ETV Bharat / state

ಕೊರೊನಾ ವಾರಿಯರ್ಸ್ ಕುಟುಂಬದವರೊಂದಿಗೆ ವಿಡಿಯೋ ಸಂವಾದ: ಪೊಲೀಸ್ ಆಯುಕ್ತರ ವಿನೂತನ ಪ್ರಯೋಗ - ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ವೀಡಿಯೋ ಕಾನ್ಫರೆನ್ಸ್

ಕೊರೊನಾ ನಿಯಂತ್ರಣಕ್ಕಾಗಿ ಪೊಲೀಸ್ ಇಲಾಖೆ ಶಕ್ತಿ ಮೀರಿ ಕೆಲಸ ಮಾಡುತ್ತಿದೆ. ಆದ್ರೆ ಅವರ ಕುಟುಂಬಸ್ಥರು ಸೋಂಕು ಹರಡುವ ಬಗ್ಗೆ ಭಯಭೀತರಾಗುತ್ತಿದ್ದಾರೆ. ಹಾಗಾಗಿ ಅವರ ಕುಟುಂಬ ಸದಸ್ಯರೊಂದಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತರು ವಿಡಿಯೋ ಸಂವಾದ ನಡೆಸಿ ಧೈರ್ಯ ತುಂಬಿದರು.

Police Commissioner   Dr.P.S Harsha
ಮಂಗಳೂರು ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ
author img

By

Published : Apr 21, 2020, 11:46 PM IST

ಮಂಗಳೂರು: ನಗರ ಪೊಲೀಸ್ ಆಯುಕ್ತ ಡಾ. ಪಿ.ಎಸ್.ಹರ್ಷ ಕೊರೊನಾ ವಾರಿಯರ್ಸ್ ಪೊಲೀಸ್ ಕುಟುಂಬಗಳೊಂದಿಗೆ ಸಂವಾದ ನಡೆಸುವ ಮೂಲಕ ವಿನೂತನ ಪ್ರಯೋಗ ನಡೆಸಿದ್ದಾರೆ.

ದಿನವೂ ಓರ್ವ ಪೊಲೀಸ್ ಸಿಬ್ಬಂದಿ ಕೋವಿಡ್ ಸೋಂಕು ನಿಯಂತ್ರಣ ಕಾರ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಣೆ ಮಾಡಿರೋದಕ್ಕೆ ಕೊರೊನಾ ವಾರಿಯರ್ ಎಂದು ಪ್ರಶಂಸೆ ಮಾಡುತ್ತಿದ್ದ ಪೊಲೀಸ್ ಆಯುಕ್ತರು, ಇದೀಗ ಕೊರೊನಾ ವಾರಿಯರ್​ಗಳ ಕುಟುಂಬಸ್ಥರಿಗೆ ವಿಡಿಯೋ ಕರೆ ಮಾಡಿ ಅವರ ಕುಟುಂಬದ ವ್ಯಕ್ತಿಯ ಸಾಧನೆಯ ಬಗ್ಗೆ ವಿವರಿಸುವ ವಿನೂತನ ಕಾರ್ಯ ನಡೆಸುತ್ತಿದ್ದಾರೆ.

ಮಂಗಳೂರಿನ ಪೊಲೀಸ್ ಇಲಾಖೆಯಲ್ಲಿ ಕರ್ನಾಟಕದ ಬೇರೆ ಬೇರೆ ಜಿಲ್ಲೆಗಳವರು ಕೆಲಸ ಮಾಡುತ್ತಿದ್ದಾರೆ. ಇದೀಗ ಅವರು ಕೊರೊನಾ ವಾರಿಯರ್​ಗಳಾಗಿಯೂ ತಮ್ಮ ಶಕ್ತಿ ಮೀರಿ ಶ್ರಮ ವಹಿಸುತ್ತಿದ್ದಾರೆ. ಈ ಸಂದರ್ಭ ಅವರ ಕುಟುಂಬಸ್ಥರು ಸೋಂಕು ಹರಡುವ ಬಗ್ಗೆ ಭಯಭೀತರಾಗುತ್ತಿದ್ದಾರೆ. ಆದ್ದರಿಂದ ಅವರ ಕುಟುಂಬ ಸದಸ್ಯರೊಂದಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತರು ವಿಡಿಯೋ ಕಾನ್ಫರೆನ್ಸ್ ನಡೆಸಿ ಅವರಿಗೆ ಧೈರ್ಯ ತುಂಬಿದರು.

ಪೊಲೀಸ್ ಸಿಬ್ಬಂದಿ ಕೊರೊನಾ ಸೋಂಕು ಹರಡದಂತೆ ಹೋರಾಟ ನಡೆಸುತ್ತಿದ್ದಾರೆ. ಸಮಾಜದ ಪರವಾಗಿ ಪೊಲೀಸ್ ಇಲಾಖೆ ಶಕ್ತಿ ಮೀರಿ ಕೆಲಸ ಮಾಡುತ್ತಿದೆ ಎಂದು ಕುಟುಂಬಸ್ಥರು ಹೆಮ್ಮೆ ಪಡುವಂತೆ ಮಾತನಾಡಿದರು. ಅಲ್ಲದೆ ಅವರ ಕುಟುಂಬದ ವ್ಯಕ್ತಿಯ ಉತ್ತಮ ಕಾರ್ಯದ ಬಗ್ಗೆ ಕೊಂಡಾಡಿದರು. ಅಲ್ಲದೆ ಇನ್ನೂ ಹೆಚ್ಚು ಶ್ರದ್ಧೆ ವಹಿಸಿ ಕೆಲಸ ಮಾಡಲು ಹೆಚ್ಚಿನ ಪ್ರೇರಣೆ ನೀಡಬೇಕೆಂದು ಹೇಳಿದರು.

ಮಂಗಳೂರು: ನಗರ ಪೊಲೀಸ್ ಆಯುಕ್ತ ಡಾ. ಪಿ.ಎಸ್.ಹರ್ಷ ಕೊರೊನಾ ವಾರಿಯರ್ಸ್ ಪೊಲೀಸ್ ಕುಟುಂಬಗಳೊಂದಿಗೆ ಸಂವಾದ ನಡೆಸುವ ಮೂಲಕ ವಿನೂತನ ಪ್ರಯೋಗ ನಡೆಸಿದ್ದಾರೆ.

ದಿನವೂ ಓರ್ವ ಪೊಲೀಸ್ ಸಿಬ್ಬಂದಿ ಕೋವಿಡ್ ಸೋಂಕು ನಿಯಂತ್ರಣ ಕಾರ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಣೆ ಮಾಡಿರೋದಕ್ಕೆ ಕೊರೊನಾ ವಾರಿಯರ್ ಎಂದು ಪ್ರಶಂಸೆ ಮಾಡುತ್ತಿದ್ದ ಪೊಲೀಸ್ ಆಯುಕ್ತರು, ಇದೀಗ ಕೊರೊನಾ ವಾರಿಯರ್​ಗಳ ಕುಟುಂಬಸ್ಥರಿಗೆ ವಿಡಿಯೋ ಕರೆ ಮಾಡಿ ಅವರ ಕುಟುಂಬದ ವ್ಯಕ್ತಿಯ ಸಾಧನೆಯ ಬಗ್ಗೆ ವಿವರಿಸುವ ವಿನೂತನ ಕಾರ್ಯ ನಡೆಸುತ್ತಿದ್ದಾರೆ.

ಮಂಗಳೂರಿನ ಪೊಲೀಸ್ ಇಲಾಖೆಯಲ್ಲಿ ಕರ್ನಾಟಕದ ಬೇರೆ ಬೇರೆ ಜಿಲ್ಲೆಗಳವರು ಕೆಲಸ ಮಾಡುತ್ತಿದ್ದಾರೆ. ಇದೀಗ ಅವರು ಕೊರೊನಾ ವಾರಿಯರ್​ಗಳಾಗಿಯೂ ತಮ್ಮ ಶಕ್ತಿ ಮೀರಿ ಶ್ರಮ ವಹಿಸುತ್ತಿದ್ದಾರೆ. ಈ ಸಂದರ್ಭ ಅವರ ಕುಟುಂಬಸ್ಥರು ಸೋಂಕು ಹರಡುವ ಬಗ್ಗೆ ಭಯಭೀತರಾಗುತ್ತಿದ್ದಾರೆ. ಆದ್ದರಿಂದ ಅವರ ಕುಟುಂಬ ಸದಸ್ಯರೊಂದಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತರು ವಿಡಿಯೋ ಕಾನ್ಫರೆನ್ಸ್ ನಡೆಸಿ ಅವರಿಗೆ ಧೈರ್ಯ ತುಂಬಿದರು.

ಪೊಲೀಸ್ ಸಿಬ್ಬಂದಿ ಕೊರೊನಾ ಸೋಂಕು ಹರಡದಂತೆ ಹೋರಾಟ ನಡೆಸುತ್ತಿದ್ದಾರೆ. ಸಮಾಜದ ಪರವಾಗಿ ಪೊಲೀಸ್ ಇಲಾಖೆ ಶಕ್ತಿ ಮೀರಿ ಕೆಲಸ ಮಾಡುತ್ತಿದೆ ಎಂದು ಕುಟುಂಬಸ್ಥರು ಹೆಮ್ಮೆ ಪಡುವಂತೆ ಮಾತನಾಡಿದರು. ಅಲ್ಲದೆ ಅವರ ಕುಟುಂಬದ ವ್ಯಕ್ತಿಯ ಉತ್ತಮ ಕಾರ್ಯದ ಬಗ್ಗೆ ಕೊಂಡಾಡಿದರು. ಅಲ್ಲದೆ ಇನ್ನೂ ಹೆಚ್ಚು ಶ್ರದ್ಧೆ ವಹಿಸಿ ಕೆಲಸ ಮಾಡಲು ಹೆಚ್ಚಿನ ಪ್ರೇರಣೆ ನೀಡಬೇಕೆಂದು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.