ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಹಗಲಿರುಳು ಕೆಲಸ ಮಾಡುತ್ತಿರುವ ಹೋಂ ಗಾರ್ಡ್ಸ್ ಸಿಬ್ಬಂದಿಗೆ ಉತ್ತರ ವಿಧಾನಸಭಾ ಸಭಾ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ ಆಹಾರ ಕಿಟ್ ಅನ್ನು ವಿತರಿಸಿದ್ದಾರೆ.
ಇಡೀ ದೇಶವೇ ಲಾಕ್ಡೌನ್ ಆಗಿದ್ದರೂ ವೈದ್ಯಕೀಯ ಸಿಬ್ಬಂದಿ, ಪೊಲೀಸ್ ಇಲಾಖೆ, ಆಶಾ ಕಾರ್ಯಕರ್ತೆಯರು, ಸ್ವಚ್ಛತಾ ಸಿಬ್ಬಂದಿಗಳು ಕೊರೊನಾ ವಾರಿಯರ್ಸ್ಗಳಾಗಿ ಹೋರಾಟ ನಡೆಸುತ್ತಿದ್ದಾರೆ. ಅಂತವರಿಗೆ ಕಿಂಚಿತ್ತು ಸೇವೆಯ ಭಾಗವಾಗಿ ಆಹಾರ ಕಿಟ್ಗಳನ್ನು ವಿತರಿಸುತ್ತಿದ್ದೇವೆ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ದ. ಕ ಜಿಲ್ಲೆ ಹೋಮ್ ಗಾರ್ಡ್ಸ್ ಕಮಾ೦ಡರ್ ಡಾ. ಮುರಳಿ ಮೋಹನ್ ಚುಂತಾರ್, ಸ್ಥಳೀಯ ಮ.ನ.ಪಾ ಸದಸ್ಯರು, ಹೋಮ್ ಗಾರ್ಡ್ಸ್ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.