ETV Bharat / state

ಕೋವಿಡ್​ ನಿಯಮ ಪಾಲನೆ ಕಡ್ಡಾಯ: ಫೀಲ್ಡಿಗಿಳಿದ ಪುತ್ತೂರು ಉಪವಿಭಾಗಾಧಿಕಾರಿ

author img

By

Published : Apr 21, 2021, 7:04 PM IST

ಡಾ. ಯತೀಶ್ ಉಳ್ಳಾಲ್ ಪುತ್ತೂರು ನಗರಸಭೆ ಪೌರಾಯುಕ್ತರು ಮತ್ತು ಅಧಿಕಾರಿಗಳೊಂದಿಗೆ ಪುತ್ತೂರಿನ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಬಟ್ಟೆ ಮಳಿಗೆಗಳಿಗೆ, ಕೆ.ಎಸ್.ಆರ್.ಟಿ.ಸಿ ಬಸ್​ ನಿಲ್ದಾಣ ಮತ್ತು ಶಿಕ್ಷಣ ಸಂಸ್ಥೆಗಳಿಗೆ ತೆರಳಿ ಕಾರ್ಯಾಚರಣೆ ನಡೆಸಿದರು.

putturu ac field work
ಕೋವಿಡ್​ ನಿಯಮ ಪಾಲನೆ ಖಡ್ಡಾಯ; ಫೀಲ್ಡಿಗಿಳಿದ ಪುತ್ತೂರು ಉಪವಿಭಾಗಾಧಿಕಾರಿ

ಪುತ್ತೂರು: ಕೋವಿಡ್​​ ತಡೆಗಟ್ಟಲು ಮಾಸ್ಕ್ ಮತ್ತು ಸಾಮಾಜಿಕ ಅಂತರ ಪಾಲನೆ ಕಡ್ಡಾಯ. ಪುತ್ತೂರು ಉಪವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್ ಸಾರ್ವಜನಿಕರಲ್ಲಿ ಮಾಸ್ಕ್ ಧರಿಸಲು ಮನವಿ ಮಾಡಿದ್ದರೂ ಕೂಡ ಜನರು ಹಿಂದೇಟು ಹಾಕುವುದನ್ನು ಗಮನಿಸಿ ಪುತ್ತೂರು ಪೇಟೆಯ ವಿವಿಧ ಕಡೆ ದಿಢೀರ್ ದಾಳಿ ನಡೆಸಿ ನಿಯಮಗಳ ಪಾಲನೆ ಮಾಡದಿರುವವರಿಗೆ ದಂಡ ವಿಧಿಸುವ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಕೋವಿಡ್​ ನಿಯಮ ಪಾಲನೆ ಕಡ್ಡಾಯ; ಫೀಲ್ಡಿಗಿಳಿದ ಪುತ್ತೂರು ಉಪವಿಭಾಗಾಧಿಕಾರಿ

ಕೋವಿಡ್‌ಗೆ ಸಂಬಂಧಿಸಿ ದ.ಕ ಜಿಲ್ಲಾಧಿಕಾರಿ ಪರಿಷ್ಕೃತ ಆದೇಶ ಹೊರಡಿಸಿದ್ದು, ಅದರಂತೆ ಸಾರ್ವಜನಿಕರು ಮಾಸ್ಕ್ ಧರಿಸಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಬೇಸತ್ತ ಡಾ. ಯತೀಶ್ ಉಳ್ಳಾಲ್, ಪುತ್ತೂರು ನಗರಸಭೆ ಪೌರಾಯುಕ್ತರು ಮತ್ತು ಅಧಿಕಾರಿಗಳೊಂದಿಗೆ ಪುತ್ತೂರಿನ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಬಟ್ಟೆ ಮಳಿಗೆಗಳಿಗೆ, ಕೆ.ಎಸ್.ಆರ್.ಟಿ.ಸಿ ಬಸ್​ ನಿಲ್ದಾಣ ಮತ್ತು ಶಿಕ್ಷಣ ಸಂಸ್ಥೆಗಳಿಗೆ ತೆರಳಿ ಕಾರ್ಯಾಚರಣೆ ನಡೆಸಿದರು.

ಇದನ್ನೂ ಓದಿ: ಮದುವೆಗೆ ತೆರಳುವವರಿಗೆ ಅನುಮತಿ ಪತ್ರ, ಐಡಿ ಕಾರ್ಡ್, ಆಮಂತ್ರಣ ಪತ್ರಿಕೆ‌ ಕಡ್ಡಾಯ

ಶಿಕ್ಷಣ ಸಂಸ್ಥೆಯಲ್ಲಿ ಕೋವಿಡ್ ಪಾಠ ಮಾಡಿದರು. ಪೌರಾಯುಕ್ತೆ ರೂಪಾ ಶೆಟ್ಟಿ, ಕಂದಾಯ ನಿರೀಕ್ಷರು, ನಗರಸಭೆ ಆರೋಗ್ಯ ಇಲಾಖೆ ಅಧಿಕಾರಿಗಳು, ಪೊಲೀಸರು ಈ ದಾಳಿಯಲ್ಲಿ ಭಾಗವಹಿಸಿದ್ದರು.

ಪುತ್ತೂರು: ಕೋವಿಡ್​​ ತಡೆಗಟ್ಟಲು ಮಾಸ್ಕ್ ಮತ್ತು ಸಾಮಾಜಿಕ ಅಂತರ ಪಾಲನೆ ಕಡ್ಡಾಯ. ಪುತ್ತೂರು ಉಪವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್ ಸಾರ್ವಜನಿಕರಲ್ಲಿ ಮಾಸ್ಕ್ ಧರಿಸಲು ಮನವಿ ಮಾಡಿದ್ದರೂ ಕೂಡ ಜನರು ಹಿಂದೇಟು ಹಾಕುವುದನ್ನು ಗಮನಿಸಿ ಪುತ್ತೂರು ಪೇಟೆಯ ವಿವಿಧ ಕಡೆ ದಿಢೀರ್ ದಾಳಿ ನಡೆಸಿ ನಿಯಮಗಳ ಪಾಲನೆ ಮಾಡದಿರುವವರಿಗೆ ದಂಡ ವಿಧಿಸುವ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಕೋವಿಡ್​ ನಿಯಮ ಪಾಲನೆ ಕಡ್ಡಾಯ; ಫೀಲ್ಡಿಗಿಳಿದ ಪುತ್ತೂರು ಉಪವಿಭಾಗಾಧಿಕಾರಿ

ಕೋವಿಡ್‌ಗೆ ಸಂಬಂಧಿಸಿ ದ.ಕ ಜಿಲ್ಲಾಧಿಕಾರಿ ಪರಿಷ್ಕೃತ ಆದೇಶ ಹೊರಡಿಸಿದ್ದು, ಅದರಂತೆ ಸಾರ್ವಜನಿಕರು ಮಾಸ್ಕ್ ಧರಿಸಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಬೇಸತ್ತ ಡಾ. ಯತೀಶ್ ಉಳ್ಳಾಲ್, ಪುತ್ತೂರು ನಗರಸಭೆ ಪೌರಾಯುಕ್ತರು ಮತ್ತು ಅಧಿಕಾರಿಗಳೊಂದಿಗೆ ಪುತ್ತೂರಿನ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಬಟ್ಟೆ ಮಳಿಗೆಗಳಿಗೆ, ಕೆ.ಎಸ್.ಆರ್.ಟಿ.ಸಿ ಬಸ್​ ನಿಲ್ದಾಣ ಮತ್ತು ಶಿಕ್ಷಣ ಸಂಸ್ಥೆಗಳಿಗೆ ತೆರಳಿ ಕಾರ್ಯಾಚರಣೆ ನಡೆಸಿದರು.

ಇದನ್ನೂ ಓದಿ: ಮದುವೆಗೆ ತೆರಳುವವರಿಗೆ ಅನುಮತಿ ಪತ್ರ, ಐಡಿ ಕಾರ್ಡ್, ಆಮಂತ್ರಣ ಪತ್ರಿಕೆ‌ ಕಡ್ಡಾಯ

ಶಿಕ್ಷಣ ಸಂಸ್ಥೆಯಲ್ಲಿ ಕೋವಿಡ್ ಪಾಠ ಮಾಡಿದರು. ಪೌರಾಯುಕ್ತೆ ರೂಪಾ ಶೆಟ್ಟಿ, ಕಂದಾಯ ನಿರೀಕ್ಷರು, ನಗರಸಭೆ ಆರೋಗ್ಯ ಇಲಾಖೆ ಅಧಿಕಾರಿಗಳು, ಪೊಲೀಸರು ಈ ದಾಳಿಯಲ್ಲಿ ಭಾಗವಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.