ಮಂಗಳೂರು : ಲಾಕ್ಡೌನ್ನ ನಡುವೆ ಎಂಎಸ್ಐಎಲ್ನ ವೈನ್ಸ್ ಶಾಪ್ಗೆ ನುಗ್ಗಿದ ಕಳ್ಳರು ಮದ್ಯವನ್ನು ದೋಚಿಕೊಂಡು ಹೋಗಿರುವ ಘಟನೆ ಉಳ್ಳಾಲದ ಕುತ್ತಾರು ನಿತ್ಯಾನಂದನಗರದಲ್ಲಿ ನಡೆದಿದೆ. ವೈನ್ಶಾಪ್ನಿಂದ ಸುಮಾರು ಒಂದು ಲಕ್ಷ ರೂ. ಮೌಲ್ಯದ ಮದ್ಯ ಕಳ್ಳತನವಾಗಿದೆ. ಪುರುಷೋತ್ತಮ್ ಪಿಲಾರ್ ಅವರಿಗೆ ಸೇರಿದ ವೈನ್ಸ್ ಶಾಪ್ನಲ್ಲಿ ಈ ಘಟನೆ ನಡೆದಿದೆ.

ವೈನ್ಸ್ ಅಂಗಡಿಯಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಖತರ್ನಾಕ್ ಕಳ್ಳರು ಸಿಸಿಟಿವಿ ದಾಖಲೆ ಹೊಂದಿರುವ ಡಿವಿಆರ್ನ ಕೂಡ ಕಳವು ಮಾಡಿದ್ದಾರೆ. ಘಟನೆ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.