ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 'ವೀರರಾಣಿ ಅಬ್ಬಕ್ಕ'ಳ ಹೆಸರಿಡಬೇಕೆಂಬ ಒತ್ತಾಯವನ್ನು ನಾವು ಸಾಕಷ್ಟು ವರ್ಷಗಳಿಂದ ಮಾಡುತ್ತಿದ್ದರೂ, ಇನ್ನೂ ಆ ಕನಸು ಈಡೇರಿಲ್ಲ ಎಂದು ಮಾಜಿ ಶಾಸಕ ಜಯರಾಮ ಶೆಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ನಾಮಕರಣ ಬದಲಾವಣೆ ಬಗ್ಗೆ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬಗ್ಗೆ ಅಂದಿನ ಸಂಸದ ಧನಂಜಯ ಕುಮಾರ್ ಅವರು ಲೋಕಸಭೆಯಲ್ಲಿ, ಶಾಸಕಿಯಾಗಿದ್ದ ಶಕುಂತಲಾ ಶೆಟ್ಟಿಯವರು ವಿಧಾನಸಭೆಯಲ್ಲಿ ಹಾಗೂ ಪರಿಷತ್ ಸದಸ್ಯರಾಗಿದ್ದ ಐವನ್ ಡಿಸೋಜ ವಿಧಾನ ಪರಿಷತ್ನಲ್ಲಿ ಪ್ರಸ್ತಾಪ ಮಾಡಿದ್ದರು.
ತುಳುನಾಡಿನ ಕ್ರಾಂತಿ ಪುರುಷರಾದ ಕೋಟಿ - ಚೆನ್ನಯರ ಹೆಸರು ಇಡಬೇಕೆಂಬ ಕೂಗು ಸಹ ಕೇಳಿ ಬರುತ್ತಿದೆ. ಅವರ ಬಗ್ಗೆ ನಮಗೆ ಗೌರವವಿದೆ. ಆದರೆ, ಕೋಟಿ - ಚೆನ್ನಯರಿಗಿಂತಲೂ 200 ವರ್ಷಗಳ ಕಾಲ ಹಿಂದಿನವಳು ಅಬ್ಬಕ್ಕ. ಆದ್ದರಿಂದ ದೇಶದ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ಅಬ್ಬಕ್ಕಳ ಹೆಸರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಡಬೇಕೆಂಬುದು ನಮ್ಮೆಲ್ಲರ ಹಕ್ಕೊತ್ತಾಯವಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ಸಂಗೊಳ್ಳಿ ರಾಯಣ್ಣ ಪುತ್ಥಳಿ ಕೆಡವಿ ಪುಂಡರ ಅಟ್ಟಹಾಸ.. ಬೆಳಗಾವಿಯಲ್ಲಿ ಪರಿಸ್ಥಿತಿ ಉದ್ವಿಗ್ನ