ETV Bharat / state

ಪುತ್ತೂರಿನಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಓರ್ವನ ಬಂಧನ, ಮತ್ತೋರ್ವ ಪರಾರಿ - ಕೆಮ್ಮಿಂಜೆ ಗ್ರಾಮದಲ್ಲಿ ಗಾಂಜಾ ಮಾರಾಟ ಸುದ್ದಿ

ನೈತಾಡಿ -ಬೆದ್ರಾಳ ಸಾರ್ವಜನಿಕ ರಸ್ತೆಯಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿ ಇಬ್ಬರು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಓರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮತ್ತೋರ್ವ ಪರಾರಿಯಾಗಿದ್ದಾನೆ.

Puttur
ಪುತ್ತೂರು
author img

By

Published : Sep 23, 2020, 2:27 PM IST

ಪುತ್ತೂರು(ದ.ಕ): ತಾಲೂಕಿನ ಕೆಮ್ಮಿಂಜೆ ಗ್ರಾಮದ ನೈತಾಡಿ-ಬೆದ್ರಾಳ ಭಗತ್ ಸಿಂಗ್ ಸಾರ್ವಜನಿಕ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಗಾಂಜಾ ಮಾರಲು ಯತ್ನಿಸುತ್ತಿದ್ದ ಯುವಕನೋರ್ವನನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ನರಿಮೊಗರು ಗ್ರಾಮದ ಸಾಝಿಲ್ ಅಹಮ್ಮದ್ (24) ಬಂಧಿತ ಆರೋಪಿಯಾಗಿದ್ದಾನೆ. ನಿನ್ನೆ ಸಂಜೆ ನೈತಾಡಿ -ಬೆದ್ರಾಳ ಸಾರ್ವಜನಿಕ ರಸ್ತೆಯಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿ ಇಬ್ಬರು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸ್​ ನಿರೀಕ್ಷಕರು ಠಾಣಾ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ. ಅದರಲ್ಲಿ ಓರ್ವ ಸಿಕ್ಕಿಬಿದ್ದಿದ್ದು, ಇನ್ನೋರ್ವ ಪರಾರಿಯಾಗಿದ್ದಾನೆ. ಪರಾರಿಯಾದಾತ ಮಹಮ್ಮದ್ ಅಶ್ರಫ್ ಎಂದು ತಿಳಿದು ಬಂದಿದೆ.

ಇನ್ನು ಬಂಧಿತನಿಂದ ಸುಮಾರು 3 ಸಾವಿರ ರೂ. ಮೌಲ್ಯದ 166 ಗ್ರಾಂ ಗಾಂಜಾ, ದ್ವಿಚಕ್ರ ವಾಹನ ಹಾಗೂ ಮೊಬೈಲ್​ ಫೋನ್​ ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಕಲಂ 8(ಸಿ), 20(ಬಿ), ಎನ್​ಡಿಪಿಎಸ್​ ಆ್ಯಕ್ಟ್​ನಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಪುತ್ತೂರು(ದ.ಕ): ತಾಲೂಕಿನ ಕೆಮ್ಮಿಂಜೆ ಗ್ರಾಮದ ನೈತಾಡಿ-ಬೆದ್ರಾಳ ಭಗತ್ ಸಿಂಗ್ ಸಾರ್ವಜನಿಕ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಗಾಂಜಾ ಮಾರಲು ಯತ್ನಿಸುತ್ತಿದ್ದ ಯುವಕನೋರ್ವನನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ನರಿಮೊಗರು ಗ್ರಾಮದ ಸಾಝಿಲ್ ಅಹಮ್ಮದ್ (24) ಬಂಧಿತ ಆರೋಪಿಯಾಗಿದ್ದಾನೆ. ನಿನ್ನೆ ಸಂಜೆ ನೈತಾಡಿ -ಬೆದ್ರಾಳ ಸಾರ್ವಜನಿಕ ರಸ್ತೆಯಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿ ಇಬ್ಬರು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸ್​ ನಿರೀಕ್ಷಕರು ಠಾಣಾ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ. ಅದರಲ್ಲಿ ಓರ್ವ ಸಿಕ್ಕಿಬಿದ್ದಿದ್ದು, ಇನ್ನೋರ್ವ ಪರಾರಿಯಾಗಿದ್ದಾನೆ. ಪರಾರಿಯಾದಾತ ಮಹಮ್ಮದ್ ಅಶ್ರಫ್ ಎಂದು ತಿಳಿದು ಬಂದಿದೆ.

ಇನ್ನು ಬಂಧಿತನಿಂದ ಸುಮಾರು 3 ಸಾವಿರ ರೂ. ಮೌಲ್ಯದ 166 ಗ್ರಾಂ ಗಾಂಜಾ, ದ್ವಿಚಕ್ರ ವಾಹನ ಹಾಗೂ ಮೊಬೈಲ್​ ಫೋನ್​ ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಕಲಂ 8(ಸಿ), 20(ಬಿ), ಎನ್​ಡಿಪಿಎಸ್​ ಆ್ಯಕ್ಟ್​ನಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.