ETV Bharat / state

ಮಂಗಳೂರು: ಟೋಲ್ ಗೇಟ್ ವಿರುದ್ಧದ ಧರಣಿಗೆ ನಲ್​ಪಾಡ್ ಬೆಂಬಲ

author img

By

Published : Oct 29, 2022, 10:20 PM IST

ಮಂಗಳೂರು ನಗರದ ಹೊರವಲಯದಲ್ಲಿರುವ ಸುರತ್ಕಲ್​ ಎನ್​ಐಟಿಕೆ ಟೋಲ್ ಗೇಟ್ ತೆರವಿಗಾಗಿ ಅಹೋರಾತ್ರಿ ಧರಣಿ ನಡೆಸಲಾಗುತ್ತಿದ್ದು, ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ.

protest-against-surathkal-nitk-toll-in-manglore
ಮಂಗಳೂರು : ಟೋಲ್ ಗೇಟ್ ವಿರುದ್ದದ ಧರಣಿಗೆ ನಲಪ್ಪಾಡ್ ಬೆಂಬಲ

ಮಂಗಳೂರು : ನಗರದ ಹೊರವಲಯದ ಸುರತ್ಕಲ್​ನ ಎನ್​ಐಟಿಕೆ ಟೋಲ್ ಗೇಟ್ ತೆರವಿಗಾಗಿ ಶನಿವಾರ ಬೆಳಗ್ಗೆ ಆರಂಭವಾದ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನೆಗೆ ಭಾನುವಾರ ಯುವಕಾಂಗ್ರೆಸ್ ರಾಜ್ಯಾಧ್ಯಕ್ಷ ಮುಹಮ್ಮದ್ ನಲ್​ಪಾಡ್ ಆಗಮಿಸಿ ಬೆಂಬಲ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತವರಿನಲ್ಲಿ ಅಕ್ರಮವಾಗಿ ಟೋಲ್ ಸುಲಿಗೆ ನಡೆಯುತ್ತಿರುವುದು 40 ಪರ್ಸೆಂಟ್​ ಸದರ್ಕಾರದ ನೀತಿಗೆ ಅನುಗುಣವಾಗಿಯೇ ಇದೆ. ಟೋಲ್ ಗೇಟ್ ತೆರವು ಆಗುವವರೆಗೆ ಯುವ ಕಾಂಗ್ರೆಸ್ ಈ ಹೋರಾಟದಲ್ಲಿ ಜೊತೆಯಾಗಿರಲಿದೆ ಎಂದು ಹೇಳಿದರು.

ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಹ ಸಂಚಾಲಕ ವೈ ರಾಘವೇಂದ್ರ ರಾವ್ ಮಾತನಾಡಿ, ಸುರತ್ಕಲ್ ಅಕ್ರಮ ಟೋಲ್ ಗೇಟ್ ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ಜನವಿರೋಧಿ ಆಡಳಿತದ ಸಂಕೇತವಾಗಿ ರಾರಾಜಿಸುತ್ತಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜನರ ಒಕ್ಕೊರಲ ಆಗ್ರಹದ ಹೊರತಾಗಿಯೂ ಟೋಲ್ ಕೇಂದ್ರ ಮುಚ್ಚದಿರುವುದನ್ನು ಖಂಡಿಸುತ್ತೇವೆ. ಇದರ ಹಿಂದೆ ಭ್ರಷ್ಟಾಚಾರ, ಕಮೀಷನ್, ಖಾಸಗಿ ಕಂಪನಿಗಳ ಹಿತಾಸಕ್ತಿಗಳು ಕೆಲಸ ಮಾಡುತ್ತಿವೆ. ಬಿಜೆಪಿ ಸರ್ಕಾರ ಅಂತಹ ನೀತಿಗಳ ಪರ ನಿಂತಿರುವುದು ಇಂದು ಜನಸಾಮಾನ್ಯರಿಗೂ ಅರ್ಥವಾಗುತ್ತಿದೆ. ಜನಪರ ಕಾರ್ಯಗಳಿಗೆ ಬೆನ್ನು ತಿರುಗಿಸುವ ಬಿಜೆಪಿ ಸಂಸದ ಮತ್ತು ಶಾಸಕರುಗಳ ಬಣ್ಣ ಸುರತ್ಕಲ್ ಟೋಲ್ ಗೇಟ್ ಮುಂಭಾಗ ಕರಗತೊಡಗಿದೆ ಎಂದು ಆರೋಪಿಸಿದರು.

ಭಾನುವಾರ ಧರಣಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಮಹಿಳಾ ಮುಖಂಡರಾದ ಶಾಲೆಟ್ ಪಿಂಟೊ, ಭಾರತಿ ಬೋಳಾರ, ಮಾಜಿ ಸಚಿವ ಅಭಯಚಂದ್ರ ಜೈನ್, ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ದಲಿತ ನಾಯಕ ಎಂ ದೇವದಾಸ್, ಮಾಜಿ ಉಪ ಮೇಯರ್ ಮೊಹಮ್ಮದ್ ಕುಂಜತ್ತಬೈಲ್, ಜ್ಯೋತಿ ಮೆನನ್, ಪ್ರಮೀಳಾ ದೇವಾಡಿಗ, ಮಂಜುಳಾ ನಾಯಕ್, ನಾಯಕರಾದ ವಿನಿತ್ ದೇವಾಡಿಗ, ರೇವಂತ್ ಕದ್ರಿ, ವಿವಿಧ ಸಂಘಟನೆಗಳ ಪ್ರಮುಖರಾದ ಬಿ ಕೆ ಇಮ್ತಿಯಾಜ್, ಸುಹೈಲ್ ಕಂದಕ್, ಸಂತೋಷ್ ಬಜಾಲ್, ನವೀನ್ ಕೊಂಚಾಡಿ, ಗಿರೀಶ್ ಆಳ್ವ, ಶೇಖಬ್ಬ ಕೋಟೆ, ಹಸೈನಾರ್ ಬಿ ಸಿ ರೋಡ್, ರಮೇಶ್ ಟಿ ಎನ್, ಅಯಾಝ್ ಕೃಷ್ಣಾಪುರ, ರಾಜೇಶ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

ಟೆಂಟ್ ನಲ್ಲಿ ಮಲಗಿದ ಮಾಜಿ ಸಚಿವ : ಟೋಲ್ ಗೇಟ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ಮೊದಲ ದಿನದ ಧರಣಿಯಲ್ಲಿ ರಾತ್ರಿ ಟೆಂಟ್​ನಲ್ಲಿ ಮಲಗಿದರು.

ಇದನ್ನೂ ಓದಿ : 144 ಸೆಕ್ಷನ್ ವ್ಯಾಪ್ತಿಯ ಹೊರಭಾಗದಲ್ಲಿ ಟೋಲ್ ಗೇಟ್ ವಿರುದ್ದ ಹಗಲು ರಾತ್ರಿ ಧರಣಿ

ಮಂಗಳೂರು : ನಗರದ ಹೊರವಲಯದ ಸುರತ್ಕಲ್​ನ ಎನ್​ಐಟಿಕೆ ಟೋಲ್ ಗೇಟ್ ತೆರವಿಗಾಗಿ ಶನಿವಾರ ಬೆಳಗ್ಗೆ ಆರಂಭವಾದ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನೆಗೆ ಭಾನುವಾರ ಯುವಕಾಂಗ್ರೆಸ್ ರಾಜ್ಯಾಧ್ಯಕ್ಷ ಮುಹಮ್ಮದ್ ನಲ್​ಪಾಡ್ ಆಗಮಿಸಿ ಬೆಂಬಲ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತವರಿನಲ್ಲಿ ಅಕ್ರಮವಾಗಿ ಟೋಲ್ ಸುಲಿಗೆ ನಡೆಯುತ್ತಿರುವುದು 40 ಪರ್ಸೆಂಟ್​ ಸದರ್ಕಾರದ ನೀತಿಗೆ ಅನುಗುಣವಾಗಿಯೇ ಇದೆ. ಟೋಲ್ ಗೇಟ್ ತೆರವು ಆಗುವವರೆಗೆ ಯುವ ಕಾಂಗ್ರೆಸ್ ಈ ಹೋರಾಟದಲ್ಲಿ ಜೊತೆಯಾಗಿರಲಿದೆ ಎಂದು ಹೇಳಿದರು.

ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಹ ಸಂಚಾಲಕ ವೈ ರಾಘವೇಂದ್ರ ರಾವ್ ಮಾತನಾಡಿ, ಸುರತ್ಕಲ್ ಅಕ್ರಮ ಟೋಲ್ ಗೇಟ್ ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ಜನವಿರೋಧಿ ಆಡಳಿತದ ಸಂಕೇತವಾಗಿ ರಾರಾಜಿಸುತ್ತಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜನರ ಒಕ್ಕೊರಲ ಆಗ್ರಹದ ಹೊರತಾಗಿಯೂ ಟೋಲ್ ಕೇಂದ್ರ ಮುಚ್ಚದಿರುವುದನ್ನು ಖಂಡಿಸುತ್ತೇವೆ. ಇದರ ಹಿಂದೆ ಭ್ರಷ್ಟಾಚಾರ, ಕಮೀಷನ್, ಖಾಸಗಿ ಕಂಪನಿಗಳ ಹಿತಾಸಕ್ತಿಗಳು ಕೆಲಸ ಮಾಡುತ್ತಿವೆ. ಬಿಜೆಪಿ ಸರ್ಕಾರ ಅಂತಹ ನೀತಿಗಳ ಪರ ನಿಂತಿರುವುದು ಇಂದು ಜನಸಾಮಾನ್ಯರಿಗೂ ಅರ್ಥವಾಗುತ್ತಿದೆ. ಜನಪರ ಕಾರ್ಯಗಳಿಗೆ ಬೆನ್ನು ತಿರುಗಿಸುವ ಬಿಜೆಪಿ ಸಂಸದ ಮತ್ತು ಶಾಸಕರುಗಳ ಬಣ್ಣ ಸುರತ್ಕಲ್ ಟೋಲ್ ಗೇಟ್ ಮುಂಭಾಗ ಕರಗತೊಡಗಿದೆ ಎಂದು ಆರೋಪಿಸಿದರು.

ಭಾನುವಾರ ಧರಣಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಮಹಿಳಾ ಮುಖಂಡರಾದ ಶಾಲೆಟ್ ಪಿಂಟೊ, ಭಾರತಿ ಬೋಳಾರ, ಮಾಜಿ ಸಚಿವ ಅಭಯಚಂದ್ರ ಜೈನ್, ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ದಲಿತ ನಾಯಕ ಎಂ ದೇವದಾಸ್, ಮಾಜಿ ಉಪ ಮೇಯರ್ ಮೊಹಮ್ಮದ್ ಕುಂಜತ್ತಬೈಲ್, ಜ್ಯೋತಿ ಮೆನನ್, ಪ್ರಮೀಳಾ ದೇವಾಡಿಗ, ಮಂಜುಳಾ ನಾಯಕ್, ನಾಯಕರಾದ ವಿನಿತ್ ದೇವಾಡಿಗ, ರೇವಂತ್ ಕದ್ರಿ, ವಿವಿಧ ಸಂಘಟನೆಗಳ ಪ್ರಮುಖರಾದ ಬಿ ಕೆ ಇಮ್ತಿಯಾಜ್, ಸುಹೈಲ್ ಕಂದಕ್, ಸಂತೋಷ್ ಬಜಾಲ್, ನವೀನ್ ಕೊಂಚಾಡಿ, ಗಿರೀಶ್ ಆಳ್ವ, ಶೇಖಬ್ಬ ಕೋಟೆ, ಹಸೈನಾರ್ ಬಿ ಸಿ ರೋಡ್, ರಮೇಶ್ ಟಿ ಎನ್, ಅಯಾಝ್ ಕೃಷ್ಣಾಪುರ, ರಾಜೇಶ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

ಟೆಂಟ್ ನಲ್ಲಿ ಮಲಗಿದ ಮಾಜಿ ಸಚಿವ : ಟೋಲ್ ಗೇಟ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ಮೊದಲ ದಿನದ ಧರಣಿಯಲ್ಲಿ ರಾತ್ರಿ ಟೆಂಟ್​ನಲ್ಲಿ ಮಲಗಿದರು.

ಇದನ್ನೂ ಓದಿ : 144 ಸೆಕ್ಷನ್ ವ್ಯಾಪ್ತಿಯ ಹೊರಭಾಗದಲ್ಲಿ ಟೋಲ್ ಗೇಟ್ ವಿರುದ್ದ ಹಗಲು ರಾತ್ರಿ ಧರಣಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.