ಕೊಣಾಜೆ (ದಕ್ಷಿಣ ಕನ್ನಡ) : ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಣಾಜೆ ಬಳಿಯ ಕೊಲ್ಲರಕೋಡಿ ಬಳಿ ನಡೆದಿದೆ.
ಮೃತನನ್ನು ನೆತ್ತಿಲಪದವು ಸೈಟ್ನ ರಕ್ಷಿತ್ ಸನಿಲ್ (22) ಎಂದು ಗುರುತಿಸಲಾಗಿದೆ. ಕೊಲ್ಲರಕೋಡಿ ಪ್ರೌಢಶಾಲೆಯ ಕಚೇರಿಯ ಮುಂಭಾಗದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ರಕ್ಷಿತ್, ಅದೇ ಶಾಲೆಯ ಹಳೆ ವಿದ್ಯಾರ್ಥಿ ಆಗಿದ್ದ.
ಕೊಣಾಜೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಪ್ರಕರಣ ದಾಖಲಿಸಿದ್ದಾರೆ. ರಕ್ಷಿತ್ ಆತ್ಮಹತ್ಯೆ ಮಾಡಿಕೊಳ್ಳಲು ಪ್ರೇಮ ವೈಫಲ್ಯವೇ ಕಾರಣ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸುತ್ತಿದ್ದಾರೆ.