ಪುತ್ತೂರು (ದಕ್ಷಿಣ ಕನ್ನಡ): ನಗರದ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸಭಾ ಭವನದಲ್ಲಿ ಜಿಲ್ಲಾ ಪೊಲೀಸ್ ಘಟಕದ ವತಿಯಿಂದ 'ಪೊಲೀಸ್ ಕುಟುಂಬ ಸಮ್ಮಿಲನ' ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸಮಾಜದ ಆರೋಗ್ಯ ಕಾಪಾಡಲು ಹಗಲಿರುಳೆನ್ನದೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರು ಮತ್ತು ಅವರ ಕುಟುಂಬದ ಸಂತೋಷಕ್ಕಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಲರ್ ಡ್ರೆಸ್ನಲ್ಲಿ ಎಲ್ಲಾ ಪೊಲೀಸರು ಕುಟುಂಬ ಸಮೇತ ಒಂದೆಡೆ ಸೇರುವ ಅವಕಾಶ ಲಭಿಸಿತ್ತು. ಡಿವೈಎಸ್ಪಿ ಪಿ. ಗಾನ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಬಳಿಕ ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬಸ್ಥರಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ವಿವಿಧ ಆಟೋಟ ಸ್ಪರ್ಧೆಗಳು ನಡೆದವು. ಶಿಕ್ಷಕ ಬಾಲಕೃಷ್ಣ ಪೊರ್ದಾಲ್ ಉದ್ಘೋಷಕರಾಗಿ ಸಾಂಸ್ಕೃತಿಕ ಸ್ಪರ್ಧೆಗಳನ್ನು ನಡೆಸಿ ಕೊಟ್ಟರು. ಕಾರ್ಯಕ್ರಮದ ಬಳಿಕ ಭೋಜನ ವ್ಯವಸ್ಥೆ ಮಾಡಲಾಗಿತ್ತು.