ETV Bharat / state

ಪುತ್ತೂರು: ಯುವತಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಉಮೇಶ್ ಬಂಧನ

author img

By

Published : Jan 18, 2023, 2:32 PM IST

ಪ್ರೀತಿಸಿದ ಹುಡುಗಿ ತನ್ನ ಪ್ರೀತಿಯನ್ನು ಬೇಡವೆಂದಳು ಎನ್ನುವ ಕಾರಣಕ್ಕೆ ಆರೋಪಿ ಉಮೇಶ್,​ ಬಿಎಸ್​ಸಿ ಪದವೀಧರೆ ಜಯಶ್ರೀಗೆ ಚೂರಿಯಿಂದ ಚುಚ್ಚಿ ಪರಾರಿಯಾಗಿದ್ದನು.

Murder accused Umesh
ಯುವತಿಯನ್ನು ಕೊಲೆ ಮಾಡಿದ ಆರೋಪಿ

ಪುತ್ತೂರು: ಪುತ್ತೂರು ತಾಲೂಕಿನ ಮುಂಡೂರಿನ ಕಂಪ ಎಂಬಲ್ಲಿ 23ರ ಹರೆಯದ ಯುವತಿಯನ್ನು ಮನೆಯ ಅಂಗಳದಲ್ಲಿ ಚೂರಿಯಿಂದ ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕನಕಮಜಲಿನ ಅಂಗಾರ ಎಂಬವರ ಪುತ್ರ ಉಮೇಶ್ ಎಂದು ಗುರುತಿಸಲಾಗಿದೆ. ಉಮೇಶ್ ಜಯಶ್ರೀಯನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ.

ಬಿಎಸ್​ಸಿ ಪದವೀಧರೆಯಾದ ಜಯಶ್ರೀ ಮತ್ತು ಬಂಧಿತ ಆರೋಪಿ ಉಮೇಶ್​ ಇಬ್ಬರ ಸ್ನೇಹಿತರು. ಇವರ ಸ್ನೇಹ ಪ್ರೀತಿಗೆ ತಿರುಗಿತ್ತು. ಇಬ್ಬರು ಮದುವೆ ಮಾಡಿಕೊಳ್ಳಬೇಕೆಂಬ ಆಸೆಯೂ ಇತ್ತು. ಆದ್ರೆ ಇತ್ತೀಚೆಗೆ ಜಯಶ್ರೀಗೆ ಉಮೇಶ್​ ಗುಣ ಮತ್ತು ನಡತೆ ಬಗ್ಗೆ ಇಷ್ಟವಾಗಿರಲಿಲ್ಲ. ಹೀಗಾಗಿ ಕಳೆದ ವರ್ಷ ನವೆಂಬರ್​ನಲ್ಲಿ ಉಮೇಶ್​ನಿಂದ ಜಯಶ್ರೀ ದೂರವಾಗಿದ್ದಳು.

ಪ್ರೀತಿ ವಿಷಯದಲ್ಲಿ ಮನಸ್ತಾಪ ಬರುವುದು ಸಾಮಾನ್ಯ. ಜಯಶ್ರೀ ದೂರವಾದ ಬಳಿಕ ಉಮೇಶ್​ ನೊಂದಿದ್ದಾನೆ. ಬಳಿಕ ಉಮೇಶ್​ ಸಹ ಜಯಶ್ರೀ ಮನವೋಲಿಸಲು ಯತ್ನಿಸಿದಂತೆ ಕಾಣುತ್ತದೆ. ಆದ್ರೆ ಇವರ ಮಾತುಕತೆ ಸಫಲವಾಗಿಲ್ಲ ಎಂಬುದು ತಿಳಿಯುತ್ತದೆ. ಇದರಿಂದ ಕೋಪಗೊಂಡ ಉಮೇಶ್ ಆಕೆಯನ್ನು ಹತ್ಯೆ ಮಾಡಿರುವುದಾಗಿ ತನಿಖೆ ವೇಳೆ ತಿಳಿದು ಬಂದಿದೆ.

ಏನಿದು ಪ್ರಕರಣ?: ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕಂಪ ಸಮೀಪ ಯುವತಿಗೆ ವ್ಯಕ್ತಿಯೊಬ್ಬ ಹೊಟ್ಟೆಗೆ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಜ.17ರಂದು ಮನೆಯಂಗಳದಲ್ಲೇ ನಡೆದಿತ್ತು. ಜಯಶ್ರೀ (23) ಮೃತಪಟ್ಟ ಯುವತಿ. ಯುವತಿ ತಾಯಿ ಮನೆಯಲ್ಲಿ ಅಡುಗೆ ಮಾಡುತ್ತಿದ್ದರು. ಈ ವೇಳೆ ಮಗಳು ಜೋರಾಗಿ ಚೀರಿಕೊಂಡ ಶಬ್ಧ ಕೇಳಿದೆ. ತಾಯಿ ಹೊರಗಡೆ ಓಡಿ ಬಂದಿದ್ದಾರೆ. ಅಂಗಳಕ್ಕೆ ಬಂದು ನೋಡಿದಾಗ ಮಗಳು ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿರುವುದನ್ನು ಕಂಡಿದ್ದಾರೆ. ಕೂಡಲೇ ಯುವತಿಯನ್ನು ಆಸ್ಪತ್ರೆ ಸಾಗಿಸಿದ್ದರು. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೆ ಯುವತಿ ಮೃತಪಟ್ಟಿದ್ದಳು.

ಯುವತಿಗೆ ಚಾಕು ಚುಚ್ಚಿ ಯುವಕ ಪರಾರಿಯಾಗಿದ್ದನು. ಆದ್ರೆ ಚೂರಿ ಇರಿತಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಶವವನ್ನು ಸಂಬಂಧಿಕರಿಗೆ ಒಪ್ಪಿಸಲಾಗಿತ್ತು. ಈ ವೇಳೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ವಿಧಿವಿಧಾನಗಳ ಪ್ರಕಾರ ಯುವತಿಯ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಆರೋಪಿ ವಿರುದ್ಧ ಪ್ರಕರಣ ದಾಖಲು: ಪೊಲೀಸರು ಕೊಲೆಯ ತನಿಖೆ ಆರಂಭಿಸಿದ್ದಾರೆ. ಈ ವೇಳೆ ಜಯಶ್ರೀ ತಾಯಿಯನ್ನು ವಿಚಾರಣೆ ನಡೆಸಿದಾಗ ನನ್ನ ಮಗಳು ಜೋರಾಗಿ ಕೂಗಿಕೊಂಡ ಶಬ್ಧ ಕೇಳಿತು. ಕೂಡಲೇ ನಾನು ಹೋಗಿ ನೋಡಿದಾಗ ರಕ್ತದ ಮಡುವಿನಲ್ಲಿ ಬಿದ್ದಿದ್ದರು ಎಂದು ವಿವರಿಸಿದ್ದಾರೆ. ನಿಮಗೆ ಯಾರ ಮೇಲಾದ್ರೂ ಅನುಮಾವ ಇದೇಯಾ ಎಂದು ಕೇಳಿದಾಗ ಜಯಶ್ರೀ ತಾಯಿ ಕೂಡ ಉಮೇಶ್​ ಹತ್ಯೆ ಮಾಡಿರಬಹುದು ಎಂದು ಆರೋಪಿಸಿ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪುತ್ತೂರು ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ಸಾಗಿದ್ದಾರೆ. ಪೊಲೀಸರು ಆರೋಪಿ ಉಮೇಶ್​ನನ್ನು 24 ಗಂಟೆಯೊಳಗೆ ಕೋರ್ಟ್​ಗೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಮನವಿ ಸಲ್ಲಿಸಲಿದ್ದಾರೆ.

ಇದನ್ನೂ ಓದಿ: ಪುತ್ತೂರು: ಮನೆಯಂಗಳದಲ್ಲೇ ಯುವತಿಗೆ ಚೂರಿ ಇರಿದು ಕೊಲೆ.. ಪ್ರಕರಣ ದಾಖಲು

ಪುತ್ತೂರು: ಪುತ್ತೂರು ತಾಲೂಕಿನ ಮುಂಡೂರಿನ ಕಂಪ ಎಂಬಲ್ಲಿ 23ರ ಹರೆಯದ ಯುವತಿಯನ್ನು ಮನೆಯ ಅಂಗಳದಲ್ಲಿ ಚೂರಿಯಿಂದ ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕನಕಮಜಲಿನ ಅಂಗಾರ ಎಂಬವರ ಪುತ್ರ ಉಮೇಶ್ ಎಂದು ಗುರುತಿಸಲಾಗಿದೆ. ಉಮೇಶ್ ಜಯಶ್ರೀಯನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ.

ಬಿಎಸ್​ಸಿ ಪದವೀಧರೆಯಾದ ಜಯಶ್ರೀ ಮತ್ತು ಬಂಧಿತ ಆರೋಪಿ ಉಮೇಶ್​ ಇಬ್ಬರ ಸ್ನೇಹಿತರು. ಇವರ ಸ್ನೇಹ ಪ್ರೀತಿಗೆ ತಿರುಗಿತ್ತು. ಇಬ್ಬರು ಮದುವೆ ಮಾಡಿಕೊಳ್ಳಬೇಕೆಂಬ ಆಸೆಯೂ ಇತ್ತು. ಆದ್ರೆ ಇತ್ತೀಚೆಗೆ ಜಯಶ್ರೀಗೆ ಉಮೇಶ್​ ಗುಣ ಮತ್ತು ನಡತೆ ಬಗ್ಗೆ ಇಷ್ಟವಾಗಿರಲಿಲ್ಲ. ಹೀಗಾಗಿ ಕಳೆದ ವರ್ಷ ನವೆಂಬರ್​ನಲ್ಲಿ ಉಮೇಶ್​ನಿಂದ ಜಯಶ್ರೀ ದೂರವಾಗಿದ್ದಳು.

ಪ್ರೀತಿ ವಿಷಯದಲ್ಲಿ ಮನಸ್ತಾಪ ಬರುವುದು ಸಾಮಾನ್ಯ. ಜಯಶ್ರೀ ದೂರವಾದ ಬಳಿಕ ಉಮೇಶ್​ ನೊಂದಿದ್ದಾನೆ. ಬಳಿಕ ಉಮೇಶ್​ ಸಹ ಜಯಶ್ರೀ ಮನವೋಲಿಸಲು ಯತ್ನಿಸಿದಂತೆ ಕಾಣುತ್ತದೆ. ಆದ್ರೆ ಇವರ ಮಾತುಕತೆ ಸಫಲವಾಗಿಲ್ಲ ಎಂಬುದು ತಿಳಿಯುತ್ತದೆ. ಇದರಿಂದ ಕೋಪಗೊಂಡ ಉಮೇಶ್ ಆಕೆಯನ್ನು ಹತ್ಯೆ ಮಾಡಿರುವುದಾಗಿ ತನಿಖೆ ವೇಳೆ ತಿಳಿದು ಬಂದಿದೆ.

ಏನಿದು ಪ್ರಕರಣ?: ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕಂಪ ಸಮೀಪ ಯುವತಿಗೆ ವ್ಯಕ್ತಿಯೊಬ್ಬ ಹೊಟ್ಟೆಗೆ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಜ.17ರಂದು ಮನೆಯಂಗಳದಲ್ಲೇ ನಡೆದಿತ್ತು. ಜಯಶ್ರೀ (23) ಮೃತಪಟ್ಟ ಯುವತಿ. ಯುವತಿ ತಾಯಿ ಮನೆಯಲ್ಲಿ ಅಡುಗೆ ಮಾಡುತ್ತಿದ್ದರು. ಈ ವೇಳೆ ಮಗಳು ಜೋರಾಗಿ ಚೀರಿಕೊಂಡ ಶಬ್ಧ ಕೇಳಿದೆ. ತಾಯಿ ಹೊರಗಡೆ ಓಡಿ ಬಂದಿದ್ದಾರೆ. ಅಂಗಳಕ್ಕೆ ಬಂದು ನೋಡಿದಾಗ ಮಗಳು ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿರುವುದನ್ನು ಕಂಡಿದ್ದಾರೆ. ಕೂಡಲೇ ಯುವತಿಯನ್ನು ಆಸ್ಪತ್ರೆ ಸಾಗಿಸಿದ್ದರು. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೆ ಯುವತಿ ಮೃತಪಟ್ಟಿದ್ದಳು.

ಯುವತಿಗೆ ಚಾಕು ಚುಚ್ಚಿ ಯುವಕ ಪರಾರಿಯಾಗಿದ್ದನು. ಆದ್ರೆ ಚೂರಿ ಇರಿತಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಶವವನ್ನು ಸಂಬಂಧಿಕರಿಗೆ ಒಪ್ಪಿಸಲಾಗಿತ್ತು. ಈ ವೇಳೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ವಿಧಿವಿಧಾನಗಳ ಪ್ರಕಾರ ಯುವತಿಯ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಆರೋಪಿ ವಿರುದ್ಧ ಪ್ರಕರಣ ದಾಖಲು: ಪೊಲೀಸರು ಕೊಲೆಯ ತನಿಖೆ ಆರಂಭಿಸಿದ್ದಾರೆ. ಈ ವೇಳೆ ಜಯಶ್ರೀ ತಾಯಿಯನ್ನು ವಿಚಾರಣೆ ನಡೆಸಿದಾಗ ನನ್ನ ಮಗಳು ಜೋರಾಗಿ ಕೂಗಿಕೊಂಡ ಶಬ್ಧ ಕೇಳಿತು. ಕೂಡಲೇ ನಾನು ಹೋಗಿ ನೋಡಿದಾಗ ರಕ್ತದ ಮಡುವಿನಲ್ಲಿ ಬಿದ್ದಿದ್ದರು ಎಂದು ವಿವರಿಸಿದ್ದಾರೆ. ನಿಮಗೆ ಯಾರ ಮೇಲಾದ್ರೂ ಅನುಮಾವ ಇದೇಯಾ ಎಂದು ಕೇಳಿದಾಗ ಜಯಶ್ರೀ ತಾಯಿ ಕೂಡ ಉಮೇಶ್​ ಹತ್ಯೆ ಮಾಡಿರಬಹುದು ಎಂದು ಆರೋಪಿಸಿ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪುತ್ತೂರು ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ಸಾಗಿದ್ದಾರೆ. ಪೊಲೀಸರು ಆರೋಪಿ ಉಮೇಶ್​ನನ್ನು 24 ಗಂಟೆಯೊಳಗೆ ಕೋರ್ಟ್​ಗೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಮನವಿ ಸಲ್ಲಿಸಲಿದ್ದಾರೆ.

ಇದನ್ನೂ ಓದಿ: ಪುತ್ತೂರು: ಮನೆಯಂಗಳದಲ್ಲೇ ಯುವತಿಗೆ ಚೂರಿ ಇರಿದು ಕೊಲೆ.. ಪ್ರಕರಣ ದಾಖಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.