ETV Bharat / state

ಬೆಳ್ತಂಗಡಿ ಪತ್ರಕರ್ತ ಸಂಘದಿಂದ ಪತ್ರಿಕಾ ದಿನಾಚರಣೆ.. - harish punja news

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ತಾ.ಪಂ. ಸಭಾಂಗಣದಲ್ಲಿ ನಡೆದ ಪತ್ರಿಕಾ ದಿನಾಚರಣೆಯನ್ನು ಶಾಸಕ ಹರೀಶ್​ ಪೂಂಜ ಭಾಗಿ.

press day celebration in beltangadi
ಬೆಳ್ತಂಗಡಿ ಪತ್ರಕರ್ತ ಸಂಘದಿಂದ ಪತ್ರಿಕಾ ದಿನಾಚರಣೆ
author img

By

Published : Jul 4, 2020, 8:51 PM IST

ಬೆಳ್ತಂಗಡಿ : ಕೊರೊನಾ ಮುಕ್ತವಾಗಿಸಿ ಸ್ವಸ್ಥ ಬೆಳ್ತಂಗಡಿ ತಾಲೂಕು ನಿರ್ಮಾಣ ಮಾಡುವ ಸಂಕಲ್ಪ ಮಾಡೋಣ ಎಂದು ಶಾಸಕ ಹರೀಶ ಪೂಂಜ ಹೇಳಿದರು.

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ತಾಪಂ ಸಭಾಂಗಣದಲ್ಲಿ ನಡೆದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಎರಡು ವರ್ಷದ ನನ್ನ ಶಾಸಕತ್ವದ ಅವಧಿಯಲ್ಲಿ ತಾಲೂಕಿನ ಸಮಸ್ಯೆಗಳನ್ನು ಪತ್ರಿಕೆಗಳ ಮೂಲಕ ಬಿಂಬಿಸಿ ಎಚ್ಚರಿಸಿದ್ದಾರೆ.

ಅದೇ ರೀತಿ ಸಮಸ್ಯೆಗಳು ಪರಿಹಾರವಾದಾಗಲೂ ತಾಲೂಕಿನ ಪತ್ರಕರ್ತರು ಅಪಾರ ಬೆಂಬಲ ವ್ಯಕ್ತಪಡಿಸಿದ್ದಾರೆ. ಕ್ಲಿಷ್ಟಕರ ಸನ್ನಿವೇಶಗಳಲ್ಲಿ ನನ್ನನ್ನು ತಿದ್ದಿ ತೀಡಿ ಬೆಂಬಲ ನೀಡಿದ್ದೀರಿ ಎಂದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಮಾಜವನ್ನು ಕೊರೊನಾ ಮುಕ್ತವಾಗಿಸಲು ಪಣ ತೊಟ್ಟಿದ್ದಾರೆ. ಅದೇ ರೀತಿ ನಾವೆಲ್ಲಾ ಸೇರಿ ತಾಲೂಕಿನಲ್ಲಿ ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಪತ್ರಿಕಾ ದಿನಾಚರಣೆಯಂದೇ ಸಂಕಲ್ಪ ಮಾಡೋಣ ಎಂದರು.

ಬೆಳ್ತಂಗಡಿ : ಕೊರೊನಾ ಮುಕ್ತವಾಗಿಸಿ ಸ್ವಸ್ಥ ಬೆಳ್ತಂಗಡಿ ತಾಲೂಕು ನಿರ್ಮಾಣ ಮಾಡುವ ಸಂಕಲ್ಪ ಮಾಡೋಣ ಎಂದು ಶಾಸಕ ಹರೀಶ ಪೂಂಜ ಹೇಳಿದರು.

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ತಾಪಂ ಸಭಾಂಗಣದಲ್ಲಿ ನಡೆದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಎರಡು ವರ್ಷದ ನನ್ನ ಶಾಸಕತ್ವದ ಅವಧಿಯಲ್ಲಿ ತಾಲೂಕಿನ ಸಮಸ್ಯೆಗಳನ್ನು ಪತ್ರಿಕೆಗಳ ಮೂಲಕ ಬಿಂಬಿಸಿ ಎಚ್ಚರಿಸಿದ್ದಾರೆ.

ಅದೇ ರೀತಿ ಸಮಸ್ಯೆಗಳು ಪರಿಹಾರವಾದಾಗಲೂ ತಾಲೂಕಿನ ಪತ್ರಕರ್ತರು ಅಪಾರ ಬೆಂಬಲ ವ್ಯಕ್ತಪಡಿಸಿದ್ದಾರೆ. ಕ್ಲಿಷ್ಟಕರ ಸನ್ನಿವೇಶಗಳಲ್ಲಿ ನನ್ನನ್ನು ತಿದ್ದಿ ತೀಡಿ ಬೆಂಬಲ ನೀಡಿದ್ದೀರಿ ಎಂದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಮಾಜವನ್ನು ಕೊರೊನಾ ಮುಕ್ತವಾಗಿಸಲು ಪಣ ತೊಟ್ಟಿದ್ದಾರೆ. ಅದೇ ರೀತಿ ನಾವೆಲ್ಲಾ ಸೇರಿ ತಾಲೂಕಿನಲ್ಲಿ ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಪತ್ರಿಕಾ ದಿನಾಚರಣೆಯಂದೇ ಸಂಕಲ್ಪ ಮಾಡೋಣ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.