ದಾವಣಗೆರೆ: ತಾಲೂಕಿನ ಕಕ್ಕರಗೊಳ್ಳ-ಕಡ್ಲೆಬಾಳು ರಸ್ತೆ ಕುಸಿದಿದ್ದ ಪರಿಣಾಮ ಅದೇ ಮಾರ್ಗದಲ್ಲಿ ಲಾರಿಯೊಂದು ಸಂಚರಿಸುವಾಗ ಅದರೊಳಗೆ ಸಿಕ್ಕಿಹಾಕಿಕೊಂಡ ಘಟನೆ ನಡೆದಿದೆ.
ಕಳೆದ ಎರಡು ದಿನಗಳಿಂದ ಮಳೆಯಾಗಿದ್ದು, ರಸ್ತೆಯಲ್ಲಿನ ಮಣ್ಣು ಕುಸಿದ ಪರಿಣಾಮ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಬಳಿಕ ಗುಂಡಿಯಲ್ಲಿ ಬಿದ್ದಿದ್ದ ಲಾರಿಯನ್ನು ಮೇಲಕ್ಕೆತ್ತಲಾಗಿದೆ. ಆದಷ್ಟು ಬೇಗ ರಸ್ತೆ ನಿರ್ಮಾಣ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.