ETV Bharat / state

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ ನಿರ್ಬಂಧ ಮತ್ತೆ ಎರಡು ದಿನ ಮುಂದುವರಿಕೆ

author img

By

Published : Aug 2, 2022, 8:01 PM IST

ಕೊಲೆ ಪ್ರಕರಣದಿಂದ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆರಡು ದಿನ ರಾತ್ರಿ ಕರ್ಫ್ಯೂ ಮುಂದುವರೆಸಿ, ಡಿಸಿ ಆದೇಶ ಹೊರಡಿಸಿದ್ದಾರೆ.

ಮಂಗಳೂರು
ಮಂಗಳೂರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ ನಿರ್ಬಂಧವನ್ನು ಮತ್ತೆ ಎರಡು ದಿನಗಳ ಕಾಲ ಮುಂದುವರಿಸಲಾಗಿದೆ. ಸರಣಿ ಹತ್ಯೆಗಳ ಹಿನ್ನೆಲೆಯಲ್ಲಿ ಕಳೆದ ಶುಕ್ರವಾರದಿಂದ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ರಾತ್ರಿ ನೈಟ್​ ಕರ್ಫ್ಯೂ ವಿಧಿಸಲಾಗಿತ್ತು. ಈ ಸಂದರ್ಭದಲ್ಲಿ ಅಂಗಡಿಗಳನ್ನು ಮುಚ್ಚುವಂತೆ ಮತ್ತು ಅವಶ್ಯಕ ಸೇವೆ ಹೊರತುಪಡಿಸಿ ಉಳಿದೆಲ್ಲವನ್ನು ಬಂದ್ ಮಾಡುವಂತೆ ಆದೇಶಿಸಲಾಗಿತ್ತು. ಈ ಆದೇಶ ನಾಳೆ ( ಬುಧವಾರ) ಬೆಳಿಗ್ಗೆಗೆ ಮುಕ್ತಾಯವಾಗುತ್ತಿದೆ. ಇದೀಗ ಪೊಲೀಸರ ವಿನಂತಿಯ ಮೇರೆಗೆ ಈ ಆದೇಶವನ್ನು ಮತ್ತೆ ಎರಡು ದಿನ (ಗುರುವಾರದವರೆಗೆ) ಮುಂದುವರಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ ನಿರ್ಬಂಧವನ್ನು ಮತ್ತೆ ಎರಡು ದಿನಗಳ ಕಾಲ ಮುಂದುವರಿಸಲಾಗಿದೆ. ಸರಣಿ ಹತ್ಯೆಗಳ ಹಿನ್ನೆಲೆಯಲ್ಲಿ ಕಳೆದ ಶುಕ್ರವಾರದಿಂದ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ರಾತ್ರಿ ನೈಟ್​ ಕರ್ಫ್ಯೂ ವಿಧಿಸಲಾಗಿತ್ತು. ಈ ಸಂದರ್ಭದಲ್ಲಿ ಅಂಗಡಿಗಳನ್ನು ಮುಚ್ಚುವಂತೆ ಮತ್ತು ಅವಶ್ಯಕ ಸೇವೆ ಹೊರತುಪಡಿಸಿ ಉಳಿದೆಲ್ಲವನ್ನು ಬಂದ್ ಮಾಡುವಂತೆ ಆದೇಶಿಸಲಾಗಿತ್ತು. ಈ ಆದೇಶ ನಾಳೆ ( ಬುಧವಾರ) ಬೆಳಿಗ್ಗೆಗೆ ಮುಕ್ತಾಯವಾಗುತ್ತಿದೆ. ಇದೀಗ ಪೊಲೀಸರ ವಿನಂತಿಯ ಮೇರೆಗೆ ಈ ಆದೇಶವನ್ನು ಮತ್ತೆ ಎರಡು ದಿನ (ಗುರುವಾರದವರೆಗೆ) ಮುಂದುವರಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ದ.ಕ ಜಿಲ್ಲೆಯಾದ್ಯಂತ ನೈಟ್​ ಕರ್ಫ್ಯೂ ಮತ್ತೆ ಎರಡು ದಿನ ಮುಂದುವರಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.