ETV Bharat / state

ಗೋಡೆ ಮೇಲೆ ಉಗ್ರ ಬರಹ: ಸಂಘ ಪರಿವಾರದ ಕೈವಾಡವಿದೆ ಎಂದ ಎಸ್​ಡಿಪಿಐ

author img

By

Published : Dec 1, 2020, 1:42 PM IST

Updated : Dec 1, 2020, 2:12 PM IST

ಸಂಘ ಪರಿವಾರದ ತಾಳಕ್ಕೆ ತಕ್ಕಂತೆ ಪೊಲೀಸ್ ಇಲಾಖೆ ‌ಕುಣಿಯುತ್ತಿದೆ ಎಂಬ ಸಂಶಯ ಮೂಡುತ್ತಿದೆ. ಪೊಲೀಸ್ ಇಲಾಖೆ ಈ ಹಿಂದಿನ ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳದಿರುವುದು ಇಂತಹ ಘಟನೆಗಳು ನಡೆಯಲು ಕಾರಣ. ಪೊಲೀಸ್ ಇಲಾಖೆ ಮತ್ತು ಸಂಘ ಪರಿವಾರದ ನಡುವೆ ಅಪವಿತ್ರ ಮೈತ್ರಿ ಇದೆ ಎಂಬ ಸಂಶಯವನ್ನು ಎಸ್​ಡಿಪಿಐ ವ್ಯಕ್ತಪಡಿಸಿದೆ.

ಎಸ್​ಡಿಪಿಐ ಸುದ್ದಿಗೋಷ್ಟಿ
ಎಸ್​ಡಿಪಿಐ ಸುದ್ದಿಗೋಷ್ಟಿ

ಮಂಗಳೂರು: ಗೋಡೆಗಳ ಮೇಲೆ ಉಗ್ರ ಬರಹ ಬರೆದಿರುವ ಪ್ರಕರಣದಲ್ಲಿ ಸಂಘ ಪರಿವಾರದ ಕೈವಾಡವಿದೆ ಎಂಬ ಶಂಕೆಯಿದೆ ಎಂದು ಎಸ್​ಡಿಪಿಐ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಂಧಗಿಯಲ್ಲಿ ಪಾಕಿಸ್ತಾನದ ಧ್ವಜ, ಚಾಮರಾಜನಗರ ದೇವಸ್ಥಾನ ಮುಂದೆ ದನದ ರುಂಡ ಬಿಸಾಡುವ ಕೃತ್ಯ, ಶೃಂಗೇರಿ ಪ್ರತಿಮೆ ಮೇಲೆ ಧ್ವಜ ಪ್ರಕರಣದಲ್ಲಿ ಸಂಘ ಪರಿವಾರದವರು ಭಾಗಿಯಾಗಿದ್ದರು. ಮಂಗಳೂರಿನ ಅಲ್ಪಸಂಖ್ಯಾತ ಕಚೇರಿ ಮೇಲೆ, ಪಂಪ್​ವೆಲ್ ಮಸೀದಿ ಮೇಲೆ ಕಲ್ಲೆಸೆತದಲ್ಲಿಯೂ ಅವರ ಪಾತ್ರವಿದೆ. ಹೀಗಿರುವಾಗ ಮಂಗಳೂರಿನ ಉಗ್ರ ಗೋಡೆ ಬರಹ ಪ್ರಕರಣದಲ್ಲಿಯೂ ಸಂಘ ಪರಿವಾರದ ಕೈವಾಡವಿದೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ ಎಂದು ಹೇಳಿದರು. ಈ ಕೃತ್ಯಗಳನ್ನು ಜಿಲ್ಲೆಯಲ್ಲಿ ಶಾಂತಿ ಕದಡಲು, ಗಲಭೆ ಎಬ್ಬಿಸಲು ಕೋಮುವಾದಿ ಶಕ್ತಿಗಳು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಆರ್​ಎಸ್​ಎಸ್​ ಬಗ್ಗೆ ಎಸ್​ಡಿಪಿಐಗೆ ಅನುಮಾನ

ಈ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸದಿರುವುದು ಯಕ್ಷ ಪ್ರಶ್ನೆಯಾಗಿದೆ. ಆರ್​ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಉಳ್ಳಾಲವನ್ನು ಪಾಕಿಸ್ತಾನ ಎಂದು ಹೇಳಿ ದೇಶದ್ರೋಹಿ ಹೇಳಿಕೆ ನೀಡಿದ್ದರು.

ಅವರ ಮೇಲೆ ಎಸ್​ಡಿಪಿಐ ದೂರು ನೀಡಿದರೂ ಪೊಲೀಸರು ಎಫ್​ಐಆರ್ ದಾಖಲಿಸಿಲ್ಲ. ಸಂಘ ಪರಿವಾರದ ತಾಳಕ್ಕೆ ತಕ್ಕಂತೆ ಪೊಲೀಸ್ ಇಲಾಖೆ ‌ಕುಣಿಯುತ್ತಿದೆ ಎಂಬ ಸಂಶಯ ಮೂಡುತ್ತಿದೆ. ಪೊಲೀಸ್ ಇಲಾಖೆ ಈ ಹಿಂದಿನ ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳದಿರುವುದು ಇಂತಹ ಘಟನೆಗಳು ನಡೆಯಲು ಕಾರಣ. ಪೊಲೀಸ್ ಇಲಾಖೆ ಮತ್ತು ಸಂಘ ಪರಿವಾರದ ನಡುವೆ ಅಪವಿತ್ರ ಮೈತ್ರಿ ಇದೆ ಎಂಬ ಸಂಶಯ ಕಾಡುತ್ತಿದೆ ಎಂದು ಅವರು ಹೇಳಿದರು.

ಮಂಗಳೂರು: ಗೋಡೆಗಳ ಮೇಲೆ ಉಗ್ರ ಬರಹ ಬರೆದಿರುವ ಪ್ರಕರಣದಲ್ಲಿ ಸಂಘ ಪರಿವಾರದ ಕೈವಾಡವಿದೆ ಎಂಬ ಶಂಕೆಯಿದೆ ಎಂದು ಎಸ್​ಡಿಪಿಐ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಂಧಗಿಯಲ್ಲಿ ಪಾಕಿಸ್ತಾನದ ಧ್ವಜ, ಚಾಮರಾಜನಗರ ದೇವಸ್ಥಾನ ಮುಂದೆ ದನದ ರುಂಡ ಬಿಸಾಡುವ ಕೃತ್ಯ, ಶೃಂಗೇರಿ ಪ್ರತಿಮೆ ಮೇಲೆ ಧ್ವಜ ಪ್ರಕರಣದಲ್ಲಿ ಸಂಘ ಪರಿವಾರದವರು ಭಾಗಿಯಾಗಿದ್ದರು. ಮಂಗಳೂರಿನ ಅಲ್ಪಸಂಖ್ಯಾತ ಕಚೇರಿ ಮೇಲೆ, ಪಂಪ್​ವೆಲ್ ಮಸೀದಿ ಮೇಲೆ ಕಲ್ಲೆಸೆತದಲ್ಲಿಯೂ ಅವರ ಪಾತ್ರವಿದೆ. ಹೀಗಿರುವಾಗ ಮಂಗಳೂರಿನ ಉಗ್ರ ಗೋಡೆ ಬರಹ ಪ್ರಕರಣದಲ್ಲಿಯೂ ಸಂಘ ಪರಿವಾರದ ಕೈವಾಡವಿದೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ ಎಂದು ಹೇಳಿದರು. ಈ ಕೃತ್ಯಗಳನ್ನು ಜಿಲ್ಲೆಯಲ್ಲಿ ಶಾಂತಿ ಕದಡಲು, ಗಲಭೆ ಎಬ್ಬಿಸಲು ಕೋಮುವಾದಿ ಶಕ್ತಿಗಳು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಆರ್​ಎಸ್​ಎಸ್​ ಬಗ್ಗೆ ಎಸ್​ಡಿಪಿಐಗೆ ಅನುಮಾನ

ಈ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸದಿರುವುದು ಯಕ್ಷ ಪ್ರಶ್ನೆಯಾಗಿದೆ. ಆರ್​ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಉಳ್ಳಾಲವನ್ನು ಪಾಕಿಸ್ತಾನ ಎಂದು ಹೇಳಿ ದೇಶದ್ರೋಹಿ ಹೇಳಿಕೆ ನೀಡಿದ್ದರು.

ಅವರ ಮೇಲೆ ಎಸ್​ಡಿಪಿಐ ದೂರು ನೀಡಿದರೂ ಪೊಲೀಸರು ಎಫ್​ಐಆರ್ ದಾಖಲಿಸಿಲ್ಲ. ಸಂಘ ಪರಿವಾರದ ತಾಳಕ್ಕೆ ತಕ್ಕಂತೆ ಪೊಲೀಸ್ ಇಲಾಖೆ ‌ಕುಣಿಯುತ್ತಿದೆ ಎಂಬ ಸಂಶಯ ಮೂಡುತ್ತಿದೆ. ಪೊಲೀಸ್ ಇಲಾಖೆ ಈ ಹಿಂದಿನ ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳದಿರುವುದು ಇಂತಹ ಘಟನೆಗಳು ನಡೆಯಲು ಕಾರಣ. ಪೊಲೀಸ್ ಇಲಾಖೆ ಮತ್ತು ಸಂಘ ಪರಿವಾರದ ನಡುವೆ ಅಪವಿತ್ರ ಮೈತ್ರಿ ಇದೆ ಎಂಬ ಸಂಶಯ ಕಾಡುತ್ತಿದೆ ಎಂದು ಅವರು ಹೇಳಿದರು.

Last Updated : Dec 1, 2020, 2:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.