ETV Bharat / state

ಪಿಎಫ್​​ಐ ಪ್ರತಿಭಟನೆ ವೇಳೆ ಲಾಠಿ ಚಾರ್ಜ್.. ಹಲವರಿಗೆ ಗಾಯ, ಉಪ್ಪಿನಂಗಡಿಯಲ್ಲಿ 144 ಸೆಕ್ಷನ್ ಜಾರಿ

PFI Protest in Dakshin Kannada: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಪಾಪ್ಯುಲರ್ ಫ್ರಂಟ್ ಸಂಘಟನೆ ಪ್ರತಿಭಟನೆ ವೇಳೆ ಪೊಲೀಸ್​ ಲಾಠಿ ಚಾರ್ಜ್​ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ 144 ಸೆಕ್ಷನ್ ಜಾರಿಯಾಗಿದೆ.

author img

By

Published : Dec 15, 2021, 9:53 AM IST

Updated : Dec 15, 2021, 2:54 PM IST

144-section-enforced-in-uppinangadi
ಪಿಎಫ್​​ಐ ಪ್ರತಿಭಟನೆ ವೇಳೆ ಲಾಠಿ ಚಾರ್ಜ್

ಉಪ್ಪಿನಂಗಡಿ(ದಕ್ಷಿಣ ಕನ್ನಡ): ಇತ್ತೀಚೆಗೆ ಉಪ್ಪಿನಂಗಡಿಯಲ್ಲಿ ನಡೆದ ತಲವಾರು​ ದಾಳಿ ಪ್ರಕರಣದ ವಿಚಾರಣೆಗೆ ಪೊಲೀಸ್ ಠಾಣೆಗೆ ಕರೆದೊಯ್ದ ಪಾಪ್ಯುಲರ್ ಫ್ರಂಟ್ ಸಂಘಟನೆ ಮುಖಂಡರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಠಾಣೆ ಎದುರು ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್​ ನಡೆಸಲಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ 144 ಸೆಕ್ಷನ್ ಜಾರಿ ಮಾಡಲಾಗಿದೆ.

ಉಪ್ಪಿನಂಗಡಿ ಪೊಲೀಸರು ಇತ್ತಿಚೆಗೆ ಉಪ್ಪಿನಂಗಡಿಯಲ್ಲಿ ನಡೆದ ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ರೀತಿ ನೋಟಿಸ್‌ ಜಾರಿಗೊಳಿಸಿ ಮೂವರು ಪಿಎಫ್ಐ ಮುಖಂಡರನ್ನು ವಿಚಾರಣೆಗಾಗಿ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಕರೆಸಿದ್ದರು. ಈ ಮುಖಂಡರ ಬಿಡುಗಡೆಗೆ ಆಗ್ರಹಿಸಿ ಮಂಗಳವಾರ ಬೆಳಗ್ಗೆಯಿಂದ ಸಂಜೆವರೆಗೂ ಪಿಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.

PFI Protest: 144 section enforced in uppinangadi
ಗಾಯಗೊಂಡವರು

ಘಟನಾ ಸ್ಥಳಕ್ಕೆ ಬಂಟ್ವಾಳ ಠಾಣಾಧಿಕಾರಿ ನಾಗರಾಜ್​ ತೆರಳಿ, ಪ್ರತಿಭಟನಾನಿರತರ ಮನವೊಲಿಸುವ ಯತ್ನಿಸಿದ್ದರೂ ಅದು ವಿಫಲವಾಗಿತ್ತು. ಇಷ್ಟೊಂದು ಜನ ಠಾಣೆಯ ಎದುರು ಸೇರಿರುವುದು ತಪ್ಪು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.

ಪೊಲೀಸ್‌ ಕರ್ತವ್ಯಕ್ಕೂ ನೀವು ಅಡ್ಡಿ ಪಡಿಸುತ್ತಿದ್ದೀರಿ. ಕೋವಿಡ್‌ ನಿಯಮಾವಳಿಯೂ ಇಲ್ಲಿ ಉಲ್ಲಂಘನೆಯಾಗುತ್ತಿದೆ. ಎಲ್ಲರೂ ಇಲ್ಲಿಂದ ತೆರಳಬೇಕು, ಪೊಲೀಸರ ಲಾಠಿ ಹಾಗೂ ಪಿಸ್ತೂಲ್‌ಗೆ ಕಮ್ಯೂನಿಟಿ ಇಲ್ಲ ಎಂದು ಎಚ್ಚರಿಕೆ ಸಂದೇಶಗಳನ್ನು ಧ್ವನಿವರ್ಧಕದ ಮೂಲಕ ನೀಡಿ ಮನವಿ ಮಾಡಿದ್ದರು. ಆದರೀ ಕೂಡ ಪ್ರತಿಭಟನಾಕಾರರು ಸ್ಥಳದಿಂದ ತೆರಳಿರಲಿಲ್ಲ, ನಂತರ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಮಾತುಕತೆ ನಡೆಸಿ ಠಾಣೆಗೆ ಕರೆಸಿದ ಓರ್ವ ಪಿಎಫ್ಐ ಮುಖಂಡನನ್ನು ಬಿಟ್ಟು ಕಳುಹಿಸಲಾಗಿತ್ತು.

ಪಿಎಫ್​​ಐ ಪ್ರತಿಭಟನೆ ವೇಳೆ ಲಾಠಿ ಚಾರ್ಜ್

ಆದರೂ ಉಳಿದ ಇಬ್ಬರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ಮುಂದುವರೆದಿತ್ತು. ರಾತ್ರಿ ಸುಮಾರು 10 ಗಂಟೆ ಸುಮಾರಿಗೆ ಪ್ರತಿಭಟನಾ ನಿರತರ ಮೇಲೆ ಏಕಾಏಕಿ ಲಾಠಿ ಬೀಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ವೇಳೆ ನಾಲ್ಕು ಮಂದಿ ಪೊಲೀಸರಿಗೂ ಗಾಯಗಳಾದರೆ, ಹಲವು ಪ್ರತಿಭಟನಾಕಾರರು ಸಹ ಗಾಯಗೊಂಡಿದ್ದಾರೆ.

ಪುತ್ತೂರು ಡಿವೈಎಸ್​​ಪಿ ಗಾನಾ ಪಿ ಕುಮಾರ್, ಬಂಟ್ವಾಳ ಗ್ರಾಮಾಂತರ ಪಿಎಸ್​​ಐ ಪ್ರಸನ್ನ, ಉಪ್ಪಿನಂಗಡಿ ಉಪನಿರೀಕ್ಷಕರಾದ ಶ್ರೀಮತಿ ಓಮನ, ಪುತ್ತೂರು ನಗರ ಠಾಣೆಯ ಸಿಬ್ಬಂದಿ ಕಿರಣ್ ಕುಮಾರ್, ಉಪ್ಪಿನಂಗಡಿ ಪೊಲೀಸ್ ಮಹಿಳಾ ಸಿಬ್ಬಂದಿ ಕುಮಾರಿ ರೇಣುಕಾ ಎಂಬುವರಿಗೆ ಗಲಭೆ ನಿಯಂತ್ರಣ ವೇಳೆಯಲ್ಲಿ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ಹಿನ್ನೆಲೆಯಲ್ಲಿ ಉಪ್ಪಿನಂಗಡಿಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಘಟನೆ ಖಂಡಿಸಿ ಪಿಎಫ್ಐ ಸಂಘಟನೆ ಇಂದು ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ.

ಇದನ್ನೂ ಓದಿ: ಸದ್ಯಕ್ಕೆ ಪ್ರಾಥಮಿಕ ಶಾಲೆಗಳ ಪುನಾರಂಭ ಬೇಡ : ಗೃಹ ವ್ಯವಹಾರಗಳ ಸಂಸದೀಯ ಸಮಿತಿಯಿಂದ ವರದಿ

ಉಪ್ಪಿನಂಗಡಿ(ದಕ್ಷಿಣ ಕನ್ನಡ): ಇತ್ತೀಚೆಗೆ ಉಪ್ಪಿನಂಗಡಿಯಲ್ಲಿ ನಡೆದ ತಲವಾರು​ ದಾಳಿ ಪ್ರಕರಣದ ವಿಚಾರಣೆಗೆ ಪೊಲೀಸ್ ಠಾಣೆಗೆ ಕರೆದೊಯ್ದ ಪಾಪ್ಯುಲರ್ ಫ್ರಂಟ್ ಸಂಘಟನೆ ಮುಖಂಡರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಠಾಣೆ ಎದುರು ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್​ ನಡೆಸಲಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ 144 ಸೆಕ್ಷನ್ ಜಾರಿ ಮಾಡಲಾಗಿದೆ.

ಉಪ್ಪಿನಂಗಡಿ ಪೊಲೀಸರು ಇತ್ತಿಚೆಗೆ ಉಪ್ಪಿನಂಗಡಿಯಲ್ಲಿ ನಡೆದ ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ರೀತಿ ನೋಟಿಸ್‌ ಜಾರಿಗೊಳಿಸಿ ಮೂವರು ಪಿಎಫ್ಐ ಮುಖಂಡರನ್ನು ವಿಚಾರಣೆಗಾಗಿ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಕರೆಸಿದ್ದರು. ಈ ಮುಖಂಡರ ಬಿಡುಗಡೆಗೆ ಆಗ್ರಹಿಸಿ ಮಂಗಳವಾರ ಬೆಳಗ್ಗೆಯಿಂದ ಸಂಜೆವರೆಗೂ ಪಿಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.

PFI Protest: 144 section enforced in uppinangadi
ಗಾಯಗೊಂಡವರು

ಘಟನಾ ಸ್ಥಳಕ್ಕೆ ಬಂಟ್ವಾಳ ಠಾಣಾಧಿಕಾರಿ ನಾಗರಾಜ್​ ತೆರಳಿ, ಪ್ರತಿಭಟನಾನಿರತರ ಮನವೊಲಿಸುವ ಯತ್ನಿಸಿದ್ದರೂ ಅದು ವಿಫಲವಾಗಿತ್ತು. ಇಷ್ಟೊಂದು ಜನ ಠಾಣೆಯ ಎದುರು ಸೇರಿರುವುದು ತಪ್ಪು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.

ಪೊಲೀಸ್‌ ಕರ್ತವ್ಯಕ್ಕೂ ನೀವು ಅಡ್ಡಿ ಪಡಿಸುತ್ತಿದ್ದೀರಿ. ಕೋವಿಡ್‌ ನಿಯಮಾವಳಿಯೂ ಇಲ್ಲಿ ಉಲ್ಲಂಘನೆಯಾಗುತ್ತಿದೆ. ಎಲ್ಲರೂ ಇಲ್ಲಿಂದ ತೆರಳಬೇಕು, ಪೊಲೀಸರ ಲಾಠಿ ಹಾಗೂ ಪಿಸ್ತೂಲ್‌ಗೆ ಕಮ್ಯೂನಿಟಿ ಇಲ್ಲ ಎಂದು ಎಚ್ಚರಿಕೆ ಸಂದೇಶಗಳನ್ನು ಧ್ವನಿವರ್ಧಕದ ಮೂಲಕ ನೀಡಿ ಮನವಿ ಮಾಡಿದ್ದರು. ಆದರೀ ಕೂಡ ಪ್ರತಿಭಟನಾಕಾರರು ಸ್ಥಳದಿಂದ ತೆರಳಿರಲಿಲ್ಲ, ನಂತರ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಮಾತುಕತೆ ನಡೆಸಿ ಠಾಣೆಗೆ ಕರೆಸಿದ ಓರ್ವ ಪಿಎಫ್ಐ ಮುಖಂಡನನ್ನು ಬಿಟ್ಟು ಕಳುಹಿಸಲಾಗಿತ್ತು.

ಪಿಎಫ್​​ಐ ಪ್ರತಿಭಟನೆ ವೇಳೆ ಲಾಠಿ ಚಾರ್ಜ್

ಆದರೂ ಉಳಿದ ಇಬ್ಬರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ಮುಂದುವರೆದಿತ್ತು. ರಾತ್ರಿ ಸುಮಾರು 10 ಗಂಟೆ ಸುಮಾರಿಗೆ ಪ್ರತಿಭಟನಾ ನಿರತರ ಮೇಲೆ ಏಕಾಏಕಿ ಲಾಠಿ ಬೀಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ವೇಳೆ ನಾಲ್ಕು ಮಂದಿ ಪೊಲೀಸರಿಗೂ ಗಾಯಗಳಾದರೆ, ಹಲವು ಪ್ರತಿಭಟನಾಕಾರರು ಸಹ ಗಾಯಗೊಂಡಿದ್ದಾರೆ.

ಪುತ್ತೂರು ಡಿವೈಎಸ್​​ಪಿ ಗಾನಾ ಪಿ ಕುಮಾರ್, ಬಂಟ್ವಾಳ ಗ್ರಾಮಾಂತರ ಪಿಎಸ್​​ಐ ಪ್ರಸನ್ನ, ಉಪ್ಪಿನಂಗಡಿ ಉಪನಿರೀಕ್ಷಕರಾದ ಶ್ರೀಮತಿ ಓಮನ, ಪುತ್ತೂರು ನಗರ ಠಾಣೆಯ ಸಿಬ್ಬಂದಿ ಕಿರಣ್ ಕುಮಾರ್, ಉಪ್ಪಿನಂಗಡಿ ಪೊಲೀಸ್ ಮಹಿಳಾ ಸಿಬ್ಬಂದಿ ಕುಮಾರಿ ರೇಣುಕಾ ಎಂಬುವರಿಗೆ ಗಲಭೆ ನಿಯಂತ್ರಣ ವೇಳೆಯಲ್ಲಿ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ಹಿನ್ನೆಲೆಯಲ್ಲಿ ಉಪ್ಪಿನಂಗಡಿಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಘಟನೆ ಖಂಡಿಸಿ ಪಿಎಫ್ಐ ಸಂಘಟನೆ ಇಂದು ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ.

ಇದನ್ನೂ ಓದಿ: ಸದ್ಯಕ್ಕೆ ಪ್ರಾಥಮಿಕ ಶಾಲೆಗಳ ಪುನಾರಂಭ ಬೇಡ : ಗೃಹ ವ್ಯವಹಾರಗಳ ಸಂಸದೀಯ ಸಮಿತಿಯಿಂದ ವರದಿ

Last Updated : Dec 15, 2021, 2:54 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.