ETV Bharat / state

ಚಾರಣಕ್ಕೆಂದು ಬಂದ ಟೆಕ್ಕಿ ಅರಣ್ಯದಲ್ಲಿ ನಾಪತ್ತೆ: ರೋಚಕ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಕರೆತಂದ ತಂಡ

author img

By

Published : May 29, 2023, 10:44 PM IST

ಚಾರಣಕ್ಕೆ ಎಂದು ಬಂದಿದ್ದ ಟೆಕ್ಕಿಯೊಬ್ಬರು ಕಾಡಿನಲ್ಲಿ ನಾಪತ್ತೆಯಾಗಿದ್ದರು. ಸುದ್ದಿ ತಿಳಿದ ಪೊಲೀಸರು ಮತ್ತು ಸ್ಥಳೀಯರು ಟೆಕ್ಕಿಯನ್ನು ಹುಡುಕುವಲ್ಲಿ ಯಶಸ್ವಿಯಾಗಿದ್ದಾರೆ.

trekking-techie-goes-missing-in-the-charmadi-forest
ಚಾರಣಕ್ಕೆಂದು ಬಂದ ಟೆಕ್ಕಿ ಅರಣ್ಯದಲ್ಲಿ ನಾಪತ್ತೆ: ರೋಚಕ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಕರೆತಂದ ತಂಡ

ಬೆಳ್ತಂಗಡಿ (ದಕ್ಷಿಣ ಕನ್ನಡ): ಚಾರ್ಮಾಡಿ ಅರಣ್ಯಪ್ರದೇಶಕ್ಕೆ ಚಾರಣಕ್ಕೆ ಎಂದು ಬಂದು ಅರಣ್ಯ ಪ್ರದೇಶದಲ್ಲಿ ನಾಪತ್ತೆಯಾಗಿದ್ದ ಟೆಕ್ಕಿಯನ್ನು ಸ್ಥಳೀಯರ ತಂಡವೊಂದು ಅಹೋರಾತ್ರಿ ಕಾರ್ಯಾಚರಣೆ ಮೂಲಕ ಪತ್ತೆಹಚ್ಚಿ ಸುರಕ್ಷಿತವಾಗಿ ಕರೆತರುವಲ್ಲಿ ಯಶಸ್ವಿಯಾಗಿದೆ.

ಮಹಾರಾಷ್ಟ್ರದ ನಾಗಪುರ ಮೂಲದ ಬೆಂಗಳೂರಿನಲ್ಲಿ ಸಾಫ್ಟ್​​ವೇರ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಪರೇಶ್ ಕಿಶಾನ್ ಲಾಲ್ ಅಗರ್ವಾಲ್ ಎಂಬವರು‌ ಚಿಕ್ಕಮಗಳೂರಿನ ಮೂಡಿಗೆರೆಯ ರಾಣಿಝರಿ ಫಾಲ್ಸ್​​ನಿಂದ ಬಂಡಾಜೆ ಎರ್ಮಾಯಿ ಫಾಲ್ಸ್ ಅರಣ್ಯದ ಕಡೆಗೆ ಚಾರಣ ಮಾಡಿಕೊಂಡು ಬಂದಿದ್ದಾರೆ. ಆದರೆ, ರಾತ್ರಿಯಾಗುತ್ತಿದ್ದಂತೆ ದಾರಿ ಕಾಣದೇ ಅರಣ್ಯದಲ್ಲಿಯೇ ಉಳಿದು ಬಿಟ್ಟಿದ್ದಾರೆ.

ಈ ವೇಳೆ ಕಂಗಾಲಾದ ಅವರು ಬೆಂಗಳೂರಿನ ಸಹೋದ್ಯೋಗಿಗಳಿಗೆ ತಾನಿರುವ ಲೊಕೇಶನ್ ಕಳಿಸಿದ್ದರು. ಇದನ್ನು ಗಮನಿಸಿದ ಗೆಳೆಯರು ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದಾರೆ. ಜೊತೆಗೆ ಆತ ಕಾಡಿನಲ್ಲಿಯೇ ಕಾಣೆಯಾಗಿರುವ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ. ಇದು ಚಾರ್ಮಾಡಿಯ ಹೊಟೇಲ್ ಹನೀಫ್ ಅವರಿಗೆ ತಿಳಿದು ಚಾರ್ಮಾಡಿಯ ಗ್ರೂಪಿಗೆ ಹಾಕಿದ್ದರು.

ಬಳಿಕ ಸಿನಾನ್ ಚಾರ್ಮಾಡಿ ಎಂಬವರು ಬಾಳೂರು ಪೊಲೀಸರು ಹಾಗೂ ಬೆಳ್ತಂಗಡಿಯ ಅರಣ್ಯ ಇಲಾಖೆಯವರ ಸಹಕಾರದೊಂದಿಗೆ ಸ್ಥಳೀಯರಾದ ಮುಬರ್, ಕಾಜೂರಿನ ಎರ್ಮಾಲ್‌ನ ಅಶ್ರಫ್, ಕಾಜೂರಿನ ಶಂಸು, ನಾಸೀರ್, ಸುಧೀರ್ ವಳಂಬ, ಜನಾರ್ದನ, ಪೊಲೀಸ್ ಇಲಾಖೆಯ ಶಶಿಧರ, ಆಸಿಫ್ ಸೋಮಂತಡ್ಕ, ಜೀವರಕ್ಷಕ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ ಇವರುಗಳ ತಂಡ ಹುಡುಕಾಟ ನಡೆಸಿದೆ.

ಎರಡು ತಂಡಗಳಾಗಿ ಪತ್ತೆ ಕಾರ್ಯಾಚರಣೆ ನಡೆಸಲು ಸಂಜೆ 5 ಗಂಟೆಗೆ ಹೊರಡಲಾಗಿತ್ತು. ರಾತ್ರಿ 12 ಗಂಟೆಗೆ ದಟ್ಟ ಅರಣ್ಯದಲ್ಲಿ ಟೆಕ್ಕಿಯನ್ನು ಪತ್ತೆ ಹಚ್ಚಲಾಗಿದೆ. ತಂಡ ಅಲ್ಲಿ ತಲುಪುವಷ್ಟರಲ್ಲಿ ಟೆಕ್ಕಿ ಹಸಿವು, ಮತ್ತು ಭಯದಿಂದ ತತ್ತರಿಸಿ ತೀವ್ರ ಬಸವಳಿದು ಹೋಗಿದ್ದರು. ಅವರಿಗೆ ಬಿಸ್ಕೆಟ್ ಹಾಗೂ ತಂಪು ಪಾನೀಯ ಕುಡಿಸಿ ಸ್ವಲ್ಪ ಸುಧಾರಿಸಿಕೊಂಡು ಅಲ್ಲಿಂದ ಆತನನ್ನು ಹೊತ್ತುಕೊಂಡು ಬೆಳ್ಳಂಬೆಳಗ್ಗೆ 4.30ರ ವೇಳೆಗೆ ಕಾಜೂರಿಗೆ ಕರೆತರಲಾಗಿದೆ. ಈ ನಡುವೆ ತಂಡಕ್ಕೆ ನೆಟ್​​​ವರ್ಕ್​ ಕೈಕೊಟ್ಟದ್ದಲ್ಲದೇ, ಕಾಡಾನೆ ಎದುರಾದ ಪ್ರಸಂಗವೂ ನಡೆದಿದೆ. ಒಟ್ಟಿನಲ್ಲಿ ತಂಡವು ಸುರಕ್ಷಿತವಾಗಿ ಟೆಕ್ಕಿಯನ್ನು ಅರಣ್ಯದಿಂದ ರಕ್ಷಿಸುವಲ್ಲಿ ಯಶಸ್ವಿಯಾಗಿದೆ.

ರೋಚಕ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಕರೆತಂದ ತಂಡ
ರೋಚಕ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಕರೆತಂದ ತಂಡ

ಜಾಲಿ ರೈಡ್​​ ಬಂದಿದ್ದ ನಾಲ್ವರು ಯುವಕರ ಸಾವು: ನಂದಿ ಬೆಟ್ಟ ಪ್ರವಾಸಕ್ಕೆ ಬಂದಿದ್ದ ನಾಲ್ವರು ಯುವಕರು ನೀರು ಪಾಲಾಗಿರುವ ಘಟನೆ ದೇಹನಹಳ್ಳಿ ಸಮೀಪದ ರಾಮನಾಥಪುರ ಕೆರೆಯಲ್ಲಿ ಭಾನುವಾರ ನಡೆದಿತ್ತು. ಬೈಕ್​ನಲ್ಲಿ ಬಂದಿದ್ದ ಯುವಕರು ಬೆಂಗಳೂರಿಗೆ ವಾಪಸ್ ಮರಳುತ್ತಿರುವಾಗ ದಾರಿ ಮಧ್ಯೆ ಸಿಕ್ಕ ಕೆರೆಯಲ್ಲಿ ಈಜಲು ಹೋದಾಗ ದುರಂತ ಜರುಗಿದೆ. ಬೆಂಗಳೂರಿನ ಆರ್​ಟಿ ನಗರದ ಯುವಕರ ತಂಡ ಭಾನುವಾರ ಬೆಳಗ್ಗೆ ನಂದಿಬೆಟ್ಟಕ್ಕೆ ಬೈಕ್​ನಲ್ಲಿ ಬಂದಿದ್ದರು. ಮಧ್ಯಾಹ್ನ ನಂದಿಬೆಟ್ಟದಿಂದ ಅವರೆಲ್ಲರೂ ಬೆಂಗಳೂರಿಗೆ ವಾಪಸ್ ತೆರಳುತ್ತಿದ್ದರು. ಈ ವೇಳೆ ರಾಮನಾಥಪುರ ಕೆರೆಯಲ್ಲಿ ಈಜಲು ಹೋಗಿದ್ದರು. ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಕರಾಳ ಸೋಮವಾರ: ಪ್ರತ್ಯೇಕ ದುರಂತದಲ್ಲಿ 10 ಮಂದಿ ಕಾರ್ಮಿಕರ ದಾರುಣ ಸಾವು

ಬೆಳ್ತಂಗಡಿ (ದಕ್ಷಿಣ ಕನ್ನಡ): ಚಾರ್ಮಾಡಿ ಅರಣ್ಯಪ್ರದೇಶಕ್ಕೆ ಚಾರಣಕ್ಕೆ ಎಂದು ಬಂದು ಅರಣ್ಯ ಪ್ರದೇಶದಲ್ಲಿ ನಾಪತ್ತೆಯಾಗಿದ್ದ ಟೆಕ್ಕಿಯನ್ನು ಸ್ಥಳೀಯರ ತಂಡವೊಂದು ಅಹೋರಾತ್ರಿ ಕಾರ್ಯಾಚರಣೆ ಮೂಲಕ ಪತ್ತೆಹಚ್ಚಿ ಸುರಕ್ಷಿತವಾಗಿ ಕರೆತರುವಲ್ಲಿ ಯಶಸ್ವಿಯಾಗಿದೆ.

ಮಹಾರಾಷ್ಟ್ರದ ನಾಗಪುರ ಮೂಲದ ಬೆಂಗಳೂರಿನಲ್ಲಿ ಸಾಫ್ಟ್​​ವೇರ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಪರೇಶ್ ಕಿಶಾನ್ ಲಾಲ್ ಅಗರ್ವಾಲ್ ಎಂಬವರು‌ ಚಿಕ್ಕಮಗಳೂರಿನ ಮೂಡಿಗೆರೆಯ ರಾಣಿಝರಿ ಫಾಲ್ಸ್​​ನಿಂದ ಬಂಡಾಜೆ ಎರ್ಮಾಯಿ ಫಾಲ್ಸ್ ಅರಣ್ಯದ ಕಡೆಗೆ ಚಾರಣ ಮಾಡಿಕೊಂಡು ಬಂದಿದ್ದಾರೆ. ಆದರೆ, ರಾತ್ರಿಯಾಗುತ್ತಿದ್ದಂತೆ ದಾರಿ ಕಾಣದೇ ಅರಣ್ಯದಲ್ಲಿಯೇ ಉಳಿದು ಬಿಟ್ಟಿದ್ದಾರೆ.

ಈ ವೇಳೆ ಕಂಗಾಲಾದ ಅವರು ಬೆಂಗಳೂರಿನ ಸಹೋದ್ಯೋಗಿಗಳಿಗೆ ತಾನಿರುವ ಲೊಕೇಶನ್ ಕಳಿಸಿದ್ದರು. ಇದನ್ನು ಗಮನಿಸಿದ ಗೆಳೆಯರು ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದಾರೆ. ಜೊತೆಗೆ ಆತ ಕಾಡಿನಲ್ಲಿಯೇ ಕಾಣೆಯಾಗಿರುವ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ. ಇದು ಚಾರ್ಮಾಡಿಯ ಹೊಟೇಲ್ ಹನೀಫ್ ಅವರಿಗೆ ತಿಳಿದು ಚಾರ್ಮಾಡಿಯ ಗ್ರೂಪಿಗೆ ಹಾಕಿದ್ದರು.

ಬಳಿಕ ಸಿನಾನ್ ಚಾರ್ಮಾಡಿ ಎಂಬವರು ಬಾಳೂರು ಪೊಲೀಸರು ಹಾಗೂ ಬೆಳ್ತಂಗಡಿಯ ಅರಣ್ಯ ಇಲಾಖೆಯವರ ಸಹಕಾರದೊಂದಿಗೆ ಸ್ಥಳೀಯರಾದ ಮುಬರ್, ಕಾಜೂರಿನ ಎರ್ಮಾಲ್‌ನ ಅಶ್ರಫ್, ಕಾಜೂರಿನ ಶಂಸು, ನಾಸೀರ್, ಸುಧೀರ್ ವಳಂಬ, ಜನಾರ್ದನ, ಪೊಲೀಸ್ ಇಲಾಖೆಯ ಶಶಿಧರ, ಆಸಿಫ್ ಸೋಮಂತಡ್ಕ, ಜೀವರಕ್ಷಕ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ ಇವರುಗಳ ತಂಡ ಹುಡುಕಾಟ ನಡೆಸಿದೆ.

ಎರಡು ತಂಡಗಳಾಗಿ ಪತ್ತೆ ಕಾರ್ಯಾಚರಣೆ ನಡೆಸಲು ಸಂಜೆ 5 ಗಂಟೆಗೆ ಹೊರಡಲಾಗಿತ್ತು. ರಾತ್ರಿ 12 ಗಂಟೆಗೆ ದಟ್ಟ ಅರಣ್ಯದಲ್ಲಿ ಟೆಕ್ಕಿಯನ್ನು ಪತ್ತೆ ಹಚ್ಚಲಾಗಿದೆ. ತಂಡ ಅಲ್ಲಿ ತಲುಪುವಷ್ಟರಲ್ಲಿ ಟೆಕ್ಕಿ ಹಸಿವು, ಮತ್ತು ಭಯದಿಂದ ತತ್ತರಿಸಿ ತೀವ್ರ ಬಸವಳಿದು ಹೋಗಿದ್ದರು. ಅವರಿಗೆ ಬಿಸ್ಕೆಟ್ ಹಾಗೂ ತಂಪು ಪಾನೀಯ ಕುಡಿಸಿ ಸ್ವಲ್ಪ ಸುಧಾರಿಸಿಕೊಂಡು ಅಲ್ಲಿಂದ ಆತನನ್ನು ಹೊತ್ತುಕೊಂಡು ಬೆಳ್ಳಂಬೆಳಗ್ಗೆ 4.30ರ ವೇಳೆಗೆ ಕಾಜೂರಿಗೆ ಕರೆತರಲಾಗಿದೆ. ಈ ನಡುವೆ ತಂಡಕ್ಕೆ ನೆಟ್​​​ವರ್ಕ್​ ಕೈಕೊಟ್ಟದ್ದಲ್ಲದೇ, ಕಾಡಾನೆ ಎದುರಾದ ಪ್ರಸಂಗವೂ ನಡೆದಿದೆ. ಒಟ್ಟಿನಲ್ಲಿ ತಂಡವು ಸುರಕ್ಷಿತವಾಗಿ ಟೆಕ್ಕಿಯನ್ನು ಅರಣ್ಯದಿಂದ ರಕ್ಷಿಸುವಲ್ಲಿ ಯಶಸ್ವಿಯಾಗಿದೆ.

ರೋಚಕ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಕರೆತಂದ ತಂಡ
ರೋಚಕ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಕರೆತಂದ ತಂಡ

ಜಾಲಿ ರೈಡ್​​ ಬಂದಿದ್ದ ನಾಲ್ವರು ಯುವಕರ ಸಾವು: ನಂದಿ ಬೆಟ್ಟ ಪ್ರವಾಸಕ್ಕೆ ಬಂದಿದ್ದ ನಾಲ್ವರು ಯುವಕರು ನೀರು ಪಾಲಾಗಿರುವ ಘಟನೆ ದೇಹನಹಳ್ಳಿ ಸಮೀಪದ ರಾಮನಾಥಪುರ ಕೆರೆಯಲ್ಲಿ ಭಾನುವಾರ ನಡೆದಿತ್ತು. ಬೈಕ್​ನಲ್ಲಿ ಬಂದಿದ್ದ ಯುವಕರು ಬೆಂಗಳೂರಿಗೆ ವಾಪಸ್ ಮರಳುತ್ತಿರುವಾಗ ದಾರಿ ಮಧ್ಯೆ ಸಿಕ್ಕ ಕೆರೆಯಲ್ಲಿ ಈಜಲು ಹೋದಾಗ ದುರಂತ ಜರುಗಿದೆ. ಬೆಂಗಳೂರಿನ ಆರ್​ಟಿ ನಗರದ ಯುವಕರ ತಂಡ ಭಾನುವಾರ ಬೆಳಗ್ಗೆ ನಂದಿಬೆಟ್ಟಕ್ಕೆ ಬೈಕ್​ನಲ್ಲಿ ಬಂದಿದ್ದರು. ಮಧ್ಯಾಹ್ನ ನಂದಿಬೆಟ್ಟದಿಂದ ಅವರೆಲ್ಲರೂ ಬೆಂಗಳೂರಿಗೆ ವಾಪಸ್ ತೆರಳುತ್ತಿದ್ದರು. ಈ ವೇಳೆ ರಾಮನಾಥಪುರ ಕೆರೆಯಲ್ಲಿ ಈಜಲು ಹೋಗಿದ್ದರು. ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಕರಾಳ ಸೋಮವಾರ: ಪ್ರತ್ಯೇಕ ದುರಂತದಲ್ಲಿ 10 ಮಂದಿ ಕಾರ್ಮಿಕರ ದಾರುಣ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.