ಬಂಟ್ವಾಳ: ಮುಂದಿನ 10 ವರ್ಷಗಳಲ್ಲಿ ಪುದು ಗ್ರಾಮದ ಪ್ರತಿಯೊಬ್ಬ ವಿದ್ಯಾರ್ಥಿಗಳು ಉನ್ನತ ಸ್ಥಾನವನ್ನು ಅಲಂಕರಿಸುವ ನಿಟ್ಟಿನಲ್ಲಿ ಗ್ರಾಮಕ್ಕೆ ಪದವಿಪೂರ್ವ ಕಾಲೇಜನ್ನು ಒದಗಿಸಲು ಪ್ರಯತ್ನಿಸುವುದಾಗಿ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ. ಖಾದರ್ ಹೇಳಿದ್ದಾರೆ.
ಪುದು ಗ್ರಾಮದ ಸುಜೀರು ಮಾದರಿ ಹಿ.ಪ್ರಾ. ಶಾಲೆಯ 4 ಕೊಠಡಿಗಳ ಕಟ್ಟಡದ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಗ್ರಾಮಕ್ಕೆ ಪಿಯುಸಿ, ಪದವಿ ಕಾಲೇಜನ್ನು ಒದಗಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಸುಜೀರು ಶಾಲೆಯ ಶಿಥಿಲವಾದ ಕಟ್ಟಡವನ್ನು ಕೆಡವಿ ಹೊಸ ಕಟ್ಟಡ ನಿರ್ಮಿಸುವುದು ಬಹುಕಾಲದ ಬೇಡಿಕೆಯಾಗಿದ್ದು, ಅದಕ್ಕೆ ಅನುದಾನ ಒದಗಿಸಲಾಗಿದೆ. ಜತೆಗೆ ಗ್ರಾಮದ ರಸ್ತೆ, ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಅನುದಾನ ನೀಡಲಾಗಿದೆ.
ಪುದು ಗ್ರಾಮಕ್ಕೆ ಪದವಿಪೂರ್ವ ಕಾಲೇಜು ಒದಗಿಸಲು ಪ್ರಯತ್ನ: ಶಾಸಕ ಯು.ಟಿ.ಖಾದರ್
ಗ್ರಾಮೀಣ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪುದು ಗ್ರಾಮಕ್ಕೆ ಪದವಿಪೂರ್ವ ಕಾಲೇಜು ಒದಗಿಸಲು ಪ್ರಯತ್ನಿಸುವುದಾಗಿ ಶಾಸಕ ಯು.ಟಿ. ಖಾದರ್ ಹೇಳಿದ್ದಾರೆ.
ಬಂಟ್ವಾಳ: ಮುಂದಿನ 10 ವರ್ಷಗಳಲ್ಲಿ ಪುದು ಗ್ರಾಮದ ಪ್ರತಿಯೊಬ್ಬ ವಿದ್ಯಾರ್ಥಿಗಳು ಉನ್ನತ ಸ್ಥಾನವನ್ನು ಅಲಂಕರಿಸುವ ನಿಟ್ಟಿನಲ್ಲಿ ಗ್ರಾಮಕ್ಕೆ ಪದವಿಪೂರ್ವ ಕಾಲೇಜನ್ನು ಒದಗಿಸಲು ಪ್ರಯತ್ನಿಸುವುದಾಗಿ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ. ಖಾದರ್ ಹೇಳಿದ್ದಾರೆ.
ಪುದು ಗ್ರಾಮದ ಸುಜೀರು ಮಾದರಿ ಹಿ.ಪ್ರಾ. ಶಾಲೆಯ 4 ಕೊಠಡಿಗಳ ಕಟ್ಟಡದ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಗ್ರಾಮಕ್ಕೆ ಪಿಯುಸಿ, ಪದವಿ ಕಾಲೇಜನ್ನು ಒದಗಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಸುಜೀರು ಶಾಲೆಯ ಶಿಥಿಲವಾದ ಕಟ್ಟಡವನ್ನು ಕೆಡವಿ ಹೊಸ ಕಟ್ಟಡ ನಿರ್ಮಿಸುವುದು ಬಹುಕಾಲದ ಬೇಡಿಕೆಯಾಗಿದ್ದು, ಅದಕ್ಕೆ ಅನುದಾನ ಒದಗಿಸಲಾಗಿದೆ. ಜತೆಗೆ ಗ್ರಾಮದ ರಸ್ತೆ, ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಅನುದಾನ ನೀಡಲಾಗಿದೆ.