ETV Bharat / state

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವೃದ್ಧ ಆತ್ಯಹತ್ಯೆಗೆ ಶರಣು

author img

By

Published : Dec 18, 2019, 11:01 PM IST

ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ದಾಸಕೋಡಿ ನಿವಾಸಿ ನಾರಾಯಣ ನಾಯ್ಕ್ (75) ಬುಧವಾರ ಸಂಜೆ ಮನೆಯ ಸಮೀಪದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

older-people-who-have-committed-suicide-due-to-mental-depression-in-putthuru
ಮಾನಸಿಕ ಖಿನ್ನತೆಯಿಂದ ಆತ್ಯಹತ್ಯೆಗೆ ಶರಣಾದ ವೃದ್ಧ.

ಮಂಗಳೂರು: ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ದಾಸಕೋಡಿ ನಿವಾಸಿ ನಾರಾಯಣ ನಾಯ್ಕ್ (75 ) ಇಂದು ಸಂಜೆ ಮನೆಯ ಸಮೀಪದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ವ್ಯಕ್ತಿ 10-12 ವರ್ಷಗಳಿಂದ ಅಪಸ್ಮಾರ ಮತ್ತು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗ್ತಿದ್ದು, ಸುಮಾರು ವರ್ಷಗಳಿಂದ ಔಷಧಿಯನ್ನು ಕೊಡಿಸಿದ್ದರೂ ಗುಣಮುಖರಾಗಿರಲಿಲ್ಲ. ಇದೇ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ಬುಧವಾರ ಸಂಜೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಮೃತರ ಪತ್ನಿ 2 ವರ್ಷದ ಹಿಂದೆ ತೀರಿಕೊಂಡಿದ್ದರೆಂದು ತಿಳಿದು ಬಂದಿದ್ದು, ಇವರು 5 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಪುತ್ತೂರು ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷರಾದ ಶ್ರೀಧರ್, ಹೆಡ್​ ಕಾನ್ಸ್​ಟೇಬಲ್ ಜಯರಾಮ ಭೇಟಿ ನೀಡಿ ಮೃತದೇಹದ ಮಹಜರು ಮಾಡಿ ಮರಣೋತ್ತರ ಪರೀಕ್ಷೆಗೆ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಈ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ದಾಸಕೋಡಿ ನಿವಾಸಿ ನಾರಾಯಣ ನಾಯ್ಕ್ (75 ) ಇಂದು ಸಂಜೆ ಮನೆಯ ಸಮೀಪದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ವ್ಯಕ್ತಿ 10-12 ವರ್ಷಗಳಿಂದ ಅಪಸ್ಮಾರ ಮತ್ತು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗ್ತಿದ್ದು, ಸುಮಾರು ವರ್ಷಗಳಿಂದ ಔಷಧಿಯನ್ನು ಕೊಡಿಸಿದ್ದರೂ ಗುಣಮುಖರಾಗಿರಲಿಲ್ಲ. ಇದೇ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ಬುಧವಾರ ಸಂಜೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಮೃತರ ಪತ್ನಿ 2 ವರ್ಷದ ಹಿಂದೆ ತೀರಿಕೊಂಡಿದ್ದರೆಂದು ತಿಳಿದು ಬಂದಿದ್ದು, ಇವರು 5 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಪುತ್ತೂರು ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷರಾದ ಶ್ರೀಧರ್, ಹೆಡ್​ ಕಾನ್ಸ್​ಟೇಬಲ್ ಜಯರಾಮ ಭೇಟಿ ನೀಡಿ ಮೃತದೇಹದ ಮಹಜರು ಮಾಡಿ ಮರಣೋತ್ತರ ಪರೀಕ್ಷೆಗೆ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಈ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:Body:ಮನೆಯಂಗಳದ ಬದಿಯ ಮರಕ್ಕೆ ಏಣಿ ಹತ್ತಿ ನೈಲಾನ್ ಹಗ್ಗದಿಂದ ಆತ್ಮಹತ್ಯೆಗೆ ಶರಣಾದ ವೃದ್ಧ. ಪುತ್ತೂರು ತಾಲೂಕಿನ ಕೋಡಿ0ಬಾಡಿ ಗ್ರಾಮದ ಮಠ0ತಬೆಟ್ಟು ದಾಸಕೋಡಿ ನಿವಾಸಿ ನಾರಾಯಣ ನಾಯ್ಕ್ 75 ವರ್ಷದ ವೃದ್ಧ ಇಂದು ಸಂಜೆ ಮನೆಯ ಸಮೀಪದ ಮರಕ್ಕೆ ಮಾನಸಿಕವಾಗಿ ನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ವೃದ್ಧರಿಗೆ 10-12 ವರ್ಷಗಳಿಂದ ಅಪಸ್ಮಾರ ಮತ್ತು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಸುಮಾರು ವರ್ಷಗಳಿಂದ ಮದ್ದು ಮಾಡಿದ್ದರೂ ಗುಣಮುಖರಾಗಿರಲಿಲ್ಲ. ಇದೆ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ಇಂದು ಸಂಜೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯ ಹತ್ತಿರದ ಮರಕ್ಕೆ ಏಣಿ ಇಟ್ಟು ಹತ್ತಿ ನೈಲಾನ್ ಹಗ್ಗದಿಂದ ಕುತ್ತಿಗೆಗೆ ಹಾಕಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ತಿಳಿದು ಬಂದಿದೆ. ಮೃತರ ಪತ್ನಿ ಸುಮಾರು 2 ವರ್ಷದ ಮೊದಲು ತೀರಿಕೊಂಡಿದ್ದರೆಂದು ತಿಳಿದು ಬಂದಿದೆ. ಮೃತರು 5 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಪುತ್ತೂರು ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷರಾದ ಶ್ರೀಧರ್. ಹೆಡ್ಕಾನ್ಸ್ಟೇಬಲ್ ಜಯರಾಮ ಭೇಟಿ ನೀಡಿ ಶವ ಮಹಜರು ಮಾಡಿ ಮರಣೋತ್ತರ ಪರೀಕ್ಷೆಗೆ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕಲಿಸಿಕೊಟ್ಟಿರುತಾರೆ. ಪುತ್ತೂರು ನಗರ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.