ETV Bharat / state

ಮಂಗಳೂರಿನಲ್ಲಿ ಧಾರಕಾರ ಮಳೆ; ಮರ ಬಿದ್ದು ಮನೆ ನೆಲಸಮ, ವೃದ್ದೆ- ಮಗಳು ಆಸ್ಪತ್ರೆಗೆ ..!

author img

By

Published : Aug 8, 2019, 6:08 PM IST

ಮಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಮರವೊಂದು ಬುಡಸಮೇತ ಬಿದ್ದ ಪರಿಣಾಮ ಮನೆಯೊಂದು ಸಂಪೂರ್ಣ ನೆಲಸಮವಾಗಿದ್ದು, ಈ ಸಂದರ್ಭ ಮನೆಯೊಳಗೆ ತಾಯಿ ಗಿರಿಯಮ್ಮ ಹಾಗೂ ಮಗಳು ದೇವಯಾನಿ ಸಿಲುಕಿಕೊಂಡಿದ್ದರು. ತಕ್ಷಣ ಸ್ಥಳೀಯರು ‌ ತಾಯಿ-ಮಗಳನ್ನು ರಕ್ಷಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮಂಗಳೂರಿನಲ್ಲಿ ಧಾರಕಾರ ಮಳೆ; ಮರ ಬಿದ್ದು ಮನೆ ನೆಲಸಮ

ಮಂಗಳೂರು: ನಗರದ ಕೆಪಿಟಿ ಬಳಿಯ ಬಾರೆಬೈಲಿನಲ್ಲಿ ಮರವೊಂದು ಬುಡಸಮೇತ ಬಿದ್ದ ಪರಿಣಾಮ ಮನೆ ಸಂಪೂರ್ಣ ನೆಲಸಮವಾಗಿದೆ. ಪರಿಣಾಮ ಮನೆಯೊಳಗಿದ್ದ ಇಬ್ಬರು ಮಹಿಳೆಯರು ತೀವ್ರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಮಂಗಳೂರಿನಲ್ಲಿ ಧಾರಕಾರ ಮಳೆ; ಮರ ಬಿದ್ದು ಮನೆ ನೆಲಸಮ

ಮನೆಯೊಳಗಿದ್ದ ತಾಯಿ ಗಿರಿಯಮ್ಮ(90) ಹಾಗೂ ಮಗಳು ದೇವಯಾನಿ(60) ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರು. ನಿನ್ನೆ ಸಂಜೆ 7.30 ಗಂಟೆಗೆ ಸುರಿದ ಧಾರಾಕಾರ ಮಳೆಗೆ ಬೃಹತ್ ಗಾತ್ರದ ಮರವೊಂದು ಬುಡ ಸಮೇತ ಉರುಳಿದ ಪರಿಣಾಮ ಸಮೀಪದಲ್ಲಿದ್ದ ತೆಂಗಿನ ಮರ, ಹಲಸಿನ ಮರಗಳೂ ಮುರಿದು ಮನೆಯ ಮೇಲೆಯೇ ಬಿದ್ದಿವೆ. ಪರಿಣಾಮ ಮನೆ ಸಂಪೂರ್ಣವಾಗಿ ನೆಲಸಮವಾಗಿದೆ.

ಅಲ್ಲದೆ ಅಲ್ಲೇ ಹಾದು ಹೋಗಿರುವ ವಿದ್ಯುತ್ ತಂತಿಯ ಮೇಲೆ ಮರ ಬಿದ್ದಿರುವುದರಿಂದ ವಿದ್ಯುತ್ ಕಂಬವೂ ಉರುಳಿದೆ.ಈ ಸಂದರ್ಭ ಮನೆಯೊಳಗೆ ತಾಯಿ ಗಿರಿಯಮ್ಮ ಹಾಗೂ ಮಗಳು ದೇವಯಾನಿ ಸಿಲುಕಿಕೊಂಡಿದ್ದರು. ತಕ್ಷಣ ಸ್ಥಳೀಯರು ‌ಮನೆಯೊಳಗೆ ಸಿಕ್ಕಿಹಾಕಿಕೊಂಡಿರುವ ತಾಯಿ-ಮಗಳನ್ನು ರಕ್ಷಿಸಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಗ್ರಾಮ ಲೆಕ್ಕಾಧಿಕಾರಿ ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ. ಅಲ್ಲದೆ ಮೆಸ್ಕಾಂ ಅಧಿಕಾರಿಗಳು ಆಗಮಿಸಿ ಮರಗಳ ತೆರವು ಕಾರ್ಯ ಕೈಗೊಂಡಿದ್ದಾರೆ. ಮನೆಯೊಳಗಿನ ಸೊತ್ತು ಸಹಿತ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಮಂಗಳೂರು: ನಗರದ ಕೆಪಿಟಿ ಬಳಿಯ ಬಾರೆಬೈಲಿನಲ್ಲಿ ಮರವೊಂದು ಬುಡಸಮೇತ ಬಿದ್ದ ಪರಿಣಾಮ ಮನೆ ಸಂಪೂರ್ಣ ನೆಲಸಮವಾಗಿದೆ. ಪರಿಣಾಮ ಮನೆಯೊಳಗಿದ್ದ ಇಬ್ಬರು ಮಹಿಳೆಯರು ತೀವ್ರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಮಂಗಳೂರಿನಲ್ಲಿ ಧಾರಕಾರ ಮಳೆ; ಮರ ಬಿದ್ದು ಮನೆ ನೆಲಸಮ

ಮನೆಯೊಳಗಿದ್ದ ತಾಯಿ ಗಿರಿಯಮ್ಮ(90) ಹಾಗೂ ಮಗಳು ದೇವಯಾನಿ(60) ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರು. ನಿನ್ನೆ ಸಂಜೆ 7.30 ಗಂಟೆಗೆ ಸುರಿದ ಧಾರಾಕಾರ ಮಳೆಗೆ ಬೃಹತ್ ಗಾತ್ರದ ಮರವೊಂದು ಬುಡ ಸಮೇತ ಉರುಳಿದ ಪರಿಣಾಮ ಸಮೀಪದಲ್ಲಿದ್ದ ತೆಂಗಿನ ಮರ, ಹಲಸಿನ ಮರಗಳೂ ಮುರಿದು ಮನೆಯ ಮೇಲೆಯೇ ಬಿದ್ದಿವೆ. ಪರಿಣಾಮ ಮನೆ ಸಂಪೂರ್ಣವಾಗಿ ನೆಲಸಮವಾಗಿದೆ.

ಅಲ್ಲದೆ ಅಲ್ಲೇ ಹಾದು ಹೋಗಿರುವ ವಿದ್ಯುತ್ ತಂತಿಯ ಮೇಲೆ ಮರ ಬಿದ್ದಿರುವುದರಿಂದ ವಿದ್ಯುತ್ ಕಂಬವೂ ಉರುಳಿದೆ.ಈ ಸಂದರ್ಭ ಮನೆಯೊಳಗೆ ತಾಯಿ ಗಿರಿಯಮ್ಮ ಹಾಗೂ ಮಗಳು ದೇವಯಾನಿ ಸಿಲುಕಿಕೊಂಡಿದ್ದರು. ತಕ್ಷಣ ಸ್ಥಳೀಯರು ‌ಮನೆಯೊಳಗೆ ಸಿಕ್ಕಿಹಾಕಿಕೊಂಡಿರುವ ತಾಯಿ-ಮಗಳನ್ನು ರಕ್ಷಿಸಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಗ್ರಾಮ ಲೆಕ್ಕಾಧಿಕಾರಿ ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ. ಅಲ್ಲದೆ ಮೆಸ್ಕಾಂ ಅಧಿಕಾರಿಗಳು ಆಗಮಿಸಿ ಮರಗಳ ತೆರವು ಕಾರ್ಯ ಕೈಗೊಂಡಿದ್ದಾರೆ. ಮನೆಯೊಳಗಿನ ಸೊತ್ತು ಸಹಿತ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

Intro:ಮಂಗಳೂರು: ನಗರದ ಕೆಪಿಟಿ ಬಳಿಯ ಬಾರೆಬೈಲಿನಲ್ಲಿ ಮರವೊಂದು ಬುಡಸಮೇತ ಬಿದ್ದ ಪರಿಣಾಮ ಮನೆ ಸಂಪೂರ್ಣ ನೆಲಸಮವಾಗಿದೆ. ಪರಿಣಾಮ ಮನೆಯೊಳಗಿದ್ದ ಇಬ್ಬರು ಮಹಿಳೆಯರು ತೀವ್ರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಮನೆಯೊಳಗಿದ್ದ ತಾಯಿ ಗಿರಿಯಮ್ಮ(90) ಹಾಗೂ ಮಗಳು ದೇವಯಾನಿ(60) ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರು.

ನಿನ್ನೆ ಸಂಜೆ 7.30ಗಂಟೆಗೆ ಸುರಿದ ಧಾರಾಕಾರ ಮಳೆಗೆ ಬೃಹತ್ ಗಾತ್ರದ ಮರವೊಂದು ಬುಡ ಸಮೇತ ಉರುಳಿದ ಪರಿಣಾಮ ಸಮೀಪದಲ್ಲಿದ್ದ ತೆಂಗಿನ ಮರ, ಹಲಸಿನ ಮರಗಳೂ ಮುರಿದು ಮನೆಯ ಮೇಲೆಯೇ ಬಿದ್ದಿದೆ. ಪರಿಣಾಮ ಮನೆ ಸಂಪೂರ್ಣವಾಗಿ ನೆಲಸಮವಾಗಿದೆ. ಅಲ್ಲದೆ ಅಲ್ಲೇ ಹಾದು ಹೋಗಿರುವ ವಿದ್ಯುತ್ ತಂತಿಯ ಮೇಲೆ ಮರ ಬಿದ್ದಿರುವುದರಿಂದ ವಿದ್ಯುತ್ ಕಂಬವೂ ಉರುಳಿದೆ.
ಈ ಸಂದರ್ಭ ಮನೆಯೊಳಗೆ ತಾಯಿ ಗಿರಿಯಮ್ಮ ಹಾಗೂ ಮಗಳು ದೇವಯಾನಿ ಸಿಲುಕಿಕೊಂಡಿದ್ದರು. ತಕ್ಷಣ ಸ್ಥಳೀಯರು ‌ಮನೆಯೊಳಗೆ ಸಿಕ್ಕಿಹಾಕಿಕೊಂಡಿರುವ ತಾಯಿ-ಮಗಳನ್ನು ರಕ್ಷಿಸಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.




Body:ಸ್ಥಳಕ್ಕೆ ಆಗಮಿಸಿದ ಗ್ರಾಮ ಲೆಕ್ಕಾಧಿಕಾರಿ ಸ್ಥಳಕ್ಕೆ ಆಗಮಿಸಿ ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ. ಅಲ್ಲದೆ ಮೆಸ್ಕಾಂ ಅಧಿಕಾರಿಗಳು ಆಗಮಿಸಿ ಮರಗಳ ತೆರವು ಕಾರ್ಯ ಕೈಗೊಂಡಿದ್ದಾರೆ. ಮನೆಯೊಳಗಿನ ಸೊತ್ತು ಸಹಿತ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಈ ಸಂದರ್ಭ ಸ್ಥಳೀಯ ರಮೇಶ್ ಆಚಾರ್ಯ ಮಾತನಾಡಿ, ಈ ಬಾರೆಬೈಲು ಪ್ರದೇಶದ ಗಿರಿಯಮ್ಮ ಎಂಬವರ ಮನೆಗೆ ಬೃಹತ್ ಗಾತ್ರದ ಮರ ಬುಡಸಮೇತ ಉರುಳಿ ಬಿದ್ದ ಪರಿಣಾಮ ಮನೆ ಸಂಪೂರ್ಣ ಕುಸಿದು ತಾಯಿ-ಮಗಳಿಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಎ.ಜೆ.ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಅಧಿಕಾರಿಗಳು ಸ್ಥಳಕ್ಕೆ ತಕ್ಷಣ ಆಗಮಿಸಿ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ಮರವನ್ನು ತೆರವುಗೊಳಿಸುವ ಕಾರ್ಯವನ್ನು ಈಗಾಗಲೇ ಮಾಡಲಾಗುತ್ತಿದೆ. ಮನೆ ಪೂರ್ತಿಯಾಗಿ ನೆಲಸಮವಾಗಿರುವುದರಿಂದ ಮನೆಯಲ್ಲಿರುವವರು ಬೀದಿಪಾಲಾಗಿದ್ದಾರೆ. ಹಾಗಾಗಿ ತಕ್ಷಣ ಅವರಿಗೆ ಮನೆಯ ವ್ಯವಸ್ಥೆಯಾಗಬೇಕು. ಈ ಬಗ್ಗೆ ಅಧಿಕಾರಿಗಳು ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ ಎಂದು ಹೇಳಿದರು.

Reporter_Vishwanath Panjimogaru


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.