ETV Bharat / state

ಸಿದ್ಧಾರ್ಥ್ ನಾಪತ್ತೆ ಪ್ರಕರಣ: ನೇತ್ರಾವತಿ ನದಿಯಲ್ಲಿ ತೀವ್ರಗೊಂಡ ಶೋಧ ಕಾರ್ಯ

author img

By

Published : Jul 30, 2019, 10:33 AM IST

Updated : Jul 30, 2019, 2:12 PM IST

ಸಿದ್ಧಾರ್ಥ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸುವಂತೆ ಸಿಎಂ ಬಿಎಸ್​ವೈ ಡಿಜಿ ನೀಲಮಣಿ ರಾಜುಗೆ ಸೂಚಿಸಿದ್ದಾರೆ.

ವಿಶೇಷ ತಂಡ ರಚನೆಗೆ ಡಿಜಿ ನೀಲಮಣಿ ರಾಜು ಅವರಿಂದ ಮಂಗಳೂರು ಕಮಿಷನರ್​ಗೆ ಸೂಚನೆ

ಮಂಗಳೂರು: ಕಾಫಿ ಡೇ ಎಂಡಿ ಸಿದ್ಧಾರ್ಥ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸುವಂತೆ ಡಿಜಿ ನೀಲಮಣಿ ರಾಜುಗೆ ಸಿಎಂ ಬಿಎಸ್​ವೈ ಸೂಚನೆ ನೀಡಿದ ಹಿನ್ನೆಲೆ ಡಿಜಿ ಮಂಗಳೂರು ಕಮಿಷನರ್​ಗೆ ವಿಶೇಷ ತಂಡ ರಚಿಸಿ ತನಿಖೆ ಕೈಗೊಳ್ಳುವಂತೆ ಆದೇಶಿಸಿದ್ದಾರೆ.

ವಿಶೇಷ ತಂಡ ರಚನೆಗೆ ಡಿಜಿ ನೀಲಮಣಿ ರಾಜು ಅವರಿಂದ ಮಂಗಳೂರು ಕಮಿಷನರ್​ಗೆ ಸೂಚನೆ

ಈ ಹಿನ್ನೆಲೆಯಲ್ಲಿ ವಿಶೇಷ ತಂಡ ರಚಿಸಿಕೊಂಡು ಸಿದ್ದಾರ್ಥ್​ಗಾಗಿ ಶೋಧಕಾರ್ಯ ಮುಂದುವರೆದಿದೆ. ಈಗಾಗಲೇ ಮನೆಗೆ ಹಲವು ರಾಜಕೀಯ ಮುಖಂಡರು ಎಸ್​. ಎಂ.ಕೃಷ್ಣ ಅವರನ್ನು ಭೇಟಿ ಮಾಡಲು ಬರುತ್ತಿದ್ದಾರೆ ಎನ್ನಲಾಗುತ್ತಿದೆ. ಸಿದ್ದಾರ್ಥ್​ ಅವರ ಕಾರು ಚಾಲಕ ಬಸವರಾಜ್​ರಿಂದ ಹೇಳಿಕೆ ಪಡೆದು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲು ನೀಲಮಣಿ ರಾಜು ಸೂಚನೆ ನೀಡಿದ್ದಾರೆ.

ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ದಾರ್ಥ್ ಅವರ ದಿಢೀರ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು ನದಿಯಲ್ಲಿ ತೀವ್ರ ಶೋಧ ನಡೆಸುತ್ತಿದ್ದಾರೆ.

ಈಗಾಗಲೇ ಬೆಂಗಳೂರಿನಲ್ಲಿರುವ ಎಸ್.ಎಂ.ಕೃಷ್ಣ ಅವರ ಮನೆಗೆ ಭೇಟಿ ನೀಡಿ, ಸಿದ್ದಾರ್ಥ್ ಪತ್ನಿ‌ ಹಾಗೂ ಸಂಬಂಧಿಕರೊಂದಿಗೆ ಮಾತನಾಡಿದ್ದೇನೆ. ಇದರಿಂದ ಕೆಲವು ಮಾಹಿತಿಯು ದೊರಕಿದೆ. ಸೋಮವಾರ ಸಕಲೇಶಪುರಕ್ಕೆ ತೆರಳುತ್ತೇನೆ ಎಂದು ಬೆಂಗಳೂರಿನಿಂದ ಹೊರಟಿದ್ದಾಗಿ ತಿಳಿಸಿದ್ದಾರೆ. ನಂತರ ಚಾಲಕನಿಗೆ ಮಂಗಳೂರು ಕಡೆ ಹೋಗಲು ಹೇಳಿದ್ದಾರೆ. ಕಾರಿ ನೇತ್ರಾವತಿ ಸೇತುವೆ ಬಳಿ ಕಾರಿನಿಂದ ಇಳಿದು, ಸೇತುವೆ ಮೇಲೆ ಸ್ವಲ್ಪ ದೂರು ನಡೆದು ನಾಪತ್ತೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಮಾಹಿತಿ ನೀಡಿದರು.

ಮಂಗಳೂರು: ಕಾಫಿ ಡೇ ಎಂಡಿ ಸಿದ್ಧಾರ್ಥ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸುವಂತೆ ಡಿಜಿ ನೀಲಮಣಿ ರಾಜುಗೆ ಸಿಎಂ ಬಿಎಸ್​ವೈ ಸೂಚನೆ ನೀಡಿದ ಹಿನ್ನೆಲೆ ಡಿಜಿ ಮಂಗಳೂರು ಕಮಿಷನರ್​ಗೆ ವಿಶೇಷ ತಂಡ ರಚಿಸಿ ತನಿಖೆ ಕೈಗೊಳ್ಳುವಂತೆ ಆದೇಶಿಸಿದ್ದಾರೆ.

ವಿಶೇಷ ತಂಡ ರಚನೆಗೆ ಡಿಜಿ ನೀಲಮಣಿ ರಾಜು ಅವರಿಂದ ಮಂಗಳೂರು ಕಮಿಷನರ್​ಗೆ ಸೂಚನೆ

ಈ ಹಿನ್ನೆಲೆಯಲ್ಲಿ ವಿಶೇಷ ತಂಡ ರಚಿಸಿಕೊಂಡು ಸಿದ್ದಾರ್ಥ್​ಗಾಗಿ ಶೋಧಕಾರ್ಯ ಮುಂದುವರೆದಿದೆ. ಈಗಾಗಲೇ ಮನೆಗೆ ಹಲವು ರಾಜಕೀಯ ಮುಖಂಡರು ಎಸ್​. ಎಂ.ಕೃಷ್ಣ ಅವರನ್ನು ಭೇಟಿ ಮಾಡಲು ಬರುತ್ತಿದ್ದಾರೆ ಎನ್ನಲಾಗುತ್ತಿದೆ. ಸಿದ್ದಾರ್ಥ್​ ಅವರ ಕಾರು ಚಾಲಕ ಬಸವರಾಜ್​ರಿಂದ ಹೇಳಿಕೆ ಪಡೆದು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲು ನೀಲಮಣಿ ರಾಜು ಸೂಚನೆ ನೀಡಿದ್ದಾರೆ.

ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ದಾರ್ಥ್ ಅವರ ದಿಢೀರ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು ನದಿಯಲ್ಲಿ ತೀವ್ರ ಶೋಧ ನಡೆಸುತ್ತಿದ್ದಾರೆ.

ಈಗಾಗಲೇ ಬೆಂಗಳೂರಿನಲ್ಲಿರುವ ಎಸ್.ಎಂ.ಕೃಷ್ಣ ಅವರ ಮನೆಗೆ ಭೇಟಿ ನೀಡಿ, ಸಿದ್ದಾರ್ಥ್ ಪತ್ನಿ‌ ಹಾಗೂ ಸಂಬಂಧಿಕರೊಂದಿಗೆ ಮಾತನಾಡಿದ್ದೇನೆ. ಇದರಿಂದ ಕೆಲವು ಮಾಹಿತಿಯು ದೊರಕಿದೆ. ಸೋಮವಾರ ಸಕಲೇಶಪುರಕ್ಕೆ ತೆರಳುತ್ತೇನೆ ಎಂದು ಬೆಂಗಳೂರಿನಿಂದ ಹೊರಟಿದ್ದಾಗಿ ತಿಳಿಸಿದ್ದಾರೆ. ನಂತರ ಚಾಲಕನಿಗೆ ಮಂಗಳೂರು ಕಡೆ ಹೋಗಲು ಹೇಳಿದ್ದಾರೆ. ಕಾರಿ ನೇತ್ರಾವತಿ ಸೇತುವೆ ಬಳಿ ಕಾರಿನಿಂದ ಇಳಿದು, ಸೇತುವೆ ಮೇಲೆ ಸ್ವಲ್ಪ ದೂರು ನಡೆದು ನಾಪತ್ತೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಮಾಹಿತಿ ನೀಡಿದರು.

Intro:ಮಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ದಾರ್ಥ್ ಅವರ ದಿಢೀರ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು ನದಿಯಲ್ಲಿ ತೀವ್ರ ಶೋಧ ನಡೆಸುತ್ತಿದ್ದಾರೆ.

ಸ್ಥಳಕ್ಕೆ ಬಂದಿರುವ ಡಾಗ್ ಸ್ಕ್ವಾಡ್ ತಂಡ ಸೇತುವೆಯ ಮಧ್ಯ ನಿಂತಿರುವ ಹಿನ್ನೆಲೆಯಲ್ಲಿ ನದಿಯಲ್ಲಿ ತೀವ್ರ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಮಾತನಾಡಿ, ತಾನು ಈಗಾಗಲೇ ಬೆಂಗಳೂರಿನಲ‌್ಲಿರುವ ಎಸ್.ಎಂ.ಕೃಷ್ಣ ಅವರ ಮನೆಗೆ ಭೇಟಿ ನೀಡಿ, ಸಿದ್ದಾರ್ಥ್ ಪತ್ನಿ‌ ಹಾಗೂ ಸಂಬಂಧಿಕರೊಂದಿಗೆ ಮಾತನಾಡಿದ್ದೇನೆ. ಕೆಲವೊಂದು ಮಾಹಿತಿಯನ್ನು ಪಡೆದಿದ್ದೇನೆ ಎಂದು ಹೇಳಿದ್ದಾರೆ.

Body:ನಿನ್ನೆ ಸಕಲೇಶಪುರಕ್ಕೆ ಹೋಗುವೆ ಎಂದು ಬೆಂಗಳೂರಿನಿಂದ ತೆರಳಿದ್ದ ಸಿದ್ದಾರ್ಥ್, ಬಳಿಕ ಕಾರು ಚಾಲಕನಿಗೆ ಮಂಗಳೂರು ಕಡೆ ಹೋಗಲು ತಿಳಿಸಿದ್ದಾರೆ. ಕಾರು ನೇತ್ರಾವತಿ ಸೇತುವೆ ತಲುಪಿದ ಬಳಿಕ ಕಾರಿನಿಂದ ಇಳಿದು, ಸೇತುವೆಯಲ್ಲಿ ಸ್ವಲ್ಪ ದೂರ ನಡೆದು, ನಾಪತ್ತೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ತೀವ್ರವಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದಾರೆ.

Reporter_Vishwanath PanjimogaruConclusion:
Last Updated : Jul 30, 2019, 2:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.