ETV Bharat / state

ಮಂಗಳೂರಿನಲ್ಲಿ ನೀರಿನ ಅಭಾವ: ತುಂಬೆ ವೆಂಟೆಡ್ ಡ್ಯಾಂ ವೀಕ್ಷಿಸಿದ ಸಚಿವ ಖಾದರ್

author img

By

Published : Apr 28, 2019, 7:10 PM IST

ಮಂಗಳೂರಿನ ಜನತೆಗೆ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಲು ದ.ಕ ಜಿಲ್ಲಾಡಳಿತ ಹಾಗೂ ಶಾಸಕರೊಂದಿಗೆ ಚರ್ಚೆ ಮಾಡಿ ಸಮಸ್ಯೆ ಪರಿಹಾರಕ್ಕೆ ಸೂಚನೆಗಳನ್ನು ನೀಡಲಾಗುತ್ತದೆ. ಅಲ್ಲದೆ ತಾಲೂಕು ಮಟ್ಟದಲ್ಲಿ ನೀರಿನ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಯು‌.ಟಿ. ಖಾದರ್ ಹೇಳಿದರು.

ಯು‌.ಟಿ.ಖಾದರ್

ಮಂಗಳೂರು: ನಗರದ ಜನತೆ ಕುಡಿಯುವ ನೀರಿಗೆ ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ದ‌ಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು‌.ಟಿ. ಖಾದರ್ ಇಂದು ತುಂಬೆ ವೆಂಟೆಡ್ ಡ್ಯಾಂಗೆ ಭೇಟಿ ನೀಡಿ ನೀರಿನ ಮಟ್ಟ ಪರಿಶೀಲಿಸಿದರು.

ಈ ವೇಳೆ ಮಾಧ್ಯಮವದರೊಂದಿಗೆ ಮಾತನಾಡಿದ ಅವರು, ಮಂಗಳೂರು ಜನತೆಗೆ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಲು ದ.ಕ. ಜಿಲ್ಲಾಡಳಿತ ಹಾಗೂ ಶಾಸಕರೊಂದಿಗೆ ಚರ್ಚೆ ಮಾಡಿ ಸಮಸ್ಯೆ ಪರಿಹಾರಕ್ಕೆ ಸೂಚನೆಗಳನ್ನು ನೀಡಲಾಗುತ್ತದೆ. ಅಲ್ಲದೆ ತಾಲೂಕು ಮಟ್ಟದಲ್ಲಿ ನೀರಿನ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಭಯ ನೀಡಿದರು.

ರಾಜ್ಯ ಸರ್ಕಾರ ಈಗಾಗಲೇ ಕುಡಿಯುವ ನೀರಿಗಾಗಿ ಸುಮಾರು 6.25 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ನೀತಿ ಸಂಹಿತೆ ಇರುವುದರಿಂದ ಈ ಕಾರ್ಯದಲ್ಲಿ ಸ್ವಲ್ಪ ವಿಳಂಬವಾಗುತ್ತಿದೆ. ಆದರೆ ಎಲ್ಲಿ ಅನಿವಾರ್ಯತೆ ಇದೆಯೋ ಅಲ್ಲಿ ಬೋರ್​ವೆಲ್​ಗಳ ವ್ಯವಸ್ಥೆ ಮಾಡಲಾಗುವುದು. ಟ್ಯಾಂಕರ್ ಮೂಲಕ ಹಳ್ಳಿಗಳಿಗೆ ನೀರನ್ನು ಪೂರೈಸಲಾಗುವುದು. ಬೇರೆ ಕಡೆಗಳಲ್ಲಿ ಈಗಾಗಲೇ ಮಳೆಯಾಗಿದ್ದರೂ, ನಮ್ಮಲ್ಲಿ ಇನ್ನೂ ಮಳೆ ಬಂದಿಲ್ಲ. ಹಾಗಾಗಿ ನೀರಿನ ಸಮಸ್ಯೆ ತಲೆದೋರಿದೆ ಸಚಿವ ಖಾದರ್​ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ತುಂಬೆ ವೆಂಟೆಡ್ ಡ್ಯಾಂ ಭೇಟಿ

ಈ ಸಮಸ್ಯೆ ಜೂನ್ 15 ರ ತನಕ ಇರುತ್ತದೆ. ನಂತರ ಹೆಚ್ಚಿನ ಮಳೆಯಿಂದ ಪ್ರಕೃತಿ ವಿಕೋಪ ಆಗುವ ಪರಿಸ್ಥಿತಿ ನಮ್ಮ ಜಿಲ್ಲೆಯಲ್ಲಿದೆ. ಅದಕ್ಕೂ ನಮ್ಮ ಜಿಲ್ಲಾಡಳಿತ ಸಜ್ಜಾಗಬೇಕಾಗಿದೆ. ಮಂಗಳೂರಿನ ಮುಳುಗಡೆಯಾಗುವ ಪ್ರದೇಶವನ್ನು ಗುರುತಿಸಿ, ರಾಷ್ಟ್ರೀಯ ಪ್ರಕೃತಿ ವಿಕೋಪ ಸಂಸ್ಥೆಗೆ ಈ ಬಗ್ಗೆ ಅರ್ಜಿ ನೀಡಲಾಗಿದೆ. ಅವರು ಕೂಡಾ ವೀಕ್ಷಣೆ ಮಾಡಲು ಬರುತ್ತಿದ್ದಾರೆ. ಸದ್ಯದಲ್ಲಿಯೇ ಸಂಪಾಜೆಯ ಬಗ್ಗೆ ಒಂದು ಸಭೆ ನಡೆಸಲಿದ್ದೇವೆ. ಕಳೆದ ಬಾರಿ ಮಳೆಗಾಲದಲ್ಲಿ ಇಲ್ಲಿ ಭಾರಿ ಅನಾಹುತಗಳಾಗಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲಾಗುವುದು. ಅಲ್ಲದೆ ಕಳೆದ ಬಾರಿ ಪ್ರಕೃತಿ ವಿಕೋಪ ಆದ ಪ್ರದೇಶಗಳ ಜನರನ್ನು ಕರೆದು ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗುವುದು. ಹಾಗೆಯೇ ಎನ್​ಡಿಆರ್​ಎಫ್ ಜಿಲ್ಲೆಗೆ ಬರುತ್ತಿದ್ದು, ಸುಳ್ಯದಲ್ಲೇ ಕ್ಯಾಂಪ್ ಮಾಡಲು ಸೂಚಿಸಲಾಗಿದೆ ಎಂದು ಖಾದರ್​ ಮಾಹಿತಿ ನೀಡಿದರು.

ಈ ಸಂದರ್ಭ ಮಾಜಿ ಶಾಸಕ ಜೆ‌.ಆರ್. ಲೋಬೊ, ಮುಖ್ಯಮಂತ್ರಿ ಅವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ, ಮಾಜಿ ಮೇಯರ್ ಭಾಸ್ಕರ್ ಕೆ, ಶಶಿಧರ್ ಹೆಗ್ಡೆ ಸೇರಿದಂತೆ ಮತ್ತಿತರರು ನಿಯೋಗದಲ್ಲಿದ್ದರು.

ಮಂಗಳೂರು: ನಗರದ ಜನತೆ ಕುಡಿಯುವ ನೀರಿಗೆ ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ದ‌ಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು‌.ಟಿ. ಖಾದರ್ ಇಂದು ತುಂಬೆ ವೆಂಟೆಡ್ ಡ್ಯಾಂಗೆ ಭೇಟಿ ನೀಡಿ ನೀರಿನ ಮಟ್ಟ ಪರಿಶೀಲಿಸಿದರು.

ಈ ವೇಳೆ ಮಾಧ್ಯಮವದರೊಂದಿಗೆ ಮಾತನಾಡಿದ ಅವರು, ಮಂಗಳೂರು ಜನತೆಗೆ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಲು ದ.ಕ. ಜಿಲ್ಲಾಡಳಿತ ಹಾಗೂ ಶಾಸಕರೊಂದಿಗೆ ಚರ್ಚೆ ಮಾಡಿ ಸಮಸ್ಯೆ ಪರಿಹಾರಕ್ಕೆ ಸೂಚನೆಗಳನ್ನು ನೀಡಲಾಗುತ್ತದೆ. ಅಲ್ಲದೆ ತಾಲೂಕು ಮಟ್ಟದಲ್ಲಿ ನೀರಿನ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಭಯ ನೀಡಿದರು.

ರಾಜ್ಯ ಸರ್ಕಾರ ಈಗಾಗಲೇ ಕುಡಿಯುವ ನೀರಿಗಾಗಿ ಸುಮಾರು 6.25 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ನೀತಿ ಸಂಹಿತೆ ಇರುವುದರಿಂದ ಈ ಕಾರ್ಯದಲ್ಲಿ ಸ್ವಲ್ಪ ವಿಳಂಬವಾಗುತ್ತಿದೆ. ಆದರೆ ಎಲ್ಲಿ ಅನಿವಾರ್ಯತೆ ಇದೆಯೋ ಅಲ್ಲಿ ಬೋರ್​ವೆಲ್​ಗಳ ವ್ಯವಸ್ಥೆ ಮಾಡಲಾಗುವುದು. ಟ್ಯಾಂಕರ್ ಮೂಲಕ ಹಳ್ಳಿಗಳಿಗೆ ನೀರನ್ನು ಪೂರೈಸಲಾಗುವುದು. ಬೇರೆ ಕಡೆಗಳಲ್ಲಿ ಈಗಾಗಲೇ ಮಳೆಯಾಗಿದ್ದರೂ, ನಮ್ಮಲ್ಲಿ ಇನ್ನೂ ಮಳೆ ಬಂದಿಲ್ಲ. ಹಾಗಾಗಿ ನೀರಿನ ಸಮಸ್ಯೆ ತಲೆದೋರಿದೆ ಸಚಿವ ಖಾದರ್​ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ತುಂಬೆ ವೆಂಟೆಡ್ ಡ್ಯಾಂ ಭೇಟಿ

ಈ ಸಮಸ್ಯೆ ಜೂನ್ 15 ರ ತನಕ ಇರುತ್ತದೆ. ನಂತರ ಹೆಚ್ಚಿನ ಮಳೆಯಿಂದ ಪ್ರಕೃತಿ ವಿಕೋಪ ಆಗುವ ಪರಿಸ್ಥಿತಿ ನಮ್ಮ ಜಿಲ್ಲೆಯಲ್ಲಿದೆ. ಅದಕ್ಕೂ ನಮ್ಮ ಜಿಲ್ಲಾಡಳಿತ ಸಜ್ಜಾಗಬೇಕಾಗಿದೆ. ಮಂಗಳೂರಿನ ಮುಳುಗಡೆಯಾಗುವ ಪ್ರದೇಶವನ್ನು ಗುರುತಿಸಿ, ರಾಷ್ಟ್ರೀಯ ಪ್ರಕೃತಿ ವಿಕೋಪ ಸಂಸ್ಥೆಗೆ ಈ ಬಗ್ಗೆ ಅರ್ಜಿ ನೀಡಲಾಗಿದೆ. ಅವರು ಕೂಡಾ ವೀಕ್ಷಣೆ ಮಾಡಲು ಬರುತ್ತಿದ್ದಾರೆ. ಸದ್ಯದಲ್ಲಿಯೇ ಸಂಪಾಜೆಯ ಬಗ್ಗೆ ಒಂದು ಸಭೆ ನಡೆಸಲಿದ್ದೇವೆ. ಕಳೆದ ಬಾರಿ ಮಳೆಗಾಲದಲ್ಲಿ ಇಲ್ಲಿ ಭಾರಿ ಅನಾಹುತಗಳಾಗಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲಾಗುವುದು. ಅಲ್ಲದೆ ಕಳೆದ ಬಾರಿ ಪ್ರಕೃತಿ ವಿಕೋಪ ಆದ ಪ್ರದೇಶಗಳ ಜನರನ್ನು ಕರೆದು ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗುವುದು. ಹಾಗೆಯೇ ಎನ್​ಡಿಆರ್​ಎಫ್ ಜಿಲ್ಲೆಗೆ ಬರುತ್ತಿದ್ದು, ಸುಳ್ಯದಲ್ಲೇ ಕ್ಯಾಂಪ್ ಮಾಡಲು ಸೂಚಿಸಲಾಗಿದೆ ಎಂದು ಖಾದರ್​ ಮಾಹಿತಿ ನೀಡಿದರು.

ಈ ಸಂದರ್ಭ ಮಾಜಿ ಶಾಸಕ ಜೆ‌.ಆರ್. ಲೋಬೊ, ಮುಖ್ಯಮಂತ್ರಿ ಅವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ, ಮಾಜಿ ಮೇಯರ್ ಭಾಸ್ಕರ್ ಕೆ, ಶಶಿಧರ್ ಹೆಗ್ಡೆ ಸೇರಿದಂತೆ ಮತ್ತಿತರರು ನಿಯೋಗದಲ್ಲಿದ್ದರು.

Intro:ಮಂಗಳೂರು: ನಗರದಲ್ಲಿ ಜನತೆ ಕುಡಿಯುವ ನೀರಿಗೆ ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ದ‌.ಕ.ಜಿಲ್ಲಾ ಉಸ್ತುವಾರಿ ಸಚಿವ ಯು‌.ಟಿ.ಖಾದರ್ ಇಂದು ಬೆಳಗ್ಗೆ ತುಂಬೆ ವೆಂಟೆಡ್ ಡ್ಯಾಂ ಗೆ ಭೇಟಿ ನೀಡಿ ನೀರಿನ ಮಟ್ಟವನ್ನು ಪರಿಶೀಲಿಸಿದರು.

ಈ ಸಂದರ್ಭ ಸುದ್ದಿಗಾರರೊಂದಿಗೆ ಯು.ಟಿ.ಖಾದರ್ ಮಾತನಾಡಿ, ಮಂಗಳೂರಿನ ಜನತೆಗೆ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಲು ದ.ಕ. ಜಿಲ್ಲಾಡಳಿತ ಹಾಗೂ ಶಾಸಕರೊಂದಿಗೆ ಚರ್ಚೆ ಮಾಡಿ ಸಮಸ್ಯೆ ಪರಿಹಾರಕ್ಕೆ ಸೂಚನೆಗಳನ್ನು ನೀಡಲಾಗುತ್ತದೆ. ಅಲ್ಲದೆ ತಾಲೂಕು ಮಟ್ಟದಲ್ಲಿ ನೀರಿನ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.


Body:ಕರ್ನಾಟಕ ಸರಕಾರ ಈಗಾಗಲೇ ಕುಡಿಯುವ ನೀರಿಗಾಗಿ ಸುಮಾರು 6.25 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.
ನೀತಿ ಸಂಹಿತೆ ಇರುವುದರಿಂದ ಈ ಕಾರ್ಯದಲ್ಲಿ ಸ್ವಲ್ಪ ವಿಳಂಬವಾಗುತ್ತಿದೆ. ಆದರೆ ಎಲ್ಲಿ ಅನಿವಾರ್ಯ ಇದೆಯೋ ಅಲ್ಲಿ ಬೋರ್ ವೆಲ್ ಗಳ ವ್ಯವಸ್ಥೆ ಮಾಡಲಾಗುವುದು. ಟ್ಯಾಂಕರ್ ಮೂಲಕ ಹಳ್ಳಿಗಳಿಗೆ ನೀರನ್ನು ಪೂರೈಕೆ ಮಾಡಲಾಗುವುದು. ಬೇರೆ ಕಡೆಗಳಲ್ಲಿ ಈಗಾಗಲೇ ಮಳೆಯಾಗಿದ್ದರೂ, ನಮ್ಮಲ್ಲಿ ಇನ್ನೂ ಮಳೆ ಬಂದಿಲ್ಲ ಎಂದು ಹೇಳಿದರು.

ಈ ಸಮಸ್ಯೆ ಜೂನ್ 15 ರ ತನಕ ಇರುತ್ತದೆ. ಆಮೇಲೆ ಪ್ರಕೃತಿ ವಿಕೋಪ ಆಗುವ ಪರಿಸ್ಥಿತಿ ನಮ್ಮ ಜಿಲ್ಲೆಯಲ್ಲಿ ಇದೆ. ಅದಕ್ಕೂ ನಮ್ಮ ಜಿಲ್ಲಾಡಳಿತ ಸಜ್ಜಾಗಬೇಕಾಗಿದೆ. ಮಂಗಳೂರಿನ ಮುಳುಗಡೆಯಾಗುವ ಪ್ರದೇಶವನ್ನು ಗುರುತಿಸಿ, ರಾಷ್ಟ್ರೀಯ ಪ್ರಕೃತಿ ವಿಕೋಪ ಸಂಸ್ಥೆಗೆ ಈ ಬಗ್ಗೆ ಅರ್ಜಿ ನೀಡಲಾಗಿದ್ದು, ಅವರು ಕೂಡಾ ವೀಕ್ಷಣೆ ಮಾಡಲು ಬರುತ್ತಿದ್ದಾರೆ. ಸದ್ಯದಲ್ಲಿಯೇ ಸಂಪಾಜೆಯ ಬಗ್ಗೆ ಒಂದು ಸಭೆ ನಡೆಸಲಿದ್ದೇವೆ. ಕಳೆದ ಬಾರಿ ಮಳೆಗಾಲದಲ್ಲಿ ಇಲ್ಲಿ ಬಾರೀ ಅನಾಹುತಗಳಾಗಿದ್ದು, ಈ ಹಿನ್ನೆಲೆಯಲ್ಲಿ ಈ ಭಾಗಗಳಲ್ಲಿ ಮುನ್ನೆಚ್ಚರಿಕೆ ನೀಡಲಾಗುತ್ತದೆ. ಅಲ್ಲದೆ ಕಳೆದ ಬಾರಿ ಪ್ರಕೃತಿ ವಿಕೋಪ ಆದ ಪ್ರದೇಶಗಳ ಜನರನ್ನು ಕರೆದು ಮುನ್ನ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗುವುದು. ಹಾಗೆಯೇ ಎನ್ ಡಿಆರ್ ಎಫ್ ಜಿಲ್ಲೆಗೆ ಬರುತ್ತಿದೆ ಅದನ್ನು ಸುಳ್ಯದಲ್ಲೇ ಕ್ಯಾಂಪ್ ಮಾಡಲು ಆದೇಶ ನೀಡಿರುತ್ತೇವೆ ಎಂದು ಅವರು ಹೇಳಿದರು.




Conclusion:ಈ ಸಂದರ್ಭ ಮಾಜಿ ಶಾಸಕ ಜೆ‌.ಆರ್.ಲೋಬೊ, ಮುಖ್ಯಮಂತ್ರಿ ಯವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ, ಮಾಜಿ ಮೇಯರ್ ಗಳಾದ ಭಾಸ್ಕರ್ ಕೆ., ಶಶಿಧರ್ ಹೆಗ್ಡೆ ಮತ್ತಿತರರು ನಿಯೋಗದಲ್ಲಿದ್ದರು.

Reporter_Vishwanath Panjimogaru

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.