ನೆಲ್ಯಾಡಿ(ದಕ್ಷಿಣ ಕನ್ನಡ): ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ-ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ತರಕಾರಿ ಸಾಗಾಟದ ವಾಹನವೊಂದು ರಸ್ತೆ ಪಕ್ಕದಲ್ಲಿ ಉರುಳಿ ಬಿದ್ದಿರುವ ಘಟನೆ ಇಂದು ಬೆಳಗ್ಗಿನ ಜಾವ ನಡೆದಿದೆ.
ಹಾಸನ ಮೂಲದ ತರಕಾರಿ ಸಾಗಾಟದ ವಾಹನ ಇಂದು ಬೆಳಗಿನ ಜಾವ ಪುತ್ತೂರಿಗೆ ತೆರಳುತ್ತಿದ್ದು, ಈ ವೇಳೆ ರಸ್ತೆಯಲ್ಲಿ ಇರುವ ಬೃಹತ್ ಗುಂಡಿಗಳನ್ನು ತಪ್ಪಿಸಲು ಹೋಗಿ ಈ ದುರ್ಘಟನೆ ನಡೆದಿದೆ ಎಂಬುದಾಗಿ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಅದೃಷ್ಟವಶಾತ್ ಚಾಲಕ ಹಾಗೂ ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.