ETV Bharat / state

ಮಂಗಳೂರಿನಲ್ಲಿ ಯಾರಲ್ಲೂ ಕೊರೊನಾ ವೈರಸ್ ಕಂಡುಬಂದಿಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ - No one coronavirus positive cases in DakshinaKannada district,

ಕೊರೊನಾ ವೈರಸ್ ಕರ್ನಾಟಕಕ್ಕೆ ಕಾಲಿಟ್ಟಿದೆ. ಅಮೆರಿಕದಿಂದ ಬೆಂಗಳೂರಿಗೆ ಬಂದಿದ್ದ ಟೆಕಿಯ ಕುಟುಂಬ ಸದಸ್ಯರನ್ನು ಈಗಾಗಲೇ ಪ್ರತ್ಯೇಕಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ನಡುವೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಾರಕ ರೋಗದ ಬಗ್ಗೆ ಸಾಕಷ್ಟು ಆತಂಕಗಳು ಕಂಡು ಬರ್ತಿವೆ. ಈ ಬಗ್ಗೆ ಆಯಾ ಜಿಲ್ಲಾಡಳಿತ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ.

No one coronavirus positive cases, No one coronavirus positive cases in DakshinaKannada district, No one coronavirus positive cases news, ಕೊರೊನಾ ವೈರಸ್​ ಪತ್ತೆಯಾಗಿಲ್ಲ, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್​ ಪತ್ತೆಯಾಗಿಲ್ಲ, ಕೊರೊನಾ ವೈರಸ್​ ಪತ್ತೆಯಾಗಿಲ್ಲ ಸುದ್ದಿ,
ಮಂಗಳೂರಿನಲ್ಲಿ ಯಾರಿಗೂ ಕೊರೊನಾ ವೈರಸ್​ ಹರಡಿಲ್ಲವೆಂದ ಜಿಲ್ಲಾಧಿಕಾರಿ ಸಿಂಧೂ
author img

By

Published : Mar 11, 2020, 9:23 PM IST

ಮಂಗಳೂರು: ಕೊರೊನಾ ವೈರಸ್ ಸೋಂಕು ಶಂಕೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ನಾಪತ್ತೆಯಾಗಿ ಬಳಿಕ ಪತ್ತೆಯಾದ ವ್ಯಕ್ತಿ ಸೇರಿದಂತೆ ದ.ಕ ಜಿಲ್ಲೆಯಲ್ಲಿ ಯಾರಲ್ಲೂ ಕೊರೊನಾ ಸೋಂಕು ಪತ್ತೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಮಾತನಾಡಿದ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಜನರ ಆತಂಕವನ್ನು ದೂರ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಈವರೆಗೆ 49 ಮಂದಿ ಪ್ರಯಾಣಿಕರನ್ನು ಪರೀಕ್ಷೆಗೊಳಪಡಿಸಲಾಗಿದೆ. ಇವರಲ್ಲಿ 10 ಮಂದಿಯ ಗಂಟಲಿನ ದ್ರವವನ್ನು ಪರೀಕ್ಷೆಗೆ ಲ್ಯಾಬೊರೇಟರಿಗೆ ಕಳುಹಿಸಲಾಗಿತ್ತು. ಇವರಲ್ಲಿ 7 ಮಂದಿಯ ವರದಿ ಬಂದಿದ್ದು, ಯಾರಲ್ಲೂ ಕೊರೊನಾ ಸೋಂಕು ಇಲ್ಲ ಎಂಬುದು ದೃಢಪಟ್ಟಿದೆ ಎಂದು ತಿಳಿಸಿದರು.

ಮಂಗಳೂರು ವಿಮಾನ ನಿಲ್ದಾಣ ಮತ್ತು ಬಂದರಿನಲ್ಲಿ ವಿದೇಶದಿಂದ ಬರುವ ಪ್ರಯಾಣಿಕರ ತಪಾಸಣೆ ನಡೆಸಲಾಗುತ್ತಿದೆ. ಹಡಗಿನಲ್ಲಿ ಬರುವ ಪ್ರಯಾಣಿಕರಿಗೆ ಮಂಗಳೂರು ಪ್ರವೇಶ ನಿಷೇಧಿಸಲಾಗಿದೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರತಿದಿನ 2 ಅಂತರರಾಷ್ಟ್ರೀಯ ವಿಮಾನಗಳು ಬರುತ್ತಿದ್ದು, ಬರುವ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿಯೇ ತಪಾಸಣೆ ನಡೆಸಲಾಗುತ್ತದೆ ಎಂದರು.

ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಜ್ವರ, ಕೆಮ್ಮು, ಶೀತ ಕಂಡುಬಂದರೆ ಮಾತ್ರ ವೈದ್ಯಕೀಯ ನಿಗಾ ಇಡಲಾಗುತ್ತಿದೆ. ಜಿಲ್ಲೆಗೆ ಬಂದ ವಿದೇಶಿ ಪ್ರಯಾಣಿಕರು 14 ದಿನಗಳ ಕಾಲ ಆರೋಗ್ಯದ ಬಗ್ಗೆ ನಿಗಾ ಇರಿಸಬೇಕು. ಯಾವುದೇ ಸಮಸ್ಯೆ ಬಂದಲ್ಲಿ ಆರೋಗ್ಯ ಇಲಾಖೆಯನ್ನು ಸಂಪರ್ಕಿಸಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.

ಮಂಗಳೂರು: ಕೊರೊನಾ ವೈರಸ್ ಸೋಂಕು ಶಂಕೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ನಾಪತ್ತೆಯಾಗಿ ಬಳಿಕ ಪತ್ತೆಯಾದ ವ್ಯಕ್ತಿ ಸೇರಿದಂತೆ ದ.ಕ ಜಿಲ್ಲೆಯಲ್ಲಿ ಯಾರಲ್ಲೂ ಕೊರೊನಾ ಸೋಂಕು ಪತ್ತೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಮಾತನಾಡಿದ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಜನರ ಆತಂಕವನ್ನು ದೂರ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಈವರೆಗೆ 49 ಮಂದಿ ಪ್ರಯಾಣಿಕರನ್ನು ಪರೀಕ್ಷೆಗೊಳಪಡಿಸಲಾಗಿದೆ. ಇವರಲ್ಲಿ 10 ಮಂದಿಯ ಗಂಟಲಿನ ದ್ರವವನ್ನು ಪರೀಕ್ಷೆಗೆ ಲ್ಯಾಬೊರೇಟರಿಗೆ ಕಳುಹಿಸಲಾಗಿತ್ತು. ಇವರಲ್ಲಿ 7 ಮಂದಿಯ ವರದಿ ಬಂದಿದ್ದು, ಯಾರಲ್ಲೂ ಕೊರೊನಾ ಸೋಂಕು ಇಲ್ಲ ಎಂಬುದು ದೃಢಪಟ್ಟಿದೆ ಎಂದು ತಿಳಿಸಿದರು.

ಮಂಗಳೂರು ವಿಮಾನ ನಿಲ್ದಾಣ ಮತ್ತು ಬಂದರಿನಲ್ಲಿ ವಿದೇಶದಿಂದ ಬರುವ ಪ್ರಯಾಣಿಕರ ತಪಾಸಣೆ ನಡೆಸಲಾಗುತ್ತಿದೆ. ಹಡಗಿನಲ್ಲಿ ಬರುವ ಪ್ರಯಾಣಿಕರಿಗೆ ಮಂಗಳೂರು ಪ್ರವೇಶ ನಿಷೇಧಿಸಲಾಗಿದೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರತಿದಿನ 2 ಅಂತರರಾಷ್ಟ್ರೀಯ ವಿಮಾನಗಳು ಬರುತ್ತಿದ್ದು, ಬರುವ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿಯೇ ತಪಾಸಣೆ ನಡೆಸಲಾಗುತ್ತದೆ ಎಂದರು.

ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಜ್ವರ, ಕೆಮ್ಮು, ಶೀತ ಕಂಡುಬಂದರೆ ಮಾತ್ರ ವೈದ್ಯಕೀಯ ನಿಗಾ ಇಡಲಾಗುತ್ತಿದೆ. ಜಿಲ್ಲೆಗೆ ಬಂದ ವಿದೇಶಿ ಪ್ರಯಾಣಿಕರು 14 ದಿನಗಳ ಕಾಲ ಆರೋಗ್ಯದ ಬಗ್ಗೆ ನಿಗಾ ಇರಿಸಬೇಕು. ಯಾವುದೇ ಸಮಸ್ಯೆ ಬಂದಲ್ಲಿ ಆರೋಗ್ಯ ಇಲಾಖೆಯನ್ನು ಸಂಪರ್ಕಿಸಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.