ಸುಬ್ರಹ್ಮಣ್ಯ: ನಗರದ ಆದಿ ಸುಬ್ರಹ್ಮಣ್ಯ ಎಂಬಲ್ಲಿನ ರಸ್ತೆ ಬದಿಯಲ್ಲಿನ ಕಟ್ಟಡಗಳ ತೆರವು ಕಾರ್ಯಾಚರಣೆ ಇಂದು ಮಂಗಳೂರು ಎಡಿಸಿ ರೂಪ ಅವರ ಮುಂದಾಳತ್ವದ ಪೊಲೀಸ್ ರಕ್ಷಣೆಯಲ್ಲಿ ನಡೆಯಿತು.
ವ್ಯಾಪಾರಿಗಳು ಆದಿ ಸುಬ್ರಹ್ಮಣ್ಯದ ರಸ್ತೆಯ ಬದಿಯಲ್ಲಿ ಅಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುತಿದ್ದರು. ಇದು ಇಲ್ಲಿ ನಡೆಯುತ್ತಿರುವ ರಸ್ತೆ ವಿಸ್ತರಣೆಗೆ ಅಡ್ಡಿಯಾಗಿತ್ತು. ಈ ಕಾರಣಗಳಿಂದಾಗಿ ರಸ್ತೆಯ ಅಗಲೀಕರಣ ನಿಧಾನವಾಗಿ ಸಾಗುತ್ತಿತ್ತು ಎಂಬುದು ಸಾರ್ವಜನಿಕರ ಆರೋಪವಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಇಂತಹ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಯಿತು.
ಇನ್ನು ಕಟ್ಟಡ ಹಾಗೂ ಅಂಗಡಿಗಳ ತೆರವು ಕಾರ್ಯ ನಡೆಯುವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎಂಬ ಉದ್ದೇಶದಿಂದ, ಪೊಲೀಸ್ ಅಧಿಕಾರಿಗಳ ನಿಯೋಜನೆ ಮಾಡಲಾಗಿತ್ತು.