ETV Bharat / state

COVID: ಬಂಟ್ವಾಳದಲ್ಲಿ ತಂದೆ ಅಂತ್ಯಕ್ರಿಯೆ ವೇಳೆ ಕುಸಿದುಬಿದ್ದ ಮಗನೂ ಮೃತ್ಯು ವಶ! - Son who died after father covid

ಕೊಪ್ಪಳ ನಿವಾಸಿ ನಿವೃತ್ತ ಕೆ.ಪಿ.ಟಿ ಪ್ರೊಫೆಸರ್ ಭುಜಂಗ ಶೆಟ್ಟಿ, ಕೋವಿಡ್​ನಿಂದಾಗಿ ಮರಣ ಹೊಂದಿದ್ದರು. ತಂದೆಯ ಅಂತ್ಯಕ್ರಿಯೆ ಸಂದರ್ಭ ಮಗ ಶೈಲೇಶ್ ಕುಸಿದು ಬಿದ್ದ ಕಾರಣ ಅವರನ್ನು ತಕ್ಷಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಮನಕಲಕುವ ಘಟನೆ ನಡೆದಿದೆ.

ಮಗನೂ ಮೃತ್ಯುವಶ
ಮಗನೂ ಮೃತ್ಯುವಶ
author img

By

Published : Jun 2, 2021, 4:18 PM IST

ಬಂಟ್ವಾಳ(ದಕ್ಷಿಣ ಕನ್ನಡ): ಕೋವಿಡ್​ನಿಂದ ಮೃತಪಟ್ಟ ತಂದೆಯ ಅಂತ್ಯಸಂಸ್ಕಾರದ ವೇಳೆ ಮಗನೂ ಸಹ ಕುಸಿದುಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಬೈಲುಗುತ್ತಿನಲ್ಲಿ ನಡೆದಿದೆ.

ಪುಣಚ ಗ್ರಾಮದ ಬೈಲುಗುತ್ತು ಕೊಪ್ಪಳ ನಿವಾಸಿ ನಿವೃತ್ತ ಕೆ.ಪಿ.ಟಿ ಪ್ರೊಫೆಸರ್ ಭುಜಂಗ ಶೆಟ್ಟಿ, ಕೋವಿಡ್​ನಿಂದಾಗಿ ಮರಣ ಹೊಂದಿದ್ದರು. ತಂದೆಯ ಅಂತ್ಯಕ್ರಿಯೆ ಸಂದರ್ಭ ಮಗ ಶೈಲೇಶ್ ಕುಸಿದು ಬಿದ್ದ ಕಾರಣ ಅವರನ್ನು ತಕ್ಷಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

son-who-died-after-father-covid-death-funeral
ತಂದೆ ಅಂತ್ಯಕ್ರಿಯೆ ವೇಳೆ ಕುಸಿದುಬಿದ್ದ ಮಗನೂ ಮೃತ್ಯುವಶ

ಘಟನೆ ಹಿನ್ನೆಲೆ:

ಮಂಗಳವಾರ ಮೃತಪಟ್ಟಿದ್ದ ಭುಜಂಗ ಶೆಟ್ಟಿ ಅವರ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳು ಪುಣಚದ ಅವರ ಮನೆಯಲ್ಲಿ ಬುಧವಾರ ಕೋವಿ​ ನಿಯಾಮಾವಳಿಯಂತೆ ನಡೆಸಲಾಗುತ್ತಿತ್ತು. ಈ ಸಂದರ್ಭ ಅವರ ಪುತ್ರ ಶೈಲೇಶ್ ಭಾಗಿಯಾಗಿದ್ದರು. ಈ ವೇಳೆ ಶೈಲೇಶ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಕೂಡಲೇ ಅವರು ಮನೆಯತ್ತ ಹೋಗಿದ್ದು, ಮನೆಯ ಅಂಗಳ ತಲುಪುತ್ತಲೇ ಕುಸಿದು ಬಿದ್ದಿದ್ದಾರೆ ಎನ್ನಲಾಗ್ತಿದೆ. ತಕ್ಷಣ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆ ತರಲಾಯಿತಾದರೂ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಬಂಟ್ವಾಳ(ದಕ್ಷಿಣ ಕನ್ನಡ): ಕೋವಿಡ್​ನಿಂದ ಮೃತಪಟ್ಟ ತಂದೆಯ ಅಂತ್ಯಸಂಸ್ಕಾರದ ವೇಳೆ ಮಗನೂ ಸಹ ಕುಸಿದುಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಬೈಲುಗುತ್ತಿನಲ್ಲಿ ನಡೆದಿದೆ.

ಪುಣಚ ಗ್ರಾಮದ ಬೈಲುಗುತ್ತು ಕೊಪ್ಪಳ ನಿವಾಸಿ ನಿವೃತ್ತ ಕೆ.ಪಿ.ಟಿ ಪ್ರೊಫೆಸರ್ ಭುಜಂಗ ಶೆಟ್ಟಿ, ಕೋವಿಡ್​ನಿಂದಾಗಿ ಮರಣ ಹೊಂದಿದ್ದರು. ತಂದೆಯ ಅಂತ್ಯಕ್ರಿಯೆ ಸಂದರ್ಭ ಮಗ ಶೈಲೇಶ್ ಕುಸಿದು ಬಿದ್ದ ಕಾರಣ ಅವರನ್ನು ತಕ್ಷಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

son-who-died-after-father-covid-death-funeral
ತಂದೆ ಅಂತ್ಯಕ್ರಿಯೆ ವೇಳೆ ಕುಸಿದುಬಿದ್ದ ಮಗನೂ ಮೃತ್ಯುವಶ

ಘಟನೆ ಹಿನ್ನೆಲೆ:

ಮಂಗಳವಾರ ಮೃತಪಟ್ಟಿದ್ದ ಭುಜಂಗ ಶೆಟ್ಟಿ ಅವರ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳು ಪುಣಚದ ಅವರ ಮನೆಯಲ್ಲಿ ಬುಧವಾರ ಕೋವಿ​ ನಿಯಾಮಾವಳಿಯಂತೆ ನಡೆಸಲಾಗುತ್ತಿತ್ತು. ಈ ಸಂದರ್ಭ ಅವರ ಪುತ್ರ ಶೈಲೇಶ್ ಭಾಗಿಯಾಗಿದ್ದರು. ಈ ವೇಳೆ ಶೈಲೇಶ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಕೂಡಲೇ ಅವರು ಮನೆಯತ್ತ ಹೋಗಿದ್ದು, ಮನೆಯ ಅಂಗಳ ತಲುಪುತ್ತಲೇ ಕುಸಿದು ಬಿದ್ದಿದ್ದಾರೆ ಎನ್ನಲಾಗ್ತಿದೆ. ತಕ್ಷಣ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆ ತರಲಾಯಿತಾದರೂ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.