ETV Bharat / state

ಮಂಗಳೂರಲ್ಲಿ ಭಾರಿ ವರ್ಷಧಾರೆ: ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು,ಜನರ ಪರದಾಟ - ಮಂಗಳೂರು, ಧಾರಾಕಾರ ಮಳೆ, ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು, ಜನರ ಪರದಾಟ, ಕನಡ ವಾರ್ತೆ, ಈ ಟಿವಿ ಭಾರತ

ಮಂಗಳೂರು ನಗರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ವರ್ಷಧಾರೆಯಿಂದ ವಾಹನ ಸವಾರರು ಪರದಾಡುವಂತಾಗಿದೆ.

ಮಂಗಳೂರಿನಲ್ಲಿ ಧಾರಾಕಾರ ಮಳೆ ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು
author img

By

Published : Jul 26, 2019, 4:33 PM IST

ಮಂಗಳೂರು: ನಗರದಲ್ಲಿ ಮುಂಜಾನೆಯಿಂದಲೇ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಮಳೆಯಿಂದ ನಿತ್ಯದ ಕೆಲಸ ಕಾರ್ಯಗಳನ್ನು ಮಾಡಲು ಜನರು ಪರದಾಟ ನಡೆಸಿದ್ರೆ, ರಸ್ತೆಯಲ್ಲೆಲ್ಲಾ ನೀರು ಹರಿಯುತ್ತಿರುವ ಪರಿಣಾಮ ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಸೆಂಟ್ರಲ್ ರೈಲು ನಿಲ್ದಾಣಕ್ಕೆ ಮಳೆ ನೀರು ನುಗ್ಗಿದ್ದು ಇಲ್ಲಿನ ಪರಿಸ್ಥಿತಿ ಕೆರೆಯಂತಾಗಿದೆ. ‌ಇದ್ರಿಂದಾಗಿ ಪ್ರಯಾಣಿಕರು ಕಿರಿಕಿರಿ ಅನುಭವಿಸುತ್ತಿದ್ದಾರೆ. ನಗರದ ಪಾಂಡೇಶ್ವರ ಸುಭಾಷ್ ನಗರ ಸಂಪೂರ್ಣ ಜಲಾವೃತವಾಗಿದೆ.

ಇತರ ಪ್ರಮುಖ ಪ್ರದೇಶಗಳಾದ ಫಳ್ನೀರ್ ರಸ್ತೆ, ಪಡೀಲ್ ರೈಲ್ವೇ ಅಂಡರ್ ಪಾಸ್ ಸೇರಿದಂತೆ ವಿವಿಧ ಕಡೆಗಳಲ್ಲಿ ನೀರು ತುಂಬಿದ್ದು, ಕೊಟ್ಟಾರ ಚೌಕಿಯ ರಾಜಕಾಲುವೆ ಭರ್ತಿಯಾಗಿ ಹರಿಯುತ್ತಿದೆ‌.

ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ಸಂಚಾರಕ್ಕೆ ಅಡಚಣೆಯಾಗಿದ್ದು, ವಾಹನ ಸವಾರರು ಪೇಚಿಗೆ ಸಿಲುಕಿದ್ದಾರೆ.

ಮಂಗಳೂರು: ನಗರದಲ್ಲಿ ಮುಂಜಾನೆಯಿಂದಲೇ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಮಳೆಯಿಂದ ನಿತ್ಯದ ಕೆಲಸ ಕಾರ್ಯಗಳನ್ನು ಮಾಡಲು ಜನರು ಪರದಾಟ ನಡೆಸಿದ್ರೆ, ರಸ್ತೆಯಲ್ಲೆಲ್ಲಾ ನೀರು ಹರಿಯುತ್ತಿರುವ ಪರಿಣಾಮ ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಸೆಂಟ್ರಲ್ ರೈಲು ನಿಲ್ದಾಣಕ್ಕೆ ಮಳೆ ನೀರು ನುಗ್ಗಿದ್ದು ಇಲ್ಲಿನ ಪರಿಸ್ಥಿತಿ ಕೆರೆಯಂತಾಗಿದೆ. ‌ಇದ್ರಿಂದಾಗಿ ಪ್ರಯಾಣಿಕರು ಕಿರಿಕಿರಿ ಅನುಭವಿಸುತ್ತಿದ್ದಾರೆ. ನಗರದ ಪಾಂಡೇಶ್ವರ ಸುಭಾಷ್ ನಗರ ಸಂಪೂರ್ಣ ಜಲಾವೃತವಾಗಿದೆ.

ಇತರ ಪ್ರಮುಖ ಪ್ರದೇಶಗಳಾದ ಫಳ್ನೀರ್ ರಸ್ತೆ, ಪಡೀಲ್ ರೈಲ್ವೇ ಅಂಡರ್ ಪಾಸ್ ಸೇರಿದಂತೆ ವಿವಿಧ ಕಡೆಗಳಲ್ಲಿ ನೀರು ತುಂಬಿದ್ದು, ಕೊಟ್ಟಾರ ಚೌಕಿಯ ರಾಜಕಾಲುವೆ ಭರ್ತಿಯಾಗಿ ಹರಿಯುತ್ತಿದೆ‌.

ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ಸಂಚಾರಕ್ಕೆ ಅಡಚಣೆಯಾಗಿದ್ದು, ವಾಹನ ಸವಾರರು ಪೇಚಿಗೆ ಸಿಲುಕಿದ್ದಾರೆ.

Intro:ಮಂಗಳೂರು: ನಗರದಲ್ಲಿ ಮುಂಜಾನೆಯಿಂದಲೇ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ವಿವಿಧೆಡೆ ನೀರು ನುಗ್ಗಿ ಸಂಚಾರಕ್ಕೆ ಅಡ್ಡಿಯಾದ ಘಟನೆ ನಡೆದಿದೆ.

ಸೆಂಟ್ರಲ್ ರೈಲು ನಿಲ್ದಾಣಕ್ಕೆ ನೀರು ನುಗ್ಗಿ ಕೆರೆಯಂತಾಗಿದೆ.‌ ಪರಿಣಾಮ ಪ್ರಯಾಣಿಕರು ನಡೆದಾಡಲು ಪ್ರಯಾಸ ಪಡುವಂತಾಗಿದೆ. ಅಲ್ಲದೆ ನಗರದ ಪಾಂಡೇಶ್ವರದಲ್ಲಿರುವ ಸುಭಾಷ್ ನಗರ ಎಂಬ ಪ್ರದೇಶ ಸಂಪೂರ್ಣ ಜಲಾವೃತವಾಗಿದೆ.

Body:ಕೊಟ್ಟಾರ ಚೌಕಿಯಲ್ಲಿರುವ ರಾಜಕಾಲುವೆ ಭರ್ತಿಯಾಗಿ ಹರಿಯುತ್ತಿದೆ‌. ಫಳ್ನೀರ್ ರಸ್ತೆಯಲ್ಲಿಯೂ ನೀರು ನಿಂತಿದೆ. ಅಲ್ಲದೆ ಪಡೀಲ್ ರೈಲ್ವೇ ಅಂಡರ್ ಪಾಸ್ ನಲ್ಲಿ ನೀರು ನಿಂತು ವಾಹನ ಸವಾರರು ಸಂಕಷ್ಟಕ್ಕೊಳಗಾಗಿದ್ದಾರೆ‌.

ಈ ಹಿನ್ನೆಲೆಯಲ್ಲಿ ವಾಹನಗಳ ಹಾಗೂ ಜನರ ಸರಾಗ ಸಂಚಾರಕ್ಕೆ ಸಮಸ್ಯೆಯಾಗಿದೆ.

Reporter_Vishwanath PanjimogaruConclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.