ETV Bharat / state

ಬೈಕ್​ಗೆ ಲಾರಿ ಡಿಕ್ಕಿಯಾಗಿ ಸವಾರಿಬ್ಬರು ಸ್ಥಳದಲ್ಲೇ ಸಾವು - ಮದ್ದಡ್ಡದ ಕಿನ್ನಿಗೊಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ಅಪಘಾತ

ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಮತ್ತು ಲಾರಿ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ.

ಬೈಕ್​ಗೆ ಲಾರಿ ಡಿಕ್ಕಿ , ಸವಾರಿಬ್ಬರು ಸ್ಥಳದಲ್ಲೇ ಸಾವು
ಬೈಕ್​ಗೆ ಲಾರಿ ಡಿಕ್ಕಿ , ಸವಾರಿಬ್ಬರು ಸ್ಥಳದಲ್ಲೇ ಸಾವು
author img

By

Published : Jan 17, 2022, 11:30 PM IST

ಬೆಳ್ತಂಗಡಿ: ಮದ್ದಡ್ಡದ ಕಿನ್ನಿಗೊಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಮತ್ತು ಲಾರಿ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಮೃತರನ್ನು ನಾವೂರಿನ ನಿವಾಸಿ ಹಮೀದ್ ಕುದುರು ಅವರ ಪುತ್ರ ಮಿಸ್ಬಾಹುದ್ದೀನ್ (19) ಎಂದು ತಿಳಿದುಬಂದಿದೆ. ಮತ್ತೋರ್ವ ಯುವಕ ಕುವೆಟ್ಟು ಗ್ರಾಮದ ಗುರುವಾಯನಕೆರೆ ‌ನಿವಾಸಿ ಅಶ್ರಫ್ ಅವರ ಪುತ್ರ ಅಶ್ಫಾನ್(19) ಎಂದು ಗುರುತಿಸಲಾಗಿದೆ.

ಈ ಯುವಕರು ಮದ್ದಡ್ಕ ಮಸೀದಿ ಎದುರಿನ ಮಟನ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಕೆಲಸ ಮುಗಿಸಿ ಮನೆಕಡೆಗೆ ಹೊರಟಿದ್ದರು. ಇವರಿಗೆ ಡಿಕ್ಕಿ ಹೊಡೆದ ಟಿಪ್ಪರ್‌ ಲಾರಿ ಗುರುವಾಯನಕೆರೆಯಿಂದ ಮದ್ದಡ್ಕ ಕಡೆಗೆ ಹೋಗುತ್ತಿತ್ತು.

ಬೆಳ್ತಂಗಡಿ: ಮದ್ದಡ್ಡದ ಕಿನ್ನಿಗೊಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಮತ್ತು ಲಾರಿ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಮೃತರನ್ನು ನಾವೂರಿನ ನಿವಾಸಿ ಹಮೀದ್ ಕುದುರು ಅವರ ಪುತ್ರ ಮಿಸ್ಬಾಹುದ್ದೀನ್ (19) ಎಂದು ತಿಳಿದುಬಂದಿದೆ. ಮತ್ತೋರ್ವ ಯುವಕ ಕುವೆಟ್ಟು ಗ್ರಾಮದ ಗುರುವಾಯನಕೆರೆ ‌ನಿವಾಸಿ ಅಶ್ರಫ್ ಅವರ ಪುತ್ರ ಅಶ್ಫಾನ್(19) ಎಂದು ಗುರುತಿಸಲಾಗಿದೆ.

ಈ ಯುವಕರು ಮದ್ದಡ್ಕ ಮಸೀದಿ ಎದುರಿನ ಮಟನ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಕೆಲಸ ಮುಗಿಸಿ ಮನೆಕಡೆಗೆ ಹೊರಟಿದ್ದರು. ಇವರಿಗೆ ಡಿಕ್ಕಿ ಹೊಡೆದ ಟಿಪ್ಪರ್‌ ಲಾರಿ ಗುರುವಾಯನಕೆರೆಯಿಂದ ಮದ್ದಡ್ಕ ಕಡೆಗೆ ಹೋಗುತ್ತಿತ್ತು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.