ETV Bharat / state

ಕಾಲಸ್ಥಿತಿಗೆ ಅನುಗುಣವಾಗಿ ಪುತ್ತೂರು ದಸರಾ ಮಹೋತ್ಸವಕ್ಕೆ ಚಾಲನೆ

author img

By

Published : Oct 17, 2020, 6:01 PM IST

ಇಂದು ಪುತ್ತೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರೆತಿದ್ದು, ಪ್ರತಿವರ್ಷ ಬಹಳ ವಿಜೃಂಭಣೆಯಿಂದ ನಡೆಯುತ್ತಿದ್ದ ದಸರಾ ಉತ್ಸವ ಈ ಬಾರಿ ಕೋವಿಡ್​​ ಬಿಕ್ಕಟ್ಟಿನಿಂದ ಸರಳವಾಗಿ ನಡೆಯುತ್ತಿದೆ.

putturu dasara started news
ಪುತ್ತೂರು ದಸರಾ ಮಹೋತ್ಸವಕ್ಕೆ ಚಾಲನೆ

ಪುತ್ತೂರು: 18ನೇ ವರ್ಷದ ಪುತ್ತೂರು ದಸರಾ ಮಹೋತ್ಸವಕ್ಕೆ ನವದುರ್ಗಾರಾಧನಾ ಸಮಿತಿ ಪುತ್ತೂರು ಸಹಯೋಗದೊಂದಿಗೆ ಸರಳ ರೀತಿಯಲ್ಲಿ ಇಂದು ಚಾಲನೆ ನೀಡಲಾಯಿತು.

ಪುತ್ತೂರು ದಸರಾ ಮಹೋತ್ಸವಕ್ಕೆ ಚಾಲನೆ

ಸಂಪ್ಯ ಉದಯಗಿರಿ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ವಠಾರದಲ್ಲಿ ಶಾಸಕ ಸಂಜೀವ ಮಠಂದೂರು ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಚಾಲನೆ ನೀಡಿದರು. ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ಅವರು ಗಣಪತಿ ಸಹಿತ ನವ ದುರ್ಗೆಯರ ವಿಗ್ರಹ ಪೂಜೆ ನೆರವೇರಿಸಿದರು. 12 ದಿನಗಳು ನಡೆಯುವ ಪುತ್ತೂರು ದಸರಾ ಮಹೋತ್ಸವದಲ್ಲಿ ಈ ಬಾರಿ ಕೇವಲ ದೇವಿಯ ಆರಾಧನೆಗೆ ಸಂಬಂಧಿಸಿದ ಸಾಂಪ್ರದಾಯಗಳು ನಡೆಯಲಿದೆ.

ಈ ಬಗ್ಗೆ ಶಾಸಕ ಸಂಜೀವ ಮಠಂದೂರು ಮಾತನಾಡಿ, ಆರೋಗ್ಯದ ದೃಷ್ಟಿಯಿಂದ ನವರಾತ್ರಿ ಉತ್ಸವ ಸಾಂಕೇತಿಕವಾಗಿ ದೇವಿಯರ ಅರಾಧನೆಗೆ ಮಾತ್ರ ಸೀಮಿತವಾಗಿದೆ. ಧಾರ್ಮಿಕ ಆಚರಣೆಗಳನ್ನ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಅಗತ್ಯ. ಎಲ್ಲವೂ ಕೋವಿಡ್ ನಿಯಮಾನುಸರ ನಡೆಯಬೇಕು. ಕೋವಿಡ್ ಮುಕ್ತವಾದ ಬಳಿಕ ಮುಂದಿನ ವರ್ಷ ಮತ್ತೊಮ್ಮೆ ಗತ ವೈಭವ ಮರುಕಳಿಸಲಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೆಡಿಪಿ ನಾಮನಿರ್ದೇಶಿತ ಸದಸ್ಯ ವಿಜಯ ಬಿ.ಎಸ್, ಸೀತಾರಾಮ ರೈ ಕಂಬಳತಡ್ಡ, ಶಿಕ್ಷಕ ಉದಯ ರೈ, ಬಿಜೆಪಿ ಮುಖಂಡ ಸುರೇಶ್ ಆಳ್ವ, ಶಾಸಕರ ಆಪ್ತ ಸಹಾಯಕ ವಸಂತ ವೀರಮಂಗಲ ಸೇರಿದಂತೆ ಅರ್ಚಕರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪುತ್ತೂರು: 18ನೇ ವರ್ಷದ ಪುತ್ತೂರು ದಸರಾ ಮಹೋತ್ಸವಕ್ಕೆ ನವದುರ್ಗಾರಾಧನಾ ಸಮಿತಿ ಪುತ್ತೂರು ಸಹಯೋಗದೊಂದಿಗೆ ಸರಳ ರೀತಿಯಲ್ಲಿ ಇಂದು ಚಾಲನೆ ನೀಡಲಾಯಿತು.

ಪುತ್ತೂರು ದಸರಾ ಮಹೋತ್ಸವಕ್ಕೆ ಚಾಲನೆ

ಸಂಪ್ಯ ಉದಯಗಿರಿ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ವಠಾರದಲ್ಲಿ ಶಾಸಕ ಸಂಜೀವ ಮಠಂದೂರು ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಚಾಲನೆ ನೀಡಿದರು. ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ಅವರು ಗಣಪತಿ ಸಹಿತ ನವ ದುರ್ಗೆಯರ ವಿಗ್ರಹ ಪೂಜೆ ನೆರವೇರಿಸಿದರು. 12 ದಿನಗಳು ನಡೆಯುವ ಪುತ್ತೂರು ದಸರಾ ಮಹೋತ್ಸವದಲ್ಲಿ ಈ ಬಾರಿ ಕೇವಲ ದೇವಿಯ ಆರಾಧನೆಗೆ ಸಂಬಂಧಿಸಿದ ಸಾಂಪ್ರದಾಯಗಳು ನಡೆಯಲಿದೆ.

ಈ ಬಗ್ಗೆ ಶಾಸಕ ಸಂಜೀವ ಮಠಂದೂರು ಮಾತನಾಡಿ, ಆರೋಗ್ಯದ ದೃಷ್ಟಿಯಿಂದ ನವರಾತ್ರಿ ಉತ್ಸವ ಸಾಂಕೇತಿಕವಾಗಿ ದೇವಿಯರ ಅರಾಧನೆಗೆ ಮಾತ್ರ ಸೀಮಿತವಾಗಿದೆ. ಧಾರ್ಮಿಕ ಆಚರಣೆಗಳನ್ನ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಅಗತ್ಯ. ಎಲ್ಲವೂ ಕೋವಿಡ್ ನಿಯಮಾನುಸರ ನಡೆಯಬೇಕು. ಕೋವಿಡ್ ಮುಕ್ತವಾದ ಬಳಿಕ ಮುಂದಿನ ವರ್ಷ ಮತ್ತೊಮ್ಮೆ ಗತ ವೈಭವ ಮರುಕಳಿಸಲಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೆಡಿಪಿ ನಾಮನಿರ್ದೇಶಿತ ಸದಸ್ಯ ವಿಜಯ ಬಿ.ಎಸ್, ಸೀತಾರಾಮ ರೈ ಕಂಬಳತಡ್ಡ, ಶಿಕ್ಷಕ ಉದಯ ರೈ, ಬಿಜೆಪಿ ಮುಖಂಡ ಸುರೇಶ್ ಆಳ್ವ, ಶಾಸಕರ ಆಪ್ತ ಸಹಾಯಕ ವಸಂತ ವೀರಮಂಗಲ ಸೇರಿದಂತೆ ಅರ್ಚಕರು, ಗ್ರಾಮಸ್ಥರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.