿಯೂ ಈ ಸಂಸ್ಥೆಯನ್ನು ಉನ್ನತೀಕರಿಸಿ ಕೃಷಿಯ ಬಗ್ಗೆ ಸಂಶೋಧನೆ ಮಾಡುವಂತಹ ಕೃಷಿಕರಿಗೆ,ವಿದ್ಯಾರ್ಥಿಗಳಿಗೆ ಅನುಕೂಲಕರವಾದ ರೀತಿಯಲ್ಲಿ ಬೇಕಾದ ವ್ಯವಸ್ಥೆಗಳನ್ನು ಕಲ್ಪಿಸಲಾಗುವುದು ಎಂದು ದಕ್ಷಿಣ ಕನ್ನಡ ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ರವರು ಹೇಳಿದರು.

ಅವರು ಕಡಬ ತಾಲೂಕಿನ ನೆಟ್ಟಣ ಕಿದು ಕೇಂದ್ರೀಯ ಕೃಷಿ ಸಂಶೋಧನಾ ಕೇಂದ್ರ ಸಿ.ಪಿ.ಸಿ.ಆರ್.ಐ ನಲ್ಲಿ ನಡೆಯುತ್ತಿರುವ ಕೃಷಿ ಮೇಳದ ಎರಡನೇ ದಿನವಾದ ಇಂದು ಕೃಷಿ ಮೇಳಕ್ಕೆ ಭೇಟಿ ನೀಡಿ ಮಾತನಾಡಿದರು. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಈ ಪ್ರದೇಶಕ್ಕೆ ಮೊದಲ ಬಾರಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಅವರಿಗೆ ಅದ್ದೂರಿ ಸ್ವಾಗತವನ್ನು ನೀಡಿದರು. ಕಾರ್ಯಕ್ರಮದಲ್ಲಿ ಸುಳ್ಯ ಶಾಸಕ ಎಸ್ ಅಂಗಾರ ಸೇರಿದಂತೆ ಪ್ರಮುಖರು ಹಾಗೂ ಸಿ.ಪಿ.ಸಿ.ಆರ್.ಐ ನ ವಿಜ್ಞಾನಿಗಳು, ಅಧಿಕಾರಿಗಳು, ಉಪಸ್ಥಿತರಿದ್ದರು.Body:ಬೈಟ್:- ನಳಿನ್ ಕುಮಾರ್ ಕಟೀಲ್, ದಕ್ಷಿಣ ಕನ್ನಡ ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರು.Conclusion:ಪ್ರಕಾಶ್ ಕಡಬ,ಸುಳ್ಯ(ಮಂಗಳೂರು)
ETV Bharat Logo

Copyright © 2025 Ushodaya Enterprises Pvt. Ltd., All Rights Reserved.