ETV Bharat / state

ವಿವಾಹ ನಿಶ್ಚಯವಾಗಿದ್ದ ಯುವಕ ಕೆರೆಗೆ ಹಾರಿ ಆತ್ಮಹತ್ಯೆ

author img

By

Published : Oct 6, 2019, 3:44 AM IST

ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಬಾಲಚಂದ್ರ ನಾಲ್ಕು ದಿನಗಳ ಹಿಂದೆಯಷ್ಟೇ ಮನೆಗೆ ಬಂದಿದ್ದರು. ನವೆಂಬರ್ ತಿಂಗಳಿನಲ್ಲಿ ಇವರಿಗೆ ಮದುವೆ ನಿಗದಿಯಾಗಿತ್ತು.

ಕೆರೆಗೆ ಹಾರಿ ಯುವಕ ಆತ್ಮಹತ್ಯೆ..!

ದಕ್ಷಿಣ ಕನ್ನಡ: ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ಕಡಬ ತಾಲೂಕಿನ ಕೊಣಾಜೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಣಾಜೆ ಗ್ರಾಮದ ಹಾಲಾಡಿ ದಿ.ಶೇಷಪ್ಪ ಗೌಡ ಎಂಬುವವರ ಪುತ್ರ ಬಾಲಚಂದ್ರ (31) ಎಂದು ಗುರುತಿಸಲಾಗಿದೆ.

ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಬಾಲಚಂದ್ರ, ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ಮನೆಗೆ ಬಂದಿದ್ದ. ಈತನಿಗೆ ನವೆಂಬರ್ ತಿಂಗಳಿನಲ್ಲಿ ಮದುವೆ ನಿಗದಿಯಾಗಿತ್ತು. ಶನಿವಾರ ತನ್ನ ಸಹೋದರನ ಮನೆಗೆ ಹೋಗುವ ದಾರಿಯಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಈ ಕುರಿತು ಉಪ್ಪಿನಂಗಡಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ದಕ್ಷಿಣ ಕನ್ನಡ: ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ಕಡಬ ತಾಲೂಕಿನ ಕೊಣಾಜೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಣಾಜೆ ಗ್ರಾಮದ ಹಾಲಾಡಿ ದಿ.ಶೇಷಪ್ಪ ಗೌಡ ಎಂಬುವವರ ಪುತ್ರ ಬಾಲಚಂದ್ರ (31) ಎಂದು ಗುರುತಿಸಲಾಗಿದೆ.

ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಬಾಲಚಂದ್ರ, ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ಮನೆಗೆ ಬಂದಿದ್ದ. ಈತನಿಗೆ ನವೆಂಬರ್ ತಿಂಗಳಿನಲ್ಲಿ ಮದುವೆ ನಿಗದಿಯಾಗಿತ್ತು. ಶನಿವಾರ ತನ್ನ ಸಹೋದರನ ಮನೆಗೆ ಹೋಗುವ ದಾರಿಯಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಈ ಕುರಿತು ಉಪ್ಪಿನಂಗಡಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Intro:ಕಡಬ

ಯುವಕನೊರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಣಾಜೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಣಾಜೆ ಗ್ರಾಮದ ಹಾಲಾಡಿ ದಿ.ಶೇಷಪ್ಪ ಗೌಡ ಎಂಬವರ ಪುತ್ರ ಬಾಲಚಂದ್ರ (31ವ.) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಬಾಲಚಂದ್ರ ನಾಲ್ಕು ದಿನಗಳ ಹಿಂದೆಯಷ್ಟೇ ಮನೆಗೆ ಬಂದಿದ್ದರು. ನವೆಂಬರ್ ತಿಂಗಳಿನಲ್ಲಿ ಮದುವೆ ನಿಗದಿಯಾಗಿದ್ದು, ಶನಿವಾರದಂದು ಮನೆಯಲ್ಲಿದ್ದ ಇವರು ತನ್ನ ಸಹೋದರನ ಮನೆಗೆ ಹೋಗುವ ದಾರಿಯಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಾಯಿ ನೀಲಮ್ಮ ಹಾಗೂ ಮೂವರು ಸಹೋದರರು, ಓರ್ವ ಸಹೋದರಿಯನ್ನು ಅಗಲಿದ್ದಾರೆ. ಮೃತದೇಹವನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮೃತರ ಸಹೋದರ ವಾಸುದೇವ ಅವರು ಉಪ್ಪಿನಂಗಡಿ ಪೋಲಿಸರಿಗೆ ದೂರು ನೀಡಿದ್ದಾರೆ. ಪೋಲಿಸರು ತನಿಖೆ ನಡೆಸುತ್ತಿದ್ದಾರೆ.Body:ಬಾಲಚಂದ್ರConclusion:ಪ್ರಕಾಶ್ ಕಡಬ,ಸುಳ್ಯ (ಮಂಗಳೂರು)
ETV Bharat Logo

Copyright © 2024 Ushodaya Enterprises Pvt. Ltd., All Rights Reserved.