ETV Bharat / state

ಕೆಟ್ಟು ನಿಂತ ಲಾರಿ ದುರಸ್ತಿಯಲ್ಲಿ ನಿರತರಾಗಿದ್ದವರಿಗೆ ಪಿಕಪ್ ಡಿಕ್ಕಿ.. ಮೂವರು ಸಾವು

author img

By

Published : Aug 30, 2021, 9:54 PM IST

ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದಾರೆ. ಮೃತಪಟ್ಟವರು ಬೆಂಗಳೂರು ಮತ್ತು ಶಿವಮೊಗ್ಗ ಮೂಲದ ಮೆಕ್ಯಾನಿಕ್​ಗಳು ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದ್ದು, ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

three-dead-in-accident-near-nelyadi
ಕೆಟ್ಟು ನಿಂತ ಲಾರಿ ದುರಸ್ತಿಯಲ್ಲಿ ನಿರತರಾಗಿದ್ದವರಿಗೆ ಪಿಕಪ್ ಡಿಕ್ಕಿ: ಮೂವರು ಸಾವು

ನೆಲ್ಯಾಡಿ (ದಕ್ಷಿಣ ಕನ್ನಡ) : ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ಬೆದ್ರೋಡಿಯಲ್ಲಿ ಕೆಟ್ಟು ನಿಂತ ಲಾರಿಯೊಂದರ ದುರಸ್ತಿ ಕೆಲಸದಲ್ಲಿ ನಿರತರಾಗಿದ್ದವರಿಗೆ ಪಿಕಪ್ ವಾಹನ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟಿದ್ದಾರೆ.

ಬೆದ್ರೋಡಿ ಬಸ್‌ ನಿಲ್ದಾಣದ ಬಳಿ ಲಾರಿಯೊಂದು ಕೆಟ್ಟು ನಿಂತಿದೆ. ಇದರ ದುರಸ್ತಿ ಕೆಲಸ ನಡೆಯುತ್ತಿತ್ತು. ಈ ವೇಳೆ ಉಪ್ಪಿನಂಗಡಿ ಕಡೆಯಿಂದ ಬಂದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಗುದ್ದಿ, ಬಳಿಕ ವಾಹನ ದುರಸ್ತಿಯಲ್ಲಿ ನಿರತರಾಗಿದ್ದ ಮೂವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಮೂವರ ಪೈಕಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೊಬ್ಬ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾನೆ.

three-dead-in-accident-near-nelyadi
ಲಾರಿಗೆ ಪಿಕಪ್ ವಾಹನ ಡಿಕ್ಕಿ

ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದಾರೆ. ಮೃತಪಟ್ಟವರು ಬೆಂಗಳೂರು ಮತ್ತು ಶಿವಮೊಗ್ಗ ಮೂಲದ ಮೆಕ್ಯಾನಿಕ್​ಗಳು ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದ್ದು, ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 6 ರಿಂದ 8ರವರೆಗಿನ ತರಗತಿಗಳು ಆರಂಭ ; 9ನೇ ತರಗತಿಯಿಂದ ಇದ್ದ ಎಸ್ಒಪಿಯನ್ನೇ ಪಾಲನೆ ಮಾಡಲು ನಿರ್ಧಾರ

ನೆಲ್ಯಾಡಿ (ದಕ್ಷಿಣ ಕನ್ನಡ) : ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ಬೆದ್ರೋಡಿಯಲ್ಲಿ ಕೆಟ್ಟು ನಿಂತ ಲಾರಿಯೊಂದರ ದುರಸ್ತಿ ಕೆಲಸದಲ್ಲಿ ನಿರತರಾಗಿದ್ದವರಿಗೆ ಪಿಕಪ್ ವಾಹನ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟಿದ್ದಾರೆ.

ಬೆದ್ರೋಡಿ ಬಸ್‌ ನಿಲ್ದಾಣದ ಬಳಿ ಲಾರಿಯೊಂದು ಕೆಟ್ಟು ನಿಂತಿದೆ. ಇದರ ದುರಸ್ತಿ ಕೆಲಸ ನಡೆಯುತ್ತಿತ್ತು. ಈ ವೇಳೆ ಉಪ್ಪಿನಂಗಡಿ ಕಡೆಯಿಂದ ಬಂದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಗುದ್ದಿ, ಬಳಿಕ ವಾಹನ ದುರಸ್ತಿಯಲ್ಲಿ ನಿರತರಾಗಿದ್ದ ಮೂವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಮೂವರ ಪೈಕಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೊಬ್ಬ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾನೆ.

three-dead-in-accident-near-nelyadi
ಲಾರಿಗೆ ಪಿಕಪ್ ವಾಹನ ಡಿಕ್ಕಿ

ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದಾರೆ. ಮೃತಪಟ್ಟವರು ಬೆಂಗಳೂರು ಮತ್ತು ಶಿವಮೊಗ್ಗ ಮೂಲದ ಮೆಕ್ಯಾನಿಕ್​ಗಳು ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದ್ದು, ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 6 ರಿಂದ 8ರವರೆಗಿನ ತರಗತಿಗಳು ಆರಂಭ ; 9ನೇ ತರಗತಿಯಿಂದ ಇದ್ದ ಎಸ್ಒಪಿಯನ್ನೇ ಪಾಲನೆ ಮಾಡಲು ನಿರ್ಧಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.