ಮಂಗಳೂರು: ಸುರತ್ಕಲ್ ಎನ್ಐಟಿಕೆ ಟೋಲ್ ಗೇಟ್ ವಿರುದ್ಧ ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ 'ಆಪತ್ಭಾಂಧವ ಆಸೀಫ್' ಅವರಿಗೆ ನಿನ್ನೆ(ಮಂಗಳವಾರ) ರಾತ್ರಿ ಮಂಗಳಮುಖಿಯರ ಗುಂಪು ಉಪಟಳ ನೀಡಿದ ಘಟನೆ ನಡೆದಿದೆ.
![Transgender group torture to Social activist Asif](https://etvbharatimages.akamaized.net/etvbharat/prod-images/kn-mng-01-transgender-photo-7202146_16022022093855_1602f_1644984535_656.jpg)
ಮಂಗಳೂರಿನ ಎನ್ಐಟಿಕೆ ಟೋಲ್ ಗೇಟ್ ಅಕ್ರಮವಾಗಿದ್ದು, ಇದನ್ನು ಮುಚ್ಚಬೇಕೆಂದು ಆಗ್ರಹಿಸಿ ಆಸೀಫ್ ಅವರು ಕಳೆದ ಕೆಲವು ದಿನಗಳಿಂದ ಏಕಾಂಗಿ ಹೋರಾಟ ನಡೆಸುತ್ತಿದ್ದಾರೆ. ಪ್ರತಿದಿನ ವಿಭಿನ್ನವಾಗಿ ಹೋರಾಟ ನಡೆಸುತ್ತಿರುವ ಅವರು ಧರಣಿ ನಡೆಸುತ್ತಿರುವ ವೇದಿಕೆಗೆ ರಾತ್ರಿ 12 ಗಂಟೆ ಸುಮಾರಿಗೆ ಏಕಾಏಕಿ ಮುಗಿಬಿದ್ದ ಮಂಗಳಮುಖಿಯರ ಗುಂಪು ಅಸೀಫ್ ಅವರ ಜತೆಗೆ ಅಸಭ್ಯವಾಗಿ ವರ್ತಸಿ, ಅಶ್ಲೀಲವಾಗಿ ನಿಂದಿಸಿದ್ದಾರೆ ಎನ್ನಲಾಗ್ತಿದೆ.
ಆಸೀಫ್ ಈ ಘಟನೆಯನ್ನು ತಮ್ಮ ಫೇಸ್ಬುಕ್ನಲ್ಲಿ ಲೈವ್ ಮಾಡಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸರಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
ಇದನ್ನೂ ಓದಿ: ಕಾರು-ಟ್ರಕ್ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ 6 ಮಂದಿ ದುರ್ಮರಣ