ಬಂಟ್ವಾಳ (ದಕ್ಷಿಣಕನ್ನಡ): ಹಿಟಾಚಿ ಯಂತ್ರವನ್ನು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯೊಂದು ಮನೆ ಮೇಲೆಯೇ ಉರುಳಿ ಬಿದ್ದ ಘಟನೆ ಬಂಟ್ವಾಳ ತಾಲೂಕಿನ ಅಮ್ಟಾಡಿಯ ಕೆಂಪುಗುಡ್ಡೆ ಕ್ರಾಸ್ ಬಳಿ ನಡೆದಿದೆ.
ಟಿಪ್ಪರ್ ಲಾರಿ ಉರುಳಿ ಬಿದ್ದಿದ್ದರಿಂದ ನಾರಾಯಣ ಭಂಡಾರಿ ಎಂಬುವವರ ಮನೆ ಜಖಂಗೊಂಡಿದ್ದು, ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಟಿಪ್ಪರ್ ಲಾರಿಯಡಿ ಸಿಲುಕಿದ್ದ ವಿಠಲ್ ಎಂಬುವವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಕ್ರೇನ್ ಮೂಲಕ ಟಿಪ್ಪರ್ ಲಾರಿಯನ್ನು ಮೇಲಕ್ಕೆ ಎತ್ತಲಾಗಿದೆ.
ಇದನ್ನೂ ಓದಿ: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ.. ಮಂಡ್ಯದಲ್ಲಿ ದುರಂತ