ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಒಂಟಿ ಸಲಗವೊಂದು ರಸ್ತೆಗೆ ಬಂದು ವಾಹನ ಸವಾರರನ್ನು ಅಟ್ಟಾಡಿಸಿದ ಘಟನೆ ಭಾನುವಾರ ಸಂಜೆ ಕುಕ್ಕೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ನಡೆದಿದೆ. ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದ ಅನಿಲ ಎಂಬಲ್ಲಿ ರಾಜ್ಯ ಹೆದ್ದಾರಿಗೆ ಆಗಮಿಸಿದ ಕಾಡಾನೆ ಕಾರು, ದ್ವಿಚಕ್ರ ವಾಹನ ಸವಾರರನ್ನು ಓಡಿಸಿದೆ.
ಭಾನುವಾರ ಬೆಳಗ್ಗೆಯಿಂದಲೇ ಈ ಪ್ರದೇಶದಲ್ಲಿ ಬೀಡುಬಿಟ್ಟಿದ್ದ ಒಂಟಿ ಸಲಗ, ಸಂಜೆ ಹೊತ್ತು ವಾಹನ ಸವಾರರಿಗೆ ತೊಂದರೆ ಕೊಟ್ಟಿದೆ.
ಓದಿ : ಸ್ನೇಹಜೀವಿಯಾಗಿ ಬದುಕುತ್ತಿರುವ ಮಂಗ: ಈ ಕೋತಿಗೆ ಅನ್ನ, ಸಾಂಬಾರ್ ಅಂದ್ರೆ ಪಂಚಪ್ರಾಣ
ಆನೆ ರಸ್ತೆಯಲ್ಲೇ ನಿಂತಿದ್ದರಿಂದ ಗುಂಡ್ಯದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಚರಿಸುವ ವಾಹನ ಸವಾರರು ಪರದಾಡಬೇಕಾಯಿತು.