ETV Bharat / state

ಪುತ್ತೂರು: ಸಾವರ್ಕರ್ ಫೋಟೋ ತೆಗೆದು ಟಿಪ್ಪು ಫೋಟೋ ಹಾಕುವಂತೆ SDPI ಕಾರ್ಯಕರ್ತರ ಪಟ್ಟು

author img

By

Published : Aug 15, 2021, 1:25 PM IST

Updated : Aug 15, 2021, 4:10 PM IST

ಗ್ರಾಮ ಪಂಚಾಯಿತಿಯ ಸ್ವಾತಂತ್ರ್ಯ ರಥಕ್ಕೆ ಕಬಕ ಗ್ರಾಮ ಪಂಚಾಯಿತಿ ವಠಾರದಲ್ಲಿ ಗ್ರಾ.ಪಂ ಅಧ್ಯಕ್ಷರು ಚಾಲನೆ ನೀಡಿ ಜೈಕಾರ ಹಾಕುತ್ತಿದ್ದಂತೆ, ಎಸ್​ಡಿಪಿಐ ಕಾರ್ಯಕರ್ತರು ಧಿಕ್ಕಾರ ಕೂಗಿ ತಡೆ ಒಡ್ಡಿದ್ದಾರೆ.

ಪುತ್ತೂರಿನಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್​ಡಿಪಿಐ ಕಾರ್ಯಕರ್ತರಿಂದ ತಡೆ
ಪುತ್ತೂರಿನಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್​ಡಿಪಿಐ ಕಾರ್ಯಕರ್ತರಿಂದ ತಡೆ

ಪುತ್ತೂರು: ಕಬಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಲಿರುವ ಸ್ವಾತಂತ್ರ್ಯ ರಥಕ್ಕೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಎಸ್​ಡಿಪಿಐ ಕಾರ್ಯಕರ್ತರು ತಡೆಯೊಡ್ಡಿದ ಪ್ರಸಂಗ ನಡೆಯಿತು.

ಗ್ರಾ.ಪಂ ರಥಕ್ಕೆ ಕಬಕ ಗ್ರಾಮ ಪಂಚಾಯಿತಿ ವಠಾರದಲ್ಲಿ ಅಧ್ಯಕ್ಷರು ಚಾಲನೆ ನೀಡಿ ಜೈಕಾರ ಹಾಕುತ್ತಿದ್ದಂತೆ ಎಸ್​ಡಿಪಿಐ ಕಾರ್ಯಕರ್ತರು ಧಿಕ್ಕಾರ ಕೂಗಿದರು. ಬಳಿಕ ಸ್ವಾತಂತ್ರ್ಯ ರಥಕ್ಕೆ ತಡೆ ಉಂಟು ಮಾಡಿದರು.

SDPI ಕಾರ್ಯಕರ್ತರ ಗಲಾಟೆ

ಈ ವೇಳೆ ಪರಸ್ಪರ ವಾಗ್ವಾದ ನಡೆಯಿತು. ಗ್ರಾ.ಪಂ ಅಧ್ಯಕ್ಷರು ಹಾಗೂ ಪಿಡಿಒ ಸಮಾಧಾನ ಮಾಡಿದರೂ ಕೇಳಿಸಿಕೊಳ್ಳದ ತಂಡ ವೀರ ಸಾವರ್ಕರ್ ಫೋಟೋ ತೆಗೆದು ಟಿಪ್ಪು ಸುಲ್ತಾನ್ ಫೋಟೋ ಅಳವಡಿಸುವಂತೆ ಪಟ್ಟು ಹಿಡಿಯಿತು.

ಪುತ್ತೂರು ನಗರ ಠಾಣಾ ಇನ್​ಸ್ಪೆಕ್ಟರ್ ಗೋಪಾಲ ನಾಯ್ಕ್ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಗುಂಪನ್ನು ಚದುರಿಸಿತು.

ಪುತ್ತೂರು: ಕಬಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಲಿರುವ ಸ್ವಾತಂತ್ರ್ಯ ರಥಕ್ಕೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಎಸ್​ಡಿಪಿಐ ಕಾರ್ಯಕರ್ತರು ತಡೆಯೊಡ್ಡಿದ ಪ್ರಸಂಗ ನಡೆಯಿತು.

ಗ್ರಾ.ಪಂ ರಥಕ್ಕೆ ಕಬಕ ಗ್ರಾಮ ಪಂಚಾಯಿತಿ ವಠಾರದಲ್ಲಿ ಅಧ್ಯಕ್ಷರು ಚಾಲನೆ ನೀಡಿ ಜೈಕಾರ ಹಾಕುತ್ತಿದ್ದಂತೆ ಎಸ್​ಡಿಪಿಐ ಕಾರ್ಯಕರ್ತರು ಧಿಕ್ಕಾರ ಕೂಗಿದರು. ಬಳಿಕ ಸ್ವಾತಂತ್ರ್ಯ ರಥಕ್ಕೆ ತಡೆ ಉಂಟು ಮಾಡಿದರು.

SDPI ಕಾರ್ಯಕರ್ತರ ಗಲಾಟೆ

ಈ ವೇಳೆ ಪರಸ್ಪರ ವಾಗ್ವಾದ ನಡೆಯಿತು. ಗ್ರಾ.ಪಂ ಅಧ್ಯಕ್ಷರು ಹಾಗೂ ಪಿಡಿಒ ಸಮಾಧಾನ ಮಾಡಿದರೂ ಕೇಳಿಸಿಕೊಳ್ಳದ ತಂಡ ವೀರ ಸಾವರ್ಕರ್ ಫೋಟೋ ತೆಗೆದು ಟಿಪ್ಪು ಸುಲ್ತಾನ್ ಫೋಟೋ ಅಳವಡಿಸುವಂತೆ ಪಟ್ಟು ಹಿಡಿಯಿತು.

ಪುತ್ತೂರು ನಗರ ಠಾಣಾ ಇನ್​ಸ್ಪೆಕ್ಟರ್ ಗೋಪಾಲ ನಾಯ್ಕ್ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಗುಂಪನ್ನು ಚದುರಿಸಿತು.

Last Updated : Aug 15, 2021, 4:10 PM IST

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.