ETV Bharat / state

ದ.ಕ ಜಿಲ್ಲೆಯಲ್ಲಿ ಜೂ. 1ರಿಂದ ಖಾಸಗಿ ಬಸ್​ಗಳ ಸಂಚಾರ ಆರಂಭ

author img

By

Published : May 29, 2020, 4:13 PM IST

ಆರಂಭಿಕ ಹಂತದಲ್ಲಿ ಕೆಲವೇ ಬಸ್​ಗಳ ಓಡಾಟ ಆರಂಭಿಸಿ ಪ್ರಯಾಣಿಕರ ಬೇಡಿಕೆಯ ಮೇರೆಗೆ ಅವುಗಳ ಸಂಖ್ಯೆಯನ್ನು ಕ್ರಮೇಣ ಜಾಸ್ತಿ ಮಾಡಲು ಖಾಸಗಿ ಬಸ್​ಗಳ ಮಾಲೀಕರಿಗೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಸೂಚಿಸಿದ್ದಾರೆ.

Private buses will start their service in Dakar district very soon
ದ.ಕ ಜಿಲ್ಲೆಯಲ್ಲಿ ಅತಿಶೀಘ್ರವೇ ಆರಂಭವಾಗಲಿದೆ ಖಾಸಗಿ ಬಸ್​ಗಳ ಸಂಚಾರ

ಮಂಗಳೂರು: ರಾಜ್ಯದಲ್ಲಿ ಬಸ್ ಸಂಚಾರಕ್ಕೆ ಸರ್ಕಾರ ಇತ್ತೀಚೆಗೆ ಅವಕಾಶ ನೀಡಿದ್ದರೂ ದ.ಕ ಜಿಲ್ಲೆಯಲ್ಲಿ ಆರಂಭವಾಗದೆ ಇದ್ದ ಖಾಸಗಿ ಬಸ್​ಗಳ ಓಡಾಟ ಜೂ. 1ರಿಂದ ಆರಂಭವಾಗಲಿದೆ.

ಸರ್ಕಾರ ಅವಕಾಶ ನೀಡಿದ್ದರೂ ಖಾಸಗಿ ಬಸ್ ಮಾಲೀಕರು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬಸ್​​ಗಳನ್ನು ಓಡಿಸದಿರಲು ನಿರ್ಧರಿಸಿದ್ದರು. ಈ ಹಿನ್ನೆಲೆ ಮಂಗಳೂರು ಪ್ರಾದೇಶಿಕ ಸಾರಿಗೆ ಅಧಿಕಾರಿ ಆರ್.ಎಂ.ವರ್ಣೇಕರ್, ಖಾಸಗಿ ಬಸ್ ಮಾಲೀಕರ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಜೂ. 1ರಿಂದ ಖಾಸಗಿ ಬಸ್​​ಗಳನ್ನು ಓಡಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಆರಂಭಿಕ ಹಂತದಲ್ಲಿ ಕೆಲವೇ ಬಸ್​ಗಳ ಓಡಾಟ ಆರಂಭಿಸಿ ಪ್ರಯಾಣಿಕರ ಬೇಡಿಕೆಯ ಮೇರೆಗೆ ಅವುಗಳ ಸಂಖ್ಯೆಯನ್ನು ಕ್ರಮೇಣ ಜಾಸ್ತಿ ಮಾಡಲು ಖಾಸಗಿ ಬಸ್​ಗಳ ಮಾಲೀಕರಿಗೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಸೂಚಿಸಿದ್ದಾರೆ. ಬಸ್​​ನಲ್ಲಿ ಸಂಚರಿಸುವ ಸಾರ್ವಜನಿಕರು ಸಾಮಾಜಿಕ ಅಂತರ, ಮಾಸ್ಕ್, ಕೈಗಳಿಗೆ ಸ್ಯಾನಿಟೈಜರ್ ಬಳಸುವುದು ಹಾಗೂ ತಮ್ಮದೇ ಆದ ಆಹಾರ, ನೀರು ಉಪಯೋಗಿಸುವುದು ಕಡ್ಡಾಯವಾಗಿದೆ ಎಂದಿದ್ದಾರೆ.

ಬಸ್​ನಲ್ಲಿ ಶೇ. 50ರಷ್ಟು ಪ್ರಯಾಣಿಕರು ಮಾತ್ರ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಯಾಣಿಕರು ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್​ ಜೊತೆಯಲ್ಲಿಟ್ಟುಕೊಂಡು ಪ್ರಯಾಣಿಸಲು ಸೂಚಿಸಲಾಗಿದೆ. ವಾಹನಗಳ ಮಾರ್ಗಸೂಚಿ ಪ್ರಕಾರ ಬಸ್​ ಸ್ಯಾನಿಟೈಸ್​​ ಮಾಡಬೇಕು, ಚಾಲಕರು ಮತ್ತು ನಿರ್ವಾಹಕರು ಹ್ಯಾಂಡ್ ಗ್ಲೌಸ್ ಕಡ್ಡಾಯವಾಗಿ ಹಾಕಿಕೊಳ್ಳಬೇಕು ಹಾಗೂ ವೈದ್ಯಕೀಯ ಪರೀಕ್ಷೆ ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಮಂಗಳೂರು: ರಾಜ್ಯದಲ್ಲಿ ಬಸ್ ಸಂಚಾರಕ್ಕೆ ಸರ್ಕಾರ ಇತ್ತೀಚೆಗೆ ಅವಕಾಶ ನೀಡಿದ್ದರೂ ದ.ಕ ಜಿಲ್ಲೆಯಲ್ಲಿ ಆರಂಭವಾಗದೆ ಇದ್ದ ಖಾಸಗಿ ಬಸ್​ಗಳ ಓಡಾಟ ಜೂ. 1ರಿಂದ ಆರಂಭವಾಗಲಿದೆ.

ಸರ್ಕಾರ ಅವಕಾಶ ನೀಡಿದ್ದರೂ ಖಾಸಗಿ ಬಸ್ ಮಾಲೀಕರು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬಸ್​​ಗಳನ್ನು ಓಡಿಸದಿರಲು ನಿರ್ಧರಿಸಿದ್ದರು. ಈ ಹಿನ್ನೆಲೆ ಮಂಗಳೂರು ಪ್ರಾದೇಶಿಕ ಸಾರಿಗೆ ಅಧಿಕಾರಿ ಆರ್.ಎಂ.ವರ್ಣೇಕರ್, ಖಾಸಗಿ ಬಸ್ ಮಾಲೀಕರ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಜೂ. 1ರಿಂದ ಖಾಸಗಿ ಬಸ್​​ಗಳನ್ನು ಓಡಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಆರಂಭಿಕ ಹಂತದಲ್ಲಿ ಕೆಲವೇ ಬಸ್​ಗಳ ಓಡಾಟ ಆರಂಭಿಸಿ ಪ್ರಯಾಣಿಕರ ಬೇಡಿಕೆಯ ಮೇರೆಗೆ ಅವುಗಳ ಸಂಖ್ಯೆಯನ್ನು ಕ್ರಮೇಣ ಜಾಸ್ತಿ ಮಾಡಲು ಖಾಸಗಿ ಬಸ್​ಗಳ ಮಾಲೀಕರಿಗೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಸೂಚಿಸಿದ್ದಾರೆ. ಬಸ್​​ನಲ್ಲಿ ಸಂಚರಿಸುವ ಸಾರ್ವಜನಿಕರು ಸಾಮಾಜಿಕ ಅಂತರ, ಮಾಸ್ಕ್, ಕೈಗಳಿಗೆ ಸ್ಯಾನಿಟೈಜರ್ ಬಳಸುವುದು ಹಾಗೂ ತಮ್ಮದೇ ಆದ ಆಹಾರ, ನೀರು ಉಪಯೋಗಿಸುವುದು ಕಡ್ಡಾಯವಾಗಿದೆ ಎಂದಿದ್ದಾರೆ.

ಬಸ್​ನಲ್ಲಿ ಶೇ. 50ರಷ್ಟು ಪ್ರಯಾಣಿಕರು ಮಾತ್ರ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಯಾಣಿಕರು ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್​ ಜೊತೆಯಲ್ಲಿಟ್ಟುಕೊಂಡು ಪ್ರಯಾಣಿಸಲು ಸೂಚಿಸಲಾಗಿದೆ. ವಾಹನಗಳ ಮಾರ್ಗಸೂಚಿ ಪ್ರಕಾರ ಬಸ್​ ಸ್ಯಾನಿಟೈಸ್​​ ಮಾಡಬೇಕು, ಚಾಲಕರು ಮತ್ತು ನಿರ್ವಾಹಕರು ಹ್ಯಾಂಡ್ ಗ್ಲೌಸ್ ಕಡ್ಡಾಯವಾಗಿ ಹಾಕಿಕೊಳ್ಳಬೇಕು ಹಾಗೂ ವೈದ್ಯಕೀಯ ಪರೀಕ್ಷೆ ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.