ETV Bharat / state

ಕಡಬದ ಪೇರಡ್ಕದ ಚರ್ಚ್​ನಲ್ಲಿ ಅಪರಿಚಿತರ ದಾಂಧಲೆ; ದೂರು ದಾಖಲು - saffron flag in christian prayer

ಇಲ್ಲಿನ ಕ್ರೈಸ್ತ ಪ್ರಾರ್ಥನಾ ಮಂದಿರದ ಬಾಗಿಲು ಒಡೆದು ಅಕ್ರಮ ಪ್ರವೇಶ ಮಾಡಿದ ಕಿಡಿಗೇಡಿಗಳು ಶಿಲುಬೆಗೆ ಹಾನಿ ಮಾಡಿದ್ದಲ್ಲದೇ ಭಗವಾಧ್ವಜ ಹಾರಿಸಿ ಹನುಮಂತನ ಫೋಟೋ ಇಟ್ಟಿದ್ದಾರೆ. ಈ ಬಗ್ಗೆ ಚರ್ಚ್​​ನ ಫಾದರ್ ಕಡಬ ಪೊಲೀಸ್​ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

Communal riot in dakshina kannada
Communal riot in dakshina kannada
author img

By

Published : May 6, 2022, 1:24 PM IST

Updated : May 6, 2022, 10:57 PM IST

ಕಡಬ (ಮಂಗಳೂರು): ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಪೇರಡ್ಕದ 'ಇಮ್ಯಾನುವೆಲ್ ಅಸೆಂಬ್ಲಿ ಆಫ್‌ ಗಾಡ್‌' ಚರ್ಚ್​​ನಲ್ಲಿ‌ ಅಪರಿಚಿತರು ದಾಂಧಲೆ ನಡೆಸಿರುವ ಬಗ್ಗೆ ದೂರು ದಾಖಲಾಗಿದೆ. ಈ ಚರ್ಚ್​ನ ಫಾದರ್ ಆಗಿರುವ ಫಾ| ಜೋಸ್‌ ವರ್ಗಿಸ್‌ ಬಿನ್‌ ವರ್ಗೀಸ್ ಅವರು ಕಡಬ ಠಾಣೆಯಲ್ಲಿ ನಿನ್ನೆ ಸಂಜೆ ದೂರು ದಾಖಲಿಸಿದ್ದಾರೆ.

ಮೇ 1 ರಂದು ರಾತ್ರಿ ಯಾರೋ ಕಿಡಿಗೇಡಿಗಳು ಚರ್ಚ್ ಕಟ್ಟಡದ ಬಾಗಿಲನ್ನು ಒಡೆದು ಅಕ್ರಮ ಪ್ರವೇಶ ಮಾಡಿ ದಾಂಧಲೆ ಮಾಡಿದ್ದಾರೆ. ಕಟ್ಟಡದ ಮೇಲ್ಭಾಗದಲ್ಲಿದ್ದ ಕ್ರೈಸ್ತ ಶಿಲುಬೆಯನ್ನು ಉದ್ದೇಶಪೂರ್ವಕವಾಗಿ ನಾಶ ಮಾಡಿ ಭಗವಾಧ್ವಜ ಅಳವಡಿಸಲಾಗಿದೆ. ಅಲ್ಲದೇ ಕಟ್ಟಡದ ಒಳಭಾಗದಲ್ಲಿದ್ದ ಪ್ರಾರ್ಥನಾ ಮಂದಿರದಲ್ಲಿ ಆಂಜನೇಯನ ಫೋಟೋ ಇರಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಭಗವಾನ್ ಸೋನಾವಣೆ ಮಾಹಿತಿ

ಇದಲ್ಲದೇ ಚರ್ಚ್​ನಲ್ಲಿದ್ದ ವಿದ್ಯುತ್‌ ಮಿಟರ್​, ಬಲ್ಬ್​​​, ಪಂಪ್‌ಸೆಟ್​​ ಮತ್ತು ಪೈಪ್‌ಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಕಪಾಟುವನ್ನು ಹೊಡೆದು ನಾಶ ಮಾಡಿದ್ದಾರೆ. ಮೇ 4 ರಂದು ರಾತ್ರಿ ಕಟ್ಟಡಕ್ಕೆ ಅಳವಡಿಸಿದ್ದ ವಿದ್ಯುತ್‌ ಕಂಬದಿಂದ ಸರ್ವಿಸ್‌ ವೈಯರ್​​ಗಳನ್ನು ಕಟ್‌ ಮಾಡಿ ಮಿಟರ್‌ ಬಾಕ್ಸ್ ಕೂಡ ತೆಗೆದುಕೊಂಡು ಹೋಗಿದ್ದಾರೆ ಎಂದು ಅವರು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.

30 ವರ್ಷಗಳಿಂದ ಕಟ್ಟಡದ ತೆರಿಗೆ ಕಟ್ಟುತ್ತಿದ್ದು, ಪ್ರಾರ್ಥನಾ ಮಂದಿರ ಅಧಿಕೃತ ಅಂತ ದೂರಿನಲ್ಲಿ ಅವರು ಉಲ್ಲೇಖ ಮಾಡಿದ್ದಾರೆ. ಪ್ರಾರ್ಥನಾ ಮಂದಿರಕ್ಕೆ ಅಕ್ರಮ ಪ್ರವೇಶ ಮಾಡಿ ಧಾರ್ಮಿಕ ಕಲಹ ಎಬ್ಬಿಸಿರುವ ಕಿಡಿಗೇಡಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಹ ಒತ್ತಾಯಿಸಿದ್ದಾರೆ. ಕಡಬ ಪೊಲೀಸ್​​ ಠಾಣೆಯಲ್ಲಿ ವಿವಿಧ ಕಲಂ ಅಡಿ ಪ್ರಕರಣ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಭಗವಾನ್ ಸೋನಾವಣೆ ತಿಳಿಸಿದ್ದಾರೆ.

ಕಡಬ (ಮಂಗಳೂರು): ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಪೇರಡ್ಕದ 'ಇಮ್ಯಾನುವೆಲ್ ಅಸೆಂಬ್ಲಿ ಆಫ್‌ ಗಾಡ್‌' ಚರ್ಚ್​​ನಲ್ಲಿ‌ ಅಪರಿಚಿತರು ದಾಂಧಲೆ ನಡೆಸಿರುವ ಬಗ್ಗೆ ದೂರು ದಾಖಲಾಗಿದೆ. ಈ ಚರ್ಚ್​ನ ಫಾದರ್ ಆಗಿರುವ ಫಾ| ಜೋಸ್‌ ವರ್ಗಿಸ್‌ ಬಿನ್‌ ವರ್ಗೀಸ್ ಅವರು ಕಡಬ ಠಾಣೆಯಲ್ಲಿ ನಿನ್ನೆ ಸಂಜೆ ದೂರು ದಾಖಲಿಸಿದ್ದಾರೆ.

ಮೇ 1 ರಂದು ರಾತ್ರಿ ಯಾರೋ ಕಿಡಿಗೇಡಿಗಳು ಚರ್ಚ್ ಕಟ್ಟಡದ ಬಾಗಿಲನ್ನು ಒಡೆದು ಅಕ್ರಮ ಪ್ರವೇಶ ಮಾಡಿ ದಾಂಧಲೆ ಮಾಡಿದ್ದಾರೆ. ಕಟ್ಟಡದ ಮೇಲ್ಭಾಗದಲ್ಲಿದ್ದ ಕ್ರೈಸ್ತ ಶಿಲುಬೆಯನ್ನು ಉದ್ದೇಶಪೂರ್ವಕವಾಗಿ ನಾಶ ಮಾಡಿ ಭಗವಾಧ್ವಜ ಅಳವಡಿಸಲಾಗಿದೆ. ಅಲ್ಲದೇ ಕಟ್ಟಡದ ಒಳಭಾಗದಲ್ಲಿದ್ದ ಪ್ರಾರ್ಥನಾ ಮಂದಿರದಲ್ಲಿ ಆಂಜನೇಯನ ಫೋಟೋ ಇರಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಭಗವಾನ್ ಸೋನಾವಣೆ ಮಾಹಿತಿ

ಇದಲ್ಲದೇ ಚರ್ಚ್​ನಲ್ಲಿದ್ದ ವಿದ್ಯುತ್‌ ಮಿಟರ್​, ಬಲ್ಬ್​​​, ಪಂಪ್‌ಸೆಟ್​​ ಮತ್ತು ಪೈಪ್‌ಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಕಪಾಟುವನ್ನು ಹೊಡೆದು ನಾಶ ಮಾಡಿದ್ದಾರೆ. ಮೇ 4 ರಂದು ರಾತ್ರಿ ಕಟ್ಟಡಕ್ಕೆ ಅಳವಡಿಸಿದ್ದ ವಿದ್ಯುತ್‌ ಕಂಬದಿಂದ ಸರ್ವಿಸ್‌ ವೈಯರ್​​ಗಳನ್ನು ಕಟ್‌ ಮಾಡಿ ಮಿಟರ್‌ ಬಾಕ್ಸ್ ಕೂಡ ತೆಗೆದುಕೊಂಡು ಹೋಗಿದ್ದಾರೆ ಎಂದು ಅವರು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.

30 ವರ್ಷಗಳಿಂದ ಕಟ್ಟಡದ ತೆರಿಗೆ ಕಟ್ಟುತ್ತಿದ್ದು, ಪ್ರಾರ್ಥನಾ ಮಂದಿರ ಅಧಿಕೃತ ಅಂತ ದೂರಿನಲ್ಲಿ ಅವರು ಉಲ್ಲೇಖ ಮಾಡಿದ್ದಾರೆ. ಪ್ರಾರ್ಥನಾ ಮಂದಿರಕ್ಕೆ ಅಕ್ರಮ ಪ್ರವೇಶ ಮಾಡಿ ಧಾರ್ಮಿಕ ಕಲಹ ಎಬ್ಬಿಸಿರುವ ಕಿಡಿಗೇಡಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಹ ಒತ್ತಾಯಿಸಿದ್ದಾರೆ. ಕಡಬ ಪೊಲೀಸ್​​ ಠಾಣೆಯಲ್ಲಿ ವಿವಿಧ ಕಲಂ ಅಡಿ ಪ್ರಕರಣ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಭಗವಾನ್ ಸೋನಾವಣೆ ತಿಳಿಸಿದ್ದಾರೆ.

Last Updated : May 6, 2022, 10:57 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.