ETV Bharat / state

ಮಂಗಳೂರಿನಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ: 298 ಮಂದಿ ಚಾಲಕರ ಡಿಎಲ್​ ರದ್ದಿಗೆ ಶಿಫಾರಸು

author img

By ETV Bharat Karnataka Team

Published : Aug 22, 2023, 12:10 PM IST

ಮಂಗಳೂರಿನಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ 298 ಚಾಲಕರ ಡಿಎಲ್ ರದ್ದಿಗೆ ಶಿಫಾರಸು ಮಾಡಲಾಗಿದೆ.

ಪೊಲೀಸ್ ಕಮಿಷನರೇಟ್ ಕಚೇರಿ
ಪೊಲೀಸ್ ಕಮಿಷನರೇಟ್ ಕಚೇರಿ

ಮಂಗಳೂರು(ದಕ್ಷಿಣಕನ್ನಡ): ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ 298 ಮಂದಿಯ ಚಾಲನಾ ಪರವಾನಗಿ (ಡಿಎಲ್ )ರದ್ದು ಮಾಡುವಂತೆ ನಗರ ಪೊಲೀಸ್ ಕಮಿಷನರ್ ಸಾರಿಗೆ ಅಧಿಕಾರಿಗಳಿಗೆ ಶಿಫಾರಸು ಮಾಡಿದ್ದಾರೆ.

ನಿರಂತರ ಸಂಚಾರ ನಿಯಮ ಉಲ್ಲಂಘನೆ, ಅಜಾಗರೂಕತೆ, ನಿರ್ಲಕ್ಷ್ಯದಿಂದ ಚಾಲನೆ ಆರೋಪದ ಮೇಲೆ ಕಟ್ಟುನಿಟ್ಟಿನ ಕ್ರಮಕ್ಕೆ ಮಂಗಳೂರು ನಗರ ಪೊಲೀಸ್ ಇಲಾಖೆ ಮುಂದಾಗಿದೆ. ಸುಪ್ರೀಂ ಕೋರ್ಟ್​ ರಸ್ತೆ ಸುರಕ್ಷತಾ ಸಮಿತಿ ನಿರ್ದೇಶನದಂತೆ ನಿತ್ಯ ಭಾರತೀಯ ದಂಡ ಸಂಹಿತೆ 1860 ಹಾಗೂ ಭಾರತೀಯ ಮೋಟಾರು ವಾಹನ ಕಾಯಿದೆ-1988/2019ರಡಿ, ಆ. 6ರಿಂದ 20 ರವರೆಗೆ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಚಾಲಕರ ಅನುಜ್ಞಾ ಪತ್ರ (ಡಿಎಲ್)ಗಳನ್ನು ಅಮಾನತುಪಡಿಸುವ ಬಗ್ಗೆ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಕಚೇರಿ ಪ್ರಕಟಣೆ ತಿಳಿಸಿದೆ.

298 ಪ್ರಕರಣಗಳ ವಿವರ: ಅತಿವೇಗ, ನಿರ್ಲಕ್ಷ್ಯದ ಚಾಲನೆ ಪ್ರಕರಣದಲ್ಲಿ 71 ಪ್ರಕರಣಗಳು ದಾಖಲಾದರೆ, ಮದ್ಯಸೇವಿಸಿ ಚಾಲನೆ 20 ಪ್ರಕರಣ, ಗೂಡ್ಸ್ ವಾಹನದಲ್ಲಿ ಪ್ರಯಾಣಿಕರ ಸಾಗಾಟ 42 ಪ್ರಕರಣ, ಚಾಲನೆ ವೇಳೆ ಮೊಬೈಲ್ ಬಳಕೆ 4 ಪ್ರಕರಣ, ಸಿಗ್ನಲ್ ಜಂಪಿಂಗ್ ಪ್ರಕರಣ 10 ಪ್ರಕರಣ, ದ್ವಿಚಕ್ರ ವಾಹನದಲ್ಲಿ ಮೂವರು ಪ್ರಯಾಣ 7 ಪ್ರಕರಣ, ಹೆಲ್ಮೆಟ್ ಹಾಕದೆ ವಾಹನ ಚಾಲನೆ 128 ಪ್ರಕರಣ, ಸೀಟ್‌ ಬೆಲ್ಟ್ ಹಾಕದೆ ಚಾಲನೆಯ 16 ಪ್ರಕರಣಗಳು ದಾಖಲಾಗಿವೆ. ಒಟ್ಟು 298 ಪ್ರಕರಣ. ಈ ಪ್ರಕರಣಗಳಲ್ಲಿ ಡಿಎಲ್ ರದ್ದಿಗೆ ಶಿಫಾರಸು ಮಾಡಲಾಗಿದೆ.

ನಗರ ಪೊಲೀಸ್‌ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ 15 ದಿನಗಳಲ್ಲಿ ನಡೆದ ವಿಶೇಷ ಕಾರ್ಯಾಚರಣೆಯ ಮೂಲಕ ನಿಷೇಧಿತ ಸ್ಥಳದಲ್ಲಿ ಪಾರ್ಕಿಂಗ್ 593, ಕರ್ಕಶ ಹಾರ್ನ್ 106, ಟಿಂಟ್ ಗ್ಲಾಸ್ 70, ಹೆಚ್ಚು ಬಾಡಿಗೆ ಅಥವಾ ಸೂಚಿತ ಸ್ಥಳಕ್ಕೆ ಬಾಡಿಗೆ ಹೋಗದಿರುವ ಪ್ರಕರಣ 13, ಏಕಮುಖ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚಾರದ 28 ಪ್ರಕರಣಗಳು ದಾಖಲಾಗಿವೆ.

ಹಲ್ಲೆ ಪ್ರಕರಣ- ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್: ಸುರತ್ಕಲ್​ನಲ್ಲಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಇಡ್ಯಾ ಗ್ರಾಮದ ಆಶ್ರಯ ಕಾಲೊನಿ ನಿವಾಸಿ ಚೆನ್ನಪ್ಪ ಮುತ್ತು (18) ಬಂಧಿತ ಆರೋಪಿ. ಜು.16ರಂದು ಜನತಾ ಕಾಲೊನಿ ಬಳಿ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಭಂಡಾರಿ ಹಾಗೂ ಬಸವರಾಜ್ ಎಂಬವರನ್ನು ಪೊಲೀಸರು ಬಂಧಿಸಿದ್ದರು.

ಈ ಪ್ರಕರಣದಲ್ಲಿ ಚೆನ್ನಪ್ಪ ಮುತ್ತು ತಲೆಮರೆಸಿಕೊಂಡಿದ್ದ, ಈತನ ವಿರುದ್ಧ ಈ ಹಿಂದೆಯೂ ಅನೇಕ ಪ್ರಕರಣ ದಾಖಲಾಗಿದ್ದವು. ಕೋಮು ಗಲಭೆ ಸೃಷ್ಟಿಸುವ ಉದ್ದೇಶದಿಂದ ಜನತಾ ಕಾಲೊನಿಯಲ್ಲಿರುವ ಜುಮ್ಮಾ ಮಸೀದಿಗೆ ಕಲ್ಲು ಹೊಡೆದ ಪ್ರಕರಣ, ಕಾಲೇಜು ವಿದ್ಯಾರ್ಥಿಗೆ ಹಲ್ಲೆ ನಡೆಸಿದ ಪ್ರಕರಣ ಸೇರಿದಂತೆ ಕೆಲವು ಪ್ರಕರಣಗಳಲ್ಲಿ ಈತ ಆರೋಪಿಯಾಗಿದ್ದ.

ಇದನ್ನೂ ಓದಿ: ಮಂಗಳೂರು: ಜೆಸಿಬಿ ಬಳಸಿ ATM ಕಳವು ಯತ್ನ; ನಾಲ್ವರ ಬಂಧನ, ₹15.50 ಮೌಲ್ಯದ ಸೊತ್ತು ವಶಕ್ಕೆ

ಮಂಗಳೂರು(ದಕ್ಷಿಣಕನ್ನಡ): ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ 298 ಮಂದಿಯ ಚಾಲನಾ ಪರವಾನಗಿ (ಡಿಎಲ್ )ರದ್ದು ಮಾಡುವಂತೆ ನಗರ ಪೊಲೀಸ್ ಕಮಿಷನರ್ ಸಾರಿಗೆ ಅಧಿಕಾರಿಗಳಿಗೆ ಶಿಫಾರಸು ಮಾಡಿದ್ದಾರೆ.

ನಿರಂತರ ಸಂಚಾರ ನಿಯಮ ಉಲ್ಲಂಘನೆ, ಅಜಾಗರೂಕತೆ, ನಿರ್ಲಕ್ಷ್ಯದಿಂದ ಚಾಲನೆ ಆರೋಪದ ಮೇಲೆ ಕಟ್ಟುನಿಟ್ಟಿನ ಕ್ರಮಕ್ಕೆ ಮಂಗಳೂರು ನಗರ ಪೊಲೀಸ್ ಇಲಾಖೆ ಮುಂದಾಗಿದೆ. ಸುಪ್ರೀಂ ಕೋರ್ಟ್​ ರಸ್ತೆ ಸುರಕ್ಷತಾ ಸಮಿತಿ ನಿರ್ದೇಶನದಂತೆ ನಿತ್ಯ ಭಾರತೀಯ ದಂಡ ಸಂಹಿತೆ 1860 ಹಾಗೂ ಭಾರತೀಯ ಮೋಟಾರು ವಾಹನ ಕಾಯಿದೆ-1988/2019ರಡಿ, ಆ. 6ರಿಂದ 20 ರವರೆಗೆ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಚಾಲಕರ ಅನುಜ್ಞಾ ಪತ್ರ (ಡಿಎಲ್)ಗಳನ್ನು ಅಮಾನತುಪಡಿಸುವ ಬಗ್ಗೆ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಕಚೇರಿ ಪ್ರಕಟಣೆ ತಿಳಿಸಿದೆ.

298 ಪ್ರಕರಣಗಳ ವಿವರ: ಅತಿವೇಗ, ನಿರ್ಲಕ್ಷ್ಯದ ಚಾಲನೆ ಪ್ರಕರಣದಲ್ಲಿ 71 ಪ್ರಕರಣಗಳು ದಾಖಲಾದರೆ, ಮದ್ಯಸೇವಿಸಿ ಚಾಲನೆ 20 ಪ್ರಕರಣ, ಗೂಡ್ಸ್ ವಾಹನದಲ್ಲಿ ಪ್ರಯಾಣಿಕರ ಸಾಗಾಟ 42 ಪ್ರಕರಣ, ಚಾಲನೆ ವೇಳೆ ಮೊಬೈಲ್ ಬಳಕೆ 4 ಪ್ರಕರಣ, ಸಿಗ್ನಲ್ ಜಂಪಿಂಗ್ ಪ್ರಕರಣ 10 ಪ್ರಕರಣ, ದ್ವಿಚಕ್ರ ವಾಹನದಲ್ಲಿ ಮೂವರು ಪ್ರಯಾಣ 7 ಪ್ರಕರಣ, ಹೆಲ್ಮೆಟ್ ಹಾಕದೆ ವಾಹನ ಚಾಲನೆ 128 ಪ್ರಕರಣ, ಸೀಟ್‌ ಬೆಲ್ಟ್ ಹಾಕದೆ ಚಾಲನೆಯ 16 ಪ್ರಕರಣಗಳು ದಾಖಲಾಗಿವೆ. ಒಟ್ಟು 298 ಪ್ರಕರಣ. ಈ ಪ್ರಕರಣಗಳಲ್ಲಿ ಡಿಎಲ್ ರದ್ದಿಗೆ ಶಿಫಾರಸು ಮಾಡಲಾಗಿದೆ.

ನಗರ ಪೊಲೀಸ್‌ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ 15 ದಿನಗಳಲ್ಲಿ ನಡೆದ ವಿಶೇಷ ಕಾರ್ಯಾಚರಣೆಯ ಮೂಲಕ ನಿಷೇಧಿತ ಸ್ಥಳದಲ್ಲಿ ಪಾರ್ಕಿಂಗ್ 593, ಕರ್ಕಶ ಹಾರ್ನ್ 106, ಟಿಂಟ್ ಗ್ಲಾಸ್ 70, ಹೆಚ್ಚು ಬಾಡಿಗೆ ಅಥವಾ ಸೂಚಿತ ಸ್ಥಳಕ್ಕೆ ಬಾಡಿಗೆ ಹೋಗದಿರುವ ಪ್ರಕರಣ 13, ಏಕಮುಖ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚಾರದ 28 ಪ್ರಕರಣಗಳು ದಾಖಲಾಗಿವೆ.

ಹಲ್ಲೆ ಪ್ರಕರಣ- ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್: ಸುರತ್ಕಲ್​ನಲ್ಲಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಇಡ್ಯಾ ಗ್ರಾಮದ ಆಶ್ರಯ ಕಾಲೊನಿ ನಿವಾಸಿ ಚೆನ್ನಪ್ಪ ಮುತ್ತು (18) ಬಂಧಿತ ಆರೋಪಿ. ಜು.16ರಂದು ಜನತಾ ಕಾಲೊನಿ ಬಳಿ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಭಂಡಾರಿ ಹಾಗೂ ಬಸವರಾಜ್ ಎಂಬವರನ್ನು ಪೊಲೀಸರು ಬಂಧಿಸಿದ್ದರು.

ಈ ಪ್ರಕರಣದಲ್ಲಿ ಚೆನ್ನಪ್ಪ ಮುತ್ತು ತಲೆಮರೆಸಿಕೊಂಡಿದ್ದ, ಈತನ ವಿರುದ್ಧ ಈ ಹಿಂದೆಯೂ ಅನೇಕ ಪ್ರಕರಣ ದಾಖಲಾಗಿದ್ದವು. ಕೋಮು ಗಲಭೆ ಸೃಷ್ಟಿಸುವ ಉದ್ದೇಶದಿಂದ ಜನತಾ ಕಾಲೊನಿಯಲ್ಲಿರುವ ಜುಮ್ಮಾ ಮಸೀದಿಗೆ ಕಲ್ಲು ಹೊಡೆದ ಪ್ರಕರಣ, ಕಾಲೇಜು ವಿದ್ಯಾರ್ಥಿಗೆ ಹಲ್ಲೆ ನಡೆಸಿದ ಪ್ರಕರಣ ಸೇರಿದಂತೆ ಕೆಲವು ಪ್ರಕರಣಗಳಲ್ಲಿ ಈತ ಆರೋಪಿಯಾಗಿದ್ದ.

ಇದನ್ನೂ ಓದಿ: ಮಂಗಳೂರು: ಜೆಸಿಬಿ ಬಳಸಿ ATM ಕಳವು ಯತ್ನ; ನಾಲ್ವರ ಬಂಧನ, ₹15.50 ಮೌಲ್ಯದ ಸೊತ್ತು ವಶಕ್ಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.