ETV Bharat / state

ಕಡಬದಲ್ಲಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಹಿಟಾಚಿ: ಲಕ್ಷಾಂತರ ರೂಪಾಯಿ ನಷ್ಟ

ಉಪ್ಪಿನಂಗಡಿ ಸಮೀಪದ ಕಾಂಚನದ ವ್ಯಕ್ತಿಗೆ ಸೇರಿದ ಹಿಟಾಚಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆ ಸಂಪೂರ್ಣವಾಗಿ ಪಸರಿಸಿದ್ದರಿಂದ ಹಿಟಾಚಿ ಸುಟ್ಟು ಕರಕಲಾಗಿದೆ.

author img

By

Published : Jan 17, 2022, 8:56 PM IST

Sudden fire in Hitachi
ಹೊತ್ತಿ ಉರಿದ ಹಿಟಾಚಿ

ಕಡಬ (ದಕ್ಷಿಣ ಕನ್ನಡ): ಜಿಲ್ಲೆಯಲ್ಲಿ ಹಿಟಾಚಿವೊಂದು ಇದ್ದಕ್ಕಿದ್ದಂತೆ ಬೆಂಕಿಗಾಹುತಿಯಾದ ಘಟನೆ ಸೋಮವಾರ ಸಂಜೆ ಕಡಬ ಸಮೀಪದ ಕೊಂಬಾರು ಎಂಬಲ್ಲಿ ಸಂಭವಿಸಿದೆ. ಉಪ್ಪಿನಂಗಡಿ ಸಮೀಪದ ಕಾಂಚನದ ವ್ಯಕ್ತಿಗೆ ಸೇರಿದ ಹಿಟಾಚಿಯನ್ನು ಕೊಂಬಾರಿನ ದೇವಸ್ಥಾನದ ಗದ್ದೆಯಲ್ಲಿ ನಿಲ್ಲಿಸಿದ ವೇಳೆ ಈ ಘಟನೆ ನಡೆದಿದೆ.

ಹೊತ್ತಿ ಉರಿದ ಹಿಟಾಚಿ

ಇದ್ದಕ್ಕಿದ್ದಂತೆ ಬೆಂಕಿಯ ಕೆನ್ನಾಲಿಗೆಗೆ ಹಿಟಾಚಿಯು ಆಹುತಿಯಾಗಿದೆ. ತಕ್ಷಣವೇ ಹಿಟಾಚಿಯ ಸಿಬ್ಬಂದಿ ಹಾಗೂ ಸ್ಥಳೀಯರು ನೀರು ಹಾಯಿಸಿ ಬೆಂಕಿಯನ್ನು ನಂದಿಸಲು ಯತ್ನಿಸಿದರಾದರೂ, ಬೆಂಕಿಯ ಕೆನ್ನಾಲಿಗೆ ಸಂಪೂರ್ಣವಾಗಿ ಪಸರಿಸಿದ್ದರಿಂದ ಹಿಟಾಚಿ ಸುಟ್ಟು ಕರಕಲಾಗಿದೆ ಎನ್ನಲಾಗಿದೆ. ಇದರಿಂದಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಹುಲಿ ಬಂತು ಹುಲಿ; ವರ್ಷದಲ್ಲಿ 50ಕ್ಕೂ ಹೆಚ್ಚು ದನಗಳು ಬಲಿ.. ಕಾಫಿನಾಡಿನ ಜನ ಕಂಗಾಲು!

ಕಡಬ (ದಕ್ಷಿಣ ಕನ್ನಡ): ಜಿಲ್ಲೆಯಲ್ಲಿ ಹಿಟಾಚಿವೊಂದು ಇದ್ದಕ್ಕಿದ್ದಂತೆ ಬೆಂಕಿಗಾಹುತಿಯಾದ ಘಟನೆ ಸೋಮವಾರ ಸಂಜೆ ಕಡಬ ಸಮೀಪದ ಕೊಂಬಾರು ಎಂಬಲ್ಲಿ ಸಂಭವಿಸಿದೆ. ಉಪ್ಪಿನಂಗಡಿ ಸಮೀಪದ ಕಾಂಚನದ ವ್ಯಕ್ತಿಗೆ ಸೇರಿದ ಹಿಟಾಚಿಯನ್ನು ಕೊಂಬಾರಿನ ದೇವಸ್ಥಾನದ ಗದ್ದೆಯಲ್ಲಿ ನಿಲ್ಲಿಸಿದ ವೇಳೆ ಈ ಘಟನೆ ನಡೆದಿದೆ.

ಹೊತ್ತಿ ಉರಿದ ಹಿಟಾಚಿ

ಇದ್ದಕ್ಕಿದ್ದಂತೆ ಬೆಂಕಿಯ ಕೆನ್ನಾಲಿಗೆಗೆ ಹಿಟಾಚಿಯು ಆಹುತಿಯಾಗಿದೆ. ತಕ್ಷಣವೇ ಹಿಟಾಚಿಯ ಸಿಬ್ಬಂದಿ ಹಾಗೂ ಸ್ಥಳೀಯರು ನೀರು ಹಾಯಿಸಿ ಬೆಂಕಿಯನ್ನು ನಂದಿಸಲು ಯತ್ನಿಸಿದರಾದರೂ, ಬೆಂಕಿಯ ಕೆನ್ನಾಲಿಗೆ ಸಂಪೂರ್ಣವಾಗಿ ಪಸರಿಸಿದ್ದರಿಂದ ಹಿಟಾಚಿ ಸುಟ್ಟು ಕರಕಲಾಗಿದೆ ಎನ್ನಲಾಗಿದೆ. ಇದರಿಂದಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಹುಲಿ ಬಂತು ಹುಲಿ; ವರ್ಷದಲ್ಲಿ 50ಕ್ಕೂ ಹೆಚ್ಚು ದನಗಳು ಬಲಿ.. ಕಾಫಿನಾಡಿನ ಜನ ಕಂಗಾಲು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.