ETV Bharat / state

ರಸ್ತೆ ಅಪಘಾತ.. ಗಾಯಾಳುಗಳನ್ನು ತಮ್ಮ ವಾಹನದಲ್ಲಿ ಆಸ್ಪತ್ರೆಗೆ ಸೇರಿಸಿದ ಲೇಡಿ ಸಿಂಗಂ ಸೇಸಮ್ಮ - Etv Bharat Kannada

ಅಪಘಾತಕ್ಕೀಡಾಗಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದ ಪುತ್ತೂರು ಮಹಿಳಾ ಠಾಣೆಯ ಪಿಎಸ್ಐ ಸೇಸಮ್ಮ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

kn_mng_01
ಗಾಯಾಳುಗಳನ್ನ ಆಸ್ಪತ್ರೆಗೆ ಸೇರಿಸಿದ ಪಿಎಸ್ಐ ಸೇಸಮ್ಮ
author img

By

Published : Oct 15, 2022, 4:42 PM IST

ಪುತ್ತೂರು(ದಕ್ಷಿಣ ಕನ್ನಡ): ಆಟೋ ಡಿವೈಡರ್​ಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಪುತ್ತೂರು ಉಪ್ಪಿನಂಗಡಿಯ ಪಡೀಲ್ ನಲ್ಲಿ ‌ನಡೆದಿದೆ. ಈ ದುರ್ಘಟನೆಯಲ್ಲಿ, ಗಾಯಗೊಂಡ ಮಹಿಳೆಯನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಲೇಡಿ ಸಿಂಗಂ ಕ್ಯಾತಿಯ ದಕ್ಷ ಅಧಿಕಾರಿ ಪಿ.ಎಸ್.ಐ ಸೇಸಮ್ಮ ಮತ್ತು ಎ.ಎಸ್.ಐ ರಾಧಾಕೃಷ್ಣ ಅವರು ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಇಂದು ಬೆಳಗ್ಗೆ 9ಗಂಟೆ ಸುಮಾರಿಗೆ ಚಾಲಕ ಅಬ್ದುಲ್ ಎಂಬವರ ಆಟೋ ಡಿವೈಡರ್​ಗೆ ಬಡಿದ ಹಿನ್ನೆಲೆಯಲ್ಲಿ ಮಹಿಳೆ ಕುಸುಮಾವತಿ ಎಂಬುವರಿಗೆ ಗಾಯವಾಗಿತ್ತು. ಈ ವೇಳೆ ಜನರು ಕೂಡ ಅಪಘಾತ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.

ಇದೇ ರಸ್ತೆಯಲ್ಲಿ ಕರ್ತವ್ಯಕ್ಕೆಂದು ತೆರಳುತ್ತಿದ್ದ ಮಹಿಳಾ ಠಾಣಾ ಪಿಎಸ್ಐ ಸೇಸಮ್ಮ ಮತ್ತು ಎಎಸ್ಐ ರಾಧಾಕೃಷ್ಣ ಗಾಯಾಳುಗಳನ್ನು ತಮ್ಮ ವಾಹನದಲ್ಲಿ ಕರೆದೊಯ್ದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನೂ ಓದಿ: ರಸ್ತೆ ಅಪಘಾತ.. ಸಿಐಡಿ ಮಹಾನಿರ್ದೇಶಕ ಗೋವಿಂದ್​ ಸಿಂಗ್​​ ಪತ್ನಿ ಸಾವು

ಪುತ್ತೂರು(ದಕ್ಷಿಣ ಕನ್ನಡ): ಆಟೋ ಡಿವೈಡರ್​ಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಪುತ್ತೂರು ಉಪ್ಪಿನಂಗಡಿಯ ಪಡೀಲ್ ನಲ್ಲಿ ‌ನಡೆದಿದೆ. ಈ ದುರ್ಘಟನೆಯಲ್ಲಿ, ಗಾಯಗೊಂಡ ಮಹಿಳೆಯನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಲೇಡಿ ಸಿಂಗಂ ಕ್ಯಾತಿಯ ದಕ್ಷ ಅಧಿಕಾರಿ ಪಿ.ಎಸ್.ಐ ಸೇಸಮ್ಮ ಮತ್ತು ಎ.ಎಸ್.ಐ ರಾಧಾಕೃಷ್ಣ ಅವರು ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಇಂದು ಬೆಳಗ್ಗೆ 9ಗಂಟೆ ಸುಮಾರಿಗೆ ಚಾಲಕ ಅಬ್ದುಲ್ ಎಂಬವರ ಆಟೋ ಡಿವೈಡರ್​ಗೆ ಬಡಿದ ಹಿನ್ನೆಲೆಯಲ್ಲಿ ಮಹಿಳೆ ಕುಸುಮಾವತಿ ಎಂಬುವರಿಗೆ ಗಾಯವಾಗಿತ್ತು. ಈ ವೇಳೆ ಜನರು ಕೂಡ ಅಪಘಾತ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.

ಇದೇ ರಸ್ತೆಯಲ್ಲಿ ಕರ್ತವ್ಯಕ್ಕೆಂದು ತೆರಳುತ್ತಿದ್ದ ಮಹಿಳಾ ಠಾಣಾ ಪಿಎಸ್ಐ ಸೇಸಮ್ಮ ಮತ್ತು ಎಎಸ್ಐ ರಾಧಾಕೃಷ್ಣ ಗಾಯಾಳುಗಳನ್ನು ತಮ್ಮ ವಾಹನದಲ್ಲಿ ಕರೆದೊಯ್ದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನೂ ಓದಿ: ರಸ್ತೆ ಅಪಘಾತ.. ಸಿಐಡಿ ಮಹಾನಿರ್ದೇಶಕ ಗೋವಿಂದ್​ ಸಿಂಗ್​​ ಪತ್ನಿ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.