ETV Bharat / state

ಕೇರಳದಲ್ಲಿ ಹೆಚ್ಚುತ್ತಿರುವ ಕೊರೊನಾ: ಕಾಸರಗೋಡು-ಮಂಗಳೂರು ನಡುವೆ ಬಸ್ ಸಂಚಾರ ರದ್ದು

author img

By

Published : Aug 1, 2021, 12:14 AM IST

Updated : Aug 1, 2021, 7:20 AM IST

ಕೇರಳದಲ್ಲಿ ಕೊರೊನಾ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಹರಡದಂತೆ ತಡೆಯಲು ಕಾಸರಗೋಡು- ಮಂಗಳೂರು ನಡುವಿನ ಬಸ್ ಸಂಚಾರ ರದ್ದು ಸೇರಿದಂತೆ ಹಲವು ಕ್ರಮಗಳಿಗೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Bus travel will stop one week between Kasaragod to Mangalor
ಬಸ್​ ಸಂಚಾರ ಸ್ಥಗಿತ

ಮಂಗಳೂರು: ನೆರೆಯ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆ ಮತ್ತು ಮಂಗಳೂರು ನಡುವಿನ KSRTC ಮತ್ತು ಎಲ್ಲಾ ಖಾಸಗಿ ಬಸ್​ಗಳ ಸಂಚಾರವನ್ನು ಇಂದಿನಿಂದ ಅಗಸ್ಟ್​ 07 ರವರೆಗೆ ನಿರ್ಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.

ಕೇರಳದಲ್ಲಿ ಕೊರೊನಾ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಹರಡದಂತೆ ತಡೆಯಲು ಕಾಸರಗೋಡು- ಮಂಗಳೂರು ನಡುವಿನ ಬಸ್ ಸಂಚಾರ ರದ್ದು ಸೇರಿದಂತೆ ಹಲವು ಕ್ರಮಗಳಿಗೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ದಿನಂಪ್ರತಿ ಪ್ರಯಾಣಿಸುವವರು, ಕಾಲೇಜು ವಿದ್ಯಾರ್ಥಿಗಳು ಕೋವಿಡ್ ಲಸಿಕೆ ಪಡೆದಿದ್ದರೂ (2 ಡೋಸ್ ಆಗಿದ್ದರೂ ) 72 ಗಂಟೆಗಳ ಒಳಗೆ ಮಾಡಿಸಿರುವ RT - PCR ಪರೀಕ್ಷೆಯ ನೆಗಟಿವ್ ವರದಿಯ ಆಧಾರದಲ್ಲಿ 7 ದಿನಗಳ ಅವಧಿಗೆ ಅನುಮತಿಸಲಾಗುವುದು. ಕೇರಳದಿಂದ / ಮಹಾರಾಷ್ಟ್ರದಿಂದ, ಇತರ ಹೊರ ರಾಜ್ಯದಿಂದ ನರ್ಸಿಂಗ್ / ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು RT PCR ಪರೀಕ್ಷೆಯ ನೆಗೆಟಿವ್ ವರದಿ ತುರುವುದರ ಜೊತೆಗೆ ಮಂಗಳೂರಿಗೆ ಬಂದ ಬಳಿಕ ಒಂದು ವಾರದ ಕಡ್ಡಾಯ ಕ್ವಾರಂಟೈನ್ ಗೆ ಒಳಪಡಬೇಕಾಗಿದೆ.

ಏಳು ದಿನದ ಬಳಿಕ ಮತ್ತೊಮ್ಮೆ ಕೋವಿಡ್ ತಪಾಸಣೆಗೆ ಒಳಪಡಬೇಕು. RT - PCR ಪರೀಕ್ಷೆಯ ನೆಗೆಟಿವ್ ವರದಿಯನ್ನು ತರದೇ ರೈಲು ಮೂಲಕ ಗಡಿ ಪ್ರವೇಶಿಸಿದ ವ್ಯಕ್ತಿಗಳು ರೈಲ್ವೇ ಸ್ಟೇಷನ್​ಗಳಲ್ಲಿ ಕೋವಿಡ್ ತಪಾಸಣೆಗೆ ಒಳಪಡಬೇಕು. ತಪಾಸಣೆಯ ವೇಳೆ ಪಾಸಿಟಿವ್ ಬಂದಲ್ಲಿ / ವರದಿ ಬರುವವರೆಗೆ ಕೋವಿಡ್ ಕೇರ್ ಸೆಂಟರ್​ನಲ್ಲಿ ಕ್ವಾರಂಟೈನ್ ಆಗುವುದು ಕಡ್ಡಾಯವಾಗಿರುತ್ತದೆ .

ಈ ಬಗ್ಗೆ ಸಂಬಂಧಪಟ್ಟ ತಹಶೀಲ್ದಾರರು ಕೋವಿಡ್ ಕೇರ್ ಸೆಂಟರ್ ತೆರೆಯಲು ಕ್ರಮ ವಹಿಸುಬೇಕು. ಚೆಕ್ ಪೋಸ್ಟ್​ಗಳಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಿ 24 x 7 ತಪಾಸಣೆ ನಡೆಸುವ ಬಗ್ಗೆ ಸಂಬಂಧಪಟ್ಟ ಉಪ ವಿಭಾಗಧಿಕಾರಿ ಹಾಗೂ ಉಪ ಪೊಲೀಸ್ ಅಧೀಕ್ಷಕರು ಆಗಾಗ್ಗೆ ಸ್ಥಳಕ್ಕೆ ಭೇಟಿ ನೀಡಿ ಖಾತ್ರಿಪಡಿಸಿಕೊಳ್ಳಬೇಕು .ವೈದ್ಯಕೀಯ ತುರ್ತು ಸೇವೆ , ಆ್ಯಂಬುಲೆನ್ಸ್ ಹಾಗೂ ಅಂತರ್​ರಾಜ್ಯ ಸರಕು ಸಾಮಾಗ್ರಿಗಳ ಸಾಗಾಟಕ್ಕೆ ಮೇಲ್ಕಂಡ ನಿರ್ಬಂಧವು ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಇನ್ನು ಜಿಲ್ಲೆಯಾದ್ಯಂತ ಎಲ್ಲಾ ಸಾಮಾಜಿಕ ,ರಾಜಕೀಯ , ಸಾಂಸ್ಕೃತಿಕ ,ಧಾರ್ಮಿಕ ಕಾರ್ಯಕ್ರಮಗಳು , ಸಮಾರಂಭಗಳು ಹಾಗೂ ಉತ್ಸವಗಳನ್ನು ನಿರ್ಬಂಧಿಸಲಾಗಿದೆ . ಮದುವೆಯನ್ನು ಗರಿಷ್ಠ 50 ಜನರ ಪರಿಮಿತಿಗೊಳಪಟ್ಟು ಸ್ಥಳೀಯ ಆಡಳಿತದ ಪ್ರಾಧಿಕಾರಗಳಿಂದ ಪೂರ್ವಾನುಮತಿ ಪಡೆದು ಆಯೋಜಿಸಲು ಅನುಮತಿಸಿದೆ . ಸ್ಥಳೀಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಂದಾಯ ಅಧಿಕಾರಿಗಳು ಸಮಾರಂಭಕ್ಕೆ ಭೇಟಿ ನೀಡಿ ಕೋವಿಡ್ ನಿಯಮಾವಳಿ ಉಲ್ಲಂಘನೆ ಆಗದಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ಪೂಜಾ ಸ್ಥಳಗಳಾದ ದೇವಾಲಯಗಳು , ಮಸೀದಿಗಳು, ಚರ್ಚುಗಳು, ಗುರುದ್ವಾರಗಳು ಮತ್ತು ಇತರ ಧಾರ್ಮಿಕ ಸ್ಥಳಗಳಲ್ಲಿ ಜಾತ್ರೆಗಳನ್ನು ಧಾರ್ಮಿಕ ಉತ್ಸವಗಳು, ಮೆರವಣಿಗೆಗಳನ್ನು ನಿರ್ಬಂಧಿಸಿದೆ .

ಇದನ್ನು ಓದಿ:'ಕೇರಳದಿಂದ ದ.ಕ ಜಿಲ್ಲೆಗೆ ಪ್ರತಿನಿತ್ಯ ಬರುವವರು 7 ದಿನಕ್ಕೊಮ್ಮೆ ನೆಗೆಟಿವ್ ರಿಪೋರ್ಟ್ ತೋರಿಸಬೇಕು'

ಮಂಗಳೂರು: ನೆರೆಯ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆ ಮತ್ತು ಮಂಗಳೂರು ನಡುವಿನ KSRTC ಮತ್ತು ಎಲ್ಲಾ ಖಾಸಗಿ ಬಸ್​ಗಳ ಸಂಚಾರವನ್ನು ಇಂದಿನಿಂದ ಅಗಸ್ಟ್​ 07 ರವರೆಗೆ ನಿರ್ಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.

ಕೇರಳದಲ್ಲಿ ಕೊರೊನಾ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಹರಡದಂತೆ ತಡೆಯಲು ಕಾಸರಗೋಡು- ಮಂಗಳೂರು ನಡುವಿನ ಬಸ್ ಸಂಚಾರ ರದ್ದು ಸೇರಿದಂತೆ ಹಲವು ಕ್ರಮಗಳಿಗೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ದಿನಂಪ್ರತಿ ಪ್ರಯಾಣಿಸುವವರು, ಕಾಲೇಜು ವಿದ್ಯಾರ್ಥಿಗಳು ಕೋವಿಡ್ ಲಸಿಕೆ ಪಡೆದಿದ್ದರೂ (2 ಡೋಸ್ ಆಗಿದ್ದರೂ ) 72 ಗಂಟೆಗಳ ಒಳಗೆ ಮಾಡಿಸಿರುವ RT - PCR ಪರೀಕ್ಷೆಯ ನೆಗಟಿವ್ ವರದಿಯ ಆಧಾರದಲ್ಲಿ 7 ದಿನಗಳ ಅವಧಿಗೆ ಅನುಮತಿಸಲಾಗುವುದು. ಕೇರಳದಿಂದ / ಮಹಾರಾಷ್ಟ್ರದಿಂದ, ಇತರ ಹೊರ ರಾಜ್ಯದಿಂದ ನರ್ಸಿಂಗ್ / ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು RT PCR ಪರೀಕ್ಷೆಯ ನೆಗೆಟಿವ್ ವರದಿ ತುರುವುದರ ಜೊತೆಗೆ ಮಂಗಳೂರಿಗೆ ಬಂದ ಬಳಿಕ ಒಂದು ವಾರದ ಕಡ್ಡಾಯ ಕ್ವಾರಂಟೈನ್ ಗೆ ಒಳಪಡಬೇಕಾಗಿದೆ.

ಏಳು ದಿನದ ಬಳಿಕ ಮತ್ತೊಮ್ಮೆ ಕೋವಿಡ್ ತಪಾಸಣೆಗೆ ಒಳಪಡಬೇಕು. RT - PCR ಪರೀಕ್ಷೆಯ ನೆಗೆಟಿವ್ ವರದಿಯನ್ನು ತರದೇ ರೈಲು ಮೂಲಕ ಗಡಿ ಪ್ರವೇಶಿಸಿದ ವ್ಯಕ್ತಿಗಳು ರೈಲ್ವೇ ಸ್ಟೇಷನ್​ಗಳಲ್ಲಿ ಕೋವಿಡ್ ತಪಾಸಣೆಗೆ ಒಳಪಡಬೇಕು. ತಪಾಸಣೆಯ ವೇಳೆ ಪಾಸಿಟಿವ್ ಬಂದಲ್ಲಿ / ವರದಿ ಬರುವವರೆಗೆ ಕೋವಿಡ್ ಕೇರ್ ಸೆಂಟರ್​ನಲ್ಲಿ ಕ್ವಾರಂಟೈನ್ ಆಗುವುದು ಕಡ್ಡಾಯವಾಗಿರುತ್ತದೆ .

ಈ ಬಗ್ಗೆ ಸಂಬಂಧಪಟ್ಟ ತಹಶೀಲ್ದಾರರು ಕೋವಿಡ್ ಕೇರ್ ಸೆಂಟರ್ ತೆರೆಯಲು ಕ್ರಮ ವಹಿಸುಬೇಕು. ಚೆಕ್ ಪೋಸ್ಟ್​ಗಳಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಿ 24 x 7 ತಪಾಸಣೆ ನಡೆಸುವ ಬಗ್ಗೆ ಸಂಬಂಧಪಟ್ಟ ಉಪ ವಿಭಾಗಧಿಕಾರಿ ಹಾಗೂ ಉಪ ಪೊಲೀಸ್ ಅಧೀಕ್ಷಕರು ಆಗಾಗ್ಗೆ ಸ್ಥಳಕ್ಕೆ ಭೇಟಿ ನೀಡಿ ಖಾತ್ರಿಪಡಿಸಿಕೊಳ್ಳಬೇಕು .ವೈದ್ಯಕೀಯ ತುರ್ತು ಸೇವೆ , ಆ್ಯಂಬುಲೆನ್ಸ್ ಹಾಗೂ ಅಂತರ್​ರಾಜ್ಯ ಸರಕು ಸಾಮಾಗ್ರಿಗಳ ಸಾಗಾಟಕ್ಕೆ ಮೇಲ್ಕಂಡ ನಿರ್ಬಂಧವು ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಇನ್ನು ಜಿಲ್ಲೆಯಾದ್ಯಂತ ಎಲ್ಲಾ ಸಾಮಾಜಿಕ ,ರಾಜಕೀಯ , ಸಾಂಸ್ಕೃತಿಕ ,ಧಾರ್ಮಿಕ ಕಾರ್ಯಕ್ರಮಗಳು , ಸಮಾರಂಭಗಳು ಹಾಗೂ ಉತ್ಸವಗಳನ್ನು ನಿರ್ಬಂಧಿಸಲಾಗಿದೆ . ಮದುವೆಯನ್ನು ಗರಿಷ್ಠ 50 ಜನರ ಪರಿಮಿತಿಗೊಳಪಟ್ಟು ಸ್ಥಳೀಯ ಆಡಳಿತದ ಪ್ರಾಧಿಕಾರಗಳಿಂದ ಪೂರ್ವಾನುಮತಿ ಪಡೆದು ಆಯೋಜಿಸಲು ಅನುಮತಿಸಿದೆ . ಸ್ಥಳೀಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಂದಾಯ ಅಧಿಕಾರಿಗಳು ಸಮಾರಂಭಕ್ಕೆ ಭೇಟಿ ನೀಡಿ ಕೋವಿಡ್ ನಿಯಮಾವಳಿ ಉಲ್ಲಂಘನೆ ಆಗದಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ಪೂಜಾ ಸ್ಥಳಗಳಾದ ದೇವಾಲಯಗಳು , ಮಸೀದಿಗಳು, ಚರ್ಚುಗಳು, ಗುರುದ್ವಾರಗಳು ಮತ್ತು ಇತರ ಧಾರ್ಮಿಕ ಸ್ಥಳಗಳಲ್ಲಿ ಜಾತ್ರೆಗಳನ್ನು ಧಾರ್ಮಿಕ ಉತ್ಸವಗಳು, ಮೆರವಣಿಗೆಗಳನ್ನು ನಿರ್ಬಂಧಿಸಿದೆ .

ಇದನ್ನು ಓದಿ:'ಕೇರಳದಿಂದ ದ.ಕ ಜಿಲ್ಲೆಗೆ ಪ್ರತಿನಿತ್ಯ ಬರುವವರು 7 ದಿನಕ್ಕೊಮ್ಮೆ ನೆಗೆಟಿವ್ ರಿಪೋರ್ಟ್ ತೋರಿಸಬೇಕು'

Last Updated : Aug 1, 2021, 7:20 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.