ETV Bharat / state

ಪುತ್ತೂರು ಶಾಸಕರ ವಾರ್​ ರೂಮ್​​ನಿಂದ ಸಮಾಜಮುಖಿ ಕಾರ್ಯ: ಕೋವಿಡ್ ಶವಗಳಿಗೆ ಮುಕ್ತಿ!

author img

By

Published : May 4, 2021, 3:39 PM IST

ಇತ್ತೀಚೆಗೆ ಬೆಂಗಳೂರಿನಲ್ಲಿ ಪುತ್ತೂರಿನ ನಿವಾಸಿಯೊಬ್ಬರು ಮೃತಪಟ್ಟ ಸಂದರ್ಭದಲ್ಲಿ ಮೃತರ ಕುಟುಂಬಸ್ಥರು ಇದೇ ತಂಡವನ್ನು ಸಂಪರ್ಕಿಸಿ ಅಂತ್ಯ ಸಂಸ್ಕಾರ ನಡೆಸಲು ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ರಾತ್ರಿ ವೇಳೆಯಲ್ಲಿಯೇ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು.

puttur-mla-war-room-doing-cremation-of-covid-dead-bodies
ಕೋವಿಡ್ ಶವಗಳಿಗೆ ಮುಕ್ತಿ ನೀಡುತ್ತಿದೆ ತಂಡ

ಪುತ್ತೂರು (ಮಂಗಳೂರು): ದೇಶದಾದ್ಯಂತ ಕೊರೊನಾ ಸೋಂಕಿನ ಅಬ್ಬರ ಹೆಚ್ಚಾಗುತ್ತಲೇ ಇದೆ. ಸಾವುಗಳ ಸಂಖ್ಯೆಯಲ್ಲೂ ಹೆಚ್ಚಳವಾಗುತ್ತಿದೆ. ಹೀಗೆ ಸಾವನ್ನಪ್ಪಿರುವ ರೋಗಿಗಳ ಶವ ಸಂಸ್ಕಾರ ನಡೆಸಲೂ ಮನೆಯವರು ಹಿಂದೇಟು ಹಾಕುವಂತಹ ಪರಿಸ್ಥಿತಿ ಸಹ ನಿರ್ಮಾಣವಾಗಿದೆ. ಇಂತಹ ಸಮಸ್ಯೆ ನಿವಾರಿಸಲೆಂದೇ ಪುತ್ತೂರಿನಲ್ಲಿ 30 ಸದಸ್ಯರ ತಂಡ ಮುಂದಾಗಿದ್ದು, ಯಾವುದೇ ಫಲಾಪೇಕ್ಷೆಯಿಲ್ಲದೆ ಸಮಾಜಮುಖಿ ಕಾರ್ಯದಲ್ಲಿ ತೊಡಗಿದೆ.

ಈ ತಂಡ ಈಗಾಗಲೇ 30 ಮೃತದೇಹಗಳ ಅಂತ್ಯ ಸಂಸ್ಕಾರವನ್ನು ಆಯಾ ಧಾರ್ಮಿಕ ವಿಧಿ-ವಿಧಾನಗಳ ಮೂಲಕ ನೆರವೇರಿಸಿದೆ. ಪುತ್ತೂರಿಗೆ ಸಂಬಂಧಪಟ್ಟವರು ರಾಜ್ಯದ ಯಾವುದೇ ಭಾಗದಲ್ಲಿ ಕೋವಿಡ್​​​​ನಿಂದಾಗಿ ಮೃತಪಟ್ಟರೆ ಆ ಕುಟುಂಬ ಅಪೇಕ್ಷೆ ಪಟ್ಟಲ್ಲಿ ಧಾರ್ಮಿಕ ವಿಧಿ ವಿಧಾನಗಳ ಮೂಲಕ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಶಾಸಕರ ಕೊರೊನಾ ವಾರ್ ರೂಮ್​​​ ತಂಡ ಅಂತ್ಯ ಸಂಸ್ಕಾರ ನಡೆಸುತ್ತದೆ.

ಪುತ್ತೂರು ಶಾಸಕರ ವಾರ್​ ರೂಮ್​ನಿಂದ ಸಮಾಜಮುಖಿ ಕಾರ್ಯ

ಇತ್ತೀಚೆಗೆ ಬೆಂಗಳೂರಿನಲ್ಲಿ ಪುತ್ತೂರಿನ ನಿವಾಸಿಯೊಬ್ಬರು ಮೃತಪಟ್ಟ ಸಂದರ್ಭದಲ್ಲಿ ಮೃತರ ಕುಟುಂಬಸ್ಥರು ಇದೇ ತಂಡವನ್ನು ಸಂಪರ್ಕಿಸಿ ಅಂತ್ಯ ಸಂಸ್ಕಾರ ನಡೆಸಲು ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆ ರಾತ್ರಿ ವೇಳೆಯಲ್ಲಿಯೇ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು.

ಕೋವಿಡ್ ನಿರ್ವಹಣೆಯ ಎಲ್ಲಾ ಮಾರ್ಗಸೂಚಿಗಳನ್ನು ಅನುಸರಿಸಿ ಈ ತಂಡ ಕೋವಿಡ್​​ನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರವನ್ನು ನಡೆಸುತ್ತಿದೆ. ಅಲ್ಲದೆ ಎಲ್ಲಾ ಸಂದರ್ಭದಲ್ಲಿ ಈ ಸೇವೆಗೆ ಸದಾ ಸಿದ್ಧವಿರಬೇಕು ಎನ್ನುವ ಕಾರಣಕ್ಕೆ ಸಾಕಷ್ಟು ಜೊತೆ ಪಿಪಿಇ ಕಿಟ್​, ಮಾಸ್ಕ್, ಹ್ಯಾಂಡ್ ಗ್ಲೌಸ್​​ಗಳನ್ನು ತಮ್ಮ ಬಳಿಯೇ ಇಟ್ಟುಕೊಂಡಿದೆ.

ವೃತ್ತಿಯಲ್ಲಿ ಇಂಜಿನಿಯರ್ ಹಾಗೂ ಇತರ ಉನ್ನತ ಹುದ್ದೆಗಳನ್ನು ನಿರ್ವಹಿಸುತ್ತಿರುವವರು ಸಹ ಈ ತಂಡದ ಸದಸ್ಯರಾಗಿದ್ದಾರೆ. ಯಾವುದೇ ಪ್ರಚಾರ ಹಾಗೂ ಇತರ ಸಂಭಾವನೆಗಳನ್ನು ಬಯಸದೆ ಅಂತ್ಯಕ್ರಿಯೆ ನಡೆಸುವ ಪ್ರಕ್ರಿಯೆಯಲ್ಲಿ ನಿರತರಾಗಿದ್ದಾರೆ.

ಇದನ್ನೂ ಓದಿ: ದ.ಕ. ಜಿಲ್ಲೆಯಲ್ಲಿ ಆಕ್ಸಿಜನ್ ಸಮಸ್ಯೆಯಾಗದಂತೆ ತೀವ್ರ ನಿಗಾ

ಪುತ್ತೂರು (ಮಂಗಳೂರು): ದೇಶದಾದ್ಯಂತ ಕೊರೊನಾ ಸೋಂಕಿನ ಅಬ್ಬರ ಹೆಚ್ಚಾಗುತ್ತಲೇ ಇದೆ. ಸಾವುಗಳ ಸಂಖ್ಯೆಯಲ್ಲೂ ಹೆಚ್ಚಳವಾಗುತ್ತಿದೆ. ಹೀಗೆ ಸಾವನ್ನಪ್ಪಿರುವ ರೋಗಿಗಳ ಶವ ಸಂಸ್ಕಾರ ನಡೆಸಲೂ ಮನೆಯವರು ಹಿಂದೇಟು ಹಾಕುವಂತಹ ಪರಿಸ್ಥಿತಿ ಸಹ ನಿರ್ಮಾಣವಾಗಿದೆ. ಇಂತಹ ಸಮಸ್ಯೆ ನಿವಾರಿಸಲೆಂದೇ ಪುತ್ತೂರಿನಲ್ಲಿ 30 ಸದಸ್ಯರ ತಂಡ ಮುಂದಾಗಿದ್ದು, ಯಾವುದೇ ಫಲಾಪೇಕ್ಷೆಯಿಲ್ಲದೆ ಸಮಾಜಮುಖಿ ಕಾರ್ಯದಲ್ಲಿ ತೊಡಗಿದೆ.

ಈ ತಂಡ ಈಗಾಗಲೇ 30 ಮೃತದೇಹಗಳ ಅಂತ್ಯ ಸಂಸ್ಕಾರವನ್ನು ಆಯಾ ಧಾರ್ಮಿಕ ವಿಧಿ-ವಿಧಾನಗಳ ಮೂಲಕ ನೆರವೇರಿಸಿದೆ. ಪುತ್ತೂರಿಗೆ ಸಂಬಂಧಪಟ್ಟವರು ರಾಜ್ಯದ ಯಾವುದೇ ಭಾಗದಲ್ಲಿ ಕೋವಿಡ್​​​​ನಿಂದಾಗಿ ಮೃತಪಟ್ಟರೆ ಆ ಕುಟುಂಬ ಅಪೇಕ್ಷೆ ಪಟ್ಟಲ್ಲಿ ಧಾರ್ಮಿಕ ವಿಧಿ ವಿಧಾನಗಳ ಮೂಲಕ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಶಾಸಕರ ಕೊರೊನಾ ವಾರ್ ರೂಮ್​​​ ತಂಡ ಅಂತ್ಯ ಸಂಸ್ಕಾರ ನಡೆಸುತ್ತದೆ.

ಪುತ್ತೂರು ಶಾಸಕರ ವಾರ್​ ರೂಮ್​ನಿಂದ ಸಮಾಜಮುಖಿ ಕಾರ್ಯ

ಇತ್ತೀಚೆಗೆ ಬೆಂಗಳೂರಿನಲ್ಲಿ ಪುತ್ತೂರಿನ ನಿವಾಸಿಯೊಬ್ಬರು ಮೃತಪಟ್ಟ ಸಂದರ್ಭದಲ್ಲಿ ಮೃತರ ಕುಟುಂಬಸ್ಥರು ಇದೇ ತಂಡವನ್ನು ಸಂಪರ್ಕಿಸಿ ಅಂತ್ಯ ಸಂಸ್ಕಾರ ನಡೆಸಲು ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆ ರಾತ್ರಿ ವೇಳೆಯಲ್ಲಿಯೇ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು.

ಕೋವಿಡ್ ನಿರ್ವಹಣೆಯ ಎಲ್ಲಾ ಮಾರ್ಗಸೂಚಿಗಳನ್ನು ಅನುಸರಿಸಿ ಈ ತಂಡ ಕೋವಿಡ್​​ನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರವನ್ನು ನಡೆಸುತ್ತಿದೆ. ಅಲ್ಲದೆ ಎಲ್ಲಾ ಸಂದರ್ಭದಲ್ಲಿ ಈ ಸೇವೆಗೆ ಸದಾ ಸಿದ್ಧವಿರಬೇಕು ಎನ್ನುವ ಕಾರಣಕ್ಕೆ ಸಾಕಷ್ಟು ಜೊತೆ ಪಿಪಿಇ ಕಿಟ್​, ಮಾಸ್ಕ್, ಹ್ಯಾಂಡ್ ಗ್ಲೌಸ್​​ಗಳನ್ನು ತಮ್ಮ ಬಳಿಯೇ ಇಟ್ಟುಕೊಂಡಿದೆ.

ವೃತ್ತಿಯಲ್ಲಿ ಇಂಜಿನಿಯರ್ ಹಾಗೂ ಇತರ ಉನ್ನತ ಹುದ್ದೆಗಳನ್ನು ನಿರ್ವಹಿಸುತ್ತಿರುವವರು ಸಹ ಈ ತಂಡದ ಸದಸ್ಯರಾಗಿದ್ದಾರೆ. ಯಾವುದೇ ಪ್ರಚಾರ ಹಾಗೂ ಇತರ ಸಂಭಾವನೆಗಳನ್ನು ಬಯಸದೆ ಅಂತ್ಯಕ್ರಿಯೆ ನಡೆಸುವ ಪ್ರಕ್ರಿಯೆಯಲ್ಲಿ ನಿರತರಾಗಿದ್ದಾರೆ.

ಇದನ್ನೂ ಓದಿ: ದ.ಕ. ಜಿಲ್ಲೆಯಲ್ಲಿ ಆಕ್ಸಿಜನ್ ಸಮಸ್ಯೆಯಾಗದಂತೆ ತೀವ್ರ ನಿಗಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.