ಮಂಗಳೂರು: ಬಸ್ ಮೇಲೆ ಕಲ್ಲು ತೂರಾಡಿರುವ ಘಟನೆ ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ನಡೆದಿದೆ.
ಕರ್ನಾಟಕ ಬಂದ್ ಕರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ರೀತಿಯ ಬೆಂಬಲ ಸಿಕ್ಕಿಲ್ಲ. ಬಸ್ ಓಡಾಟ, ಜನಜೀವನ ಸಹಜಸ್ಥಿತಿಯಲ್ಲಿದೆ. ಆದ್ರೆ ಫರಂಗಿಪೇಟೆಯಲ್ಲಿ ಮಾತ್ರ ಕಿಡಿಗೇಡಿಗಳು ಬಸ್ ಮೇಲೆ ಕಲ್ಲು ತೂರಿದ್ದಾರೆ.
ತಿರುಪತಿಯಿಂದ ಮಂಗಳೂರಿಗೆ ಬರುತ್ತಿದ್ದ ಆಂಧ್ರಪ್ರದೇಶದ ಪ್ರವಾಸೋದ್ಯಮ ಇಲಾಖೆಯ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದರಿಂದ ಬಸ್ನ ಕಿಟಕಿ ಗಾಜು ಪುಡಿಯಾಗಿದೆ. ಬಸ್ನಲ್ಲಿ 30 ಮಂದಿ ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಯಾರಿಗೂ ಗಾಯವಾಗಿಲ್ಲ ಎಂದು ತಿಳಿದುಬಂದಿದೆ.