ETV Bharat / state

ಬಿಜೈ ರಾಜ ಕೊಲೆ ಪ್ರಕರಣ: ಭೂಗತ ಪಾತಕಿ ರವಿ ಪೂಜಾರಿ ಖುಲಾಸೆ

author img

By ETV Bharat Karnataka Team

Published : Nov 9, 2023, 8:40 AM IST

ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ರವಿ ಪೂಜಾರಿಯನ್ನು ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಖುಲಾಸೆಗೊಳಿಸಿದೆ.

ರವಿ ಪೂಜಾರಿ
ರವಿ ಪೂಜಾರಿ

ಮಂಗಳೂರು: ಬಿಜೈ ರಾಜ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶಿಸಿತು. ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಆದೇಶ ಹೊರಹಾಕಿದೆ.

ಪ್ರಕರಣದ ವಿವರ: 2012ರಲ್ಲಿ ಫಳ್ನೀರ್ ವೆಸ್ಟ್ ಗೇಟ್ ಟವರ್ಸ್ ಕಟ್ಟಡದ ನ್ಯಾಷನಲ್ ಮೆಡಿಕಲ್ ಸಮೀಪದ ಕಾಯಿನ್ ಬೂತ್ ಬಳಿ ರವಿ ಪೂಜಾರಿ ಸಂಚು ನಡೆಸಿ ಶೈಲೇಶ್ ರಾಜ ಯಾನೆ ಬಿಜೈ ರಾಜನನ್ನು ಕೊಲೆ ಮಾಡಿದ್ದನು. ಈ ಬಗ್ಗೆ ರವಿ ಪೂಜಾರಿ ಮತ್ತು ಆತನ ಸಹಚರರ ವಿರುದ್ಧ ಮಂಗಳೂರಿನ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿ ರವಿ ಪೂಜಾರಿ ಮತ್ತು ಆತನ ಸಹಚರರ ವಿರುದ್ಧ ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಘಟನೆಯ ವೇಳೆ ರವಿ ಪೂಜಾರಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, 2021ರಲ್ಲಿ ಆತನನ್ನು ಸೆನೆಗಲ್‌ನಲ್ಲಿ ಬಂಧಿಸಿ, ಭಾರತಕ್ಕೆ ಹಸ್ತಾಂತರಿಸಲಾಗಿತ್ತು. ಆತನ ವಿರುದ್ಧ ದಾಖಲಾದ ಎಲ್ಲ ಪ್ರಕರಣಗಳಲ್ಲಿ ಪೊಲೀಸರು ಹೆಚ್ಚುವರಿ ತನಿಖೆ ನಡೆಸಿ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆರೋಪಿ ವಿರುದ್ಧ ದಾಖಲಾದ 2 ಪ್ರಕರಣಗಳಲ್ಲಿ ಪ್ರಿನ್ಸಿಪಾಲ್ ಸೀನಿಯರ್ ಸಿವಿಲ್ ಜಡ್ಜ್ ಹಾಗೂ ಒಂದು ಪ್ರಕರಣದಲ್ಲಿ ಜೆಎಂಎಫ್‌ಸಿ ನ್ಯಾಯಾಲಯ ಸೇರಿ ಒಟ್ಟು 4 ಪ್ರಕರಣಗಳಲ್ಲಿ ಪೂಜಾರಿಯನ್ನು ಖುಲಾಸೆಗೊಳಿಸಲಾಗಿದೆ.

ಬಿಜೈ ರಾಜ ಕೊಲೆ ಪ್ರಕರಣಗಳಲ್ಲಿ ವಿಚಾರಣೆ ನಡೆಸಿದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಅವರು ತೀರ್ಪು ನೀಡಿದರು. ರವಿ ಪೂಜಾರಿ ವಿರುದ್ಧ ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಹಲವು ಪ್ರಕರಣಗಳು ತನಿಖೆಗೆ ಬಾಕಿ ಇವೆ. ಮಂಗಳೂರಿನ ವಕೀಲರಾದ ಬಿ.ಅರುಣ್ ಬಂಗೇರ ಮತ್ತು ರಿಹಾನಾ ಪರ್ವೀನ್ ಅವರು ಪೂಜಾರಿ ಪರ ವಾದಿಸಿದ್ದರು.

ಬ್ಯೂಟಿಪಾರ್ಲರ್​ ಮೇಲೆ ಗುಂಡಿನ ದಾಳಿ: 2018ರಲ್ಲಿ ಎರ್ನಾಕುಲಂನ ಕಡವಂತರದಲ್ಲಿರುವ ನಟಿ ಲೀನಾ ಮಾರಿಯಾ ಪೌಲ್ ಒಡೆತನದ ಬ್ಯೂಟಿಪಾರ್ಲರ್‌ ಬಳಿ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದರು. ಪಿನ್ ವರ್ಗೀಸ್ ಮತ್ತು ಬಿಲಾಲ್ ಎಂಬ ಆರೋಪಿಗಳನ್ನು ಬಂಧಿಸಲಾಗಿತ್ತು. ಇವರು ಪಾತಕಿ ರವಿ ಪೂಜಾರಿ ಸಹಚರರು ಎನ್ನಲಾಗಿತ್ತು. ಕಳೆದ 2 ವರ್ಷಗಳ ಹಿಂದೆ ಕೇರಳ ಪೊಲೀಸರು ಬಾಡಿ ವಾರೆಂಟ್ ಮೇಲೆ 8 ದಿನಗಳ ಕಾಲ ರವಿ ಪೂಜಾರಿಯನ್ನು ವಶಕ್ಕೆ ಪಡೆದು ಪರಪ್ಪನ ಅಗ್ರಹಾರ ಜೈಲಿನಿಂದ ಕರೆದೊಯ್ದಿದ್ದರು.

ಇದನ್ನೂ ಓದಿ: ರಿಯಲ್ ಎಸ್ಟೇಟ್ ಉದ್ಯಮಿಗೆ ಕೊಲೆ ಸುಪಾರಿ ಆರೋಪ: ರವಿ ಪೂಜಾರಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

ಮಂಗಳೂರು: ಬಿಜೈ ರಾಜ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶಿಸಿತು. ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಆದೇಶ ಹೊರಹಾಕಿದೆ.

ಪ್ರಕರಣದ ವಿವರ: 2012ರಲ್ಲಿ ಫಳ್ನೀರ್ ವೆಸ್ಟ್ ಗೇಟ್ ಟವರ್ಸ್ ಕಟ್ಟಡದ ನ್ಯಾಷನಲ್ ಮೆಡಿಕಲ್ ಸಮೀಪದ ಕಾಯಿನ್ ಬೂತ್ ಬಳಿ ರವಿ ಪೂಜಾರಿ ಸಂಚು ನಡೆಸಿ ಶೈಲೇಶ್ ರಾಜ ಯಾನೆ ಬಿಜೈ ರಾಜನನ್ನು ಕೊಲೆ ಮಾಡಿದ್ದನು. ಈ ಬಗ್ಗೆ ರವಿ ಪೂಜಾರಿ ಮತ್ತು ಆತನ ಸಹಚರರ ವಿರುದ್ಧ ಮಂಗಳೂರಿನ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿ ರವಿ ಪೂಜಾರಿ ಮತ್ತು ಆತನ ಸಹಚರರ ವಿರುದ್ಧ ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಘಟನೆಯ ವೇಳೆ ರವಿ ಪೂಜಾರಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, 2021ರಲ್ಲಿ ಆತನನ್ನು ಸೆನೆಗಲ್‌ನಲ್ಲಿ ಬಂಧಿಸಿ, ಭಾರತಕ್ಕೆ ಹಸ್ತಾಂತರಿಸಲಾಗಿತ್ತು. ಆತನ ವಿರುದ್ಧ ದಾಖಲಾದ ಎಲ್ಲ ಪ್ರಕರಣಗಳಲ್ಲಿ ಪೊಲೀಸರು ಹೆಚ್ಚುವರಿ ತನಿಖೆ ನಡೆಸಿ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆರೋಪಿ ವಿರುದ್ಧ ದಾಖಲಾದ 2 ಪ್ರಕರಣಗಳಲ್ಲಿ ಪ್ರಿನ್ಸಿಪಾಲ್ ಸೀನಿಯರ್ ಸಿವಿಲ್ ಜಡ್ಜ್ ಹಾಗೂ ಒಂದು ಪ್ರಕರಣದಲ್ಲಿ ಜೆಎಂಎಫ್‌ಸಿ ನ್ಯಾಯಾಲಯ ಸೇರಿ ಒಟ್ಟು 4 ಪ್ರಕರಣಗಳಲ್ಲಿ ಪೂಜಾರಿಯನ್ನು ಖುಲಾಸೆಗೊಳಿಸಲಾಗಿದೆ.

ಬಿಜೈ ರಾಜ ಕೊಲೆ ಪ್ರಕರಣಗಳಲ್ಲಿ ವಿಚಾರಣೆ ನಡೆಸಿದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಅವರು ತೀರ್ಪು ನೀಡಿದರು. ರವಿ ಪೂಜಾರಿ ವಿರುದ್ಧ ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಹಲವು ಪ್ರಕರಣಗಳು ತನಿಖೆಗೆ ಬಾಕಿ ಇವೆ. ಮಂಗಳೂರಿನ ವಕೀಲರಾದ ಬಿ.ಅರುಣ್ ಬಂಗೇರ ಮತ್ತು ರಿಹಾನಾ ಪರ್ವೀನ್ ಅವರು ಪೂಜಾರಿ ಪರ ವಾದಿಸಿದ್ದರು.

ಬ್ಯೂಟಿಪಾರ್ಲರ್​ ಮೇಲೆ ಗುಂಡಿನ ದಾಳಿ: 2018ರಲ್ಲಿ ಎರ್ನಾಕುಲಂನ ಕಡವಂತರದಲ್ಲಿರುವ ನಟಿ ಲೀನಾ ಮಾರಿಯಾ ಪೌಲ್ ಒಡೆತನದ ಬ್ಯೂಟಿಪಾರ್ಲರ್‌ ಬಳಿ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದರು. ಪಿನ್ ವರ್ಗೀಸ್ ಮತ್ತು ಬಿಲಾಲ್ ಎಂಬ ಆರೋಪಿಗಳನ್ನು ಬಂಧಿಸಲಾಗಿತ್ತು. ಇವರು ಪಾತಕಿ ರವಿ ಪೂಜಾರಿ ಸಹಚರರು ಎನ್ನಲಾಗಿತ್ತು. ಕಳೆದ 2 ವರ್ಷಗಳ ಹಿಂದೆ ಕೇರಳ ಪೊಲೀಸರು ಬಾಡಿ ವಾರೆಂಟ್ ಮೇಲೆ 8 ದಿನಗಳ ಕಾಲ ರವಿ ಪೂಜಾರಿಯನ್ನು ವಶಕ್ಕೆ ಪಡೆದು ಪರಪ್ಪನ ಅಗ್ರಹಾರ ಜೈಲಿನಿಂದ ಕರೆದೊಯ್ದಿದ್ದರು.

ಇದನ್ನೂ ಓದಿ: ರಿಯಲ್ ಎಸ್ಟೇಟ್ ಉದ್ಯಮಿಗೆ ಕೊಲೆ ಸುಪಾರಿ ಆರೋಪ: ರವಿ ಪೂಜಾರಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.