ETV Bharat / state

ಗ್ರಿಂಡರ್ ಗೇ ಆ್ಯಪ್ ಮೂಲಕ ವಂಚನೆ, ದರೋಡೆ ಮಾಡುತ್ತಿದ್ದ ಗ್ಯಾಂಗ್‌ ಅರೆಸ್ಟ್

author img

By

Published : Aug 21, 2022, 12:53 PM IST

ಗ್ರಿಂಡರ್ ಗೇ ಆ್ಯಪ್ (Grindr gay application) ಮೂಲಕ ಜನರನ್ನು ವಂಚಿಸಿ, ದರೋಡೆ ಮಾಡುತ್ತಿದ್ದ ಇಬ್ಬರು ಆರೋಪಿಗಳು, ಅವರಿಗೆ ಆಶ್ರಯ ನೀಡಿದ್ದ ಓರ್ವನನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.

accused arrested under Grindr Gay app fraud case n davanagere
ಗ್ರಿಂಡರ್ ಗೇ ಆ್ಯಪ್ ಮೂಲಕ ವಂಚನೆ

ದಾವಣಗೆರೆ: ಗ್ರಿಂಡರ್ ಗೇ ಆ್ಯಪ್ (ಸಲಿಂಗರ ಡೇಟಿಂಗ್ ಆ್ಯಪ್/ Grindr gay application) ಮೂಲಕ ಜನರನ್ನು ವಂಚಿಸಿ, ದರೋಡೆ ಮಾಡುತ್ತಿದ್ದ ಇಬ್ಬರು ಆರೋಪಿಗಳು ಹಾಗೂ ಆರೋಪಿಗಳಿಗೆ ಆಶ್ರಯ ನೀಡಿದ್ದ ಕೆಆರ್​ಎಸ್ ಪಕ್ಷದ ಜಿಲ್ಲಾಧ್ಯಕ್ಷನನ್ನು ಬಂಧಿಸುವಲ್ಲಿ ದಾವಣಗೆರೆ ಪೋಲಿಸರು ಯಶಸ್ವಿಯಾಗಿದ್ದಾರೆ. ಉಳಿದವರ ಪತ್ತೆಗೆ ತನಿಖೆ ಚುರುಕುಗೊಂಡಿದೆ.

ಗ್ರಿಂಡರ್ ಗೇ ಆ್ಯಪ್ ಮೂಲಕ ವ್ಯಕ್ತಿಯೋರ್ವನನ್ನು ಪರಿಚಯಿಸಿಕೊಂಡು ಅವರನ್ನು ಕುಂದುವಾಡ ನಿರ್ಜನ ಪ್ರದೇಶಕ್ಕೆ ಕರೆಸಿ 5-6 ಆರೋಪಿಗಳು ಹಲ್ಲೆ ಮಾಡಿ ಅವರ ಬಳಿಯಿದ್ದ ಮೊಬೈಲ್ ಫೋನ್, 25 ಗ್ರಾಂನ ಬಂಗಾರದ ಸರ, 2000 ರೂ. ನಗದು ಹಾಗೂ ಎಟಿಎಂ ಕಾರ್ಡ್ ಮತ್ತು ಪಾಸ್​ವರ್ಡ್ ಪಡೆದುಕೊಂಡು 16,000 ರೂ. ಹಣವನ್ನು ವಿತ್ ಡ್ರಾ ಮಾಡಿಕೊಂಡು ಹಲ್ಲೆ ಮಾಡಿ ಕಾಲ್ಕಿತ್ತಿದ್ದರು.‌ ಈ ಸಲಿಂಗ ಕಾಮದ ಆ್ಯಪ್​​ ಮೂಲಕ ಮೋಸ ಹೋದ ವ್ಯಕ್ತಿಯ ದೂರಿನ ಮೇರೆಗೆ ಪೊಲೀಸರು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆ ಮಾಡಿದ್ದ ಗ್ಯಾಂಗ್‌ನ ಸದಸ್ಯ ಶ್ರೀನಿವಾಸ ಮತ್ತು ಒಬ್ಬ ಕಾನೂನು ಸಂಘರ್ಷಕ್ಕೆ ಒಳಪಟ್ಟ ಬಾಲಕನನ್ನು ಹಾಗೂ ದರೋಡೆ ಗ್ಯಾಂಗ್ ಸದಸ್ಯರಿಗೆ ಆಶ್ರಯ ನೀಡಿ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಕೆಆರ್​​ಸ್ ಪಕ್ಷದ ದಾವಣಗೆರೆ ಜಿಲ್ಲಾ ಯುವ ಘಟಕದ ಅಧ್ಯಕ್ಷನಾದ ಮಾಲತೇಶನನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ದರೋಡೆ ಮಾಡಿದ್ದ ಮೊಬೈಲ್ ಫೋನ್ ಮತ್ತು ದರೋಡೆ ಮಾಡಲು ಬಳಸಿದ್ದ 2 ಮೊಬೈಲ್ ಫೋನ್‌ಗಳು ಮತ್ತು ಒಂದು ಆಟೋ ರೀಕ್ಷಾ ವಶಕ್ಕೆ ಪಡೆದುಕೊಂಡು ಪೋಲಿಸರು ತನಿಖೆ ಕೈಗೊಂಡಿದ್ದಾರೆ. ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಆರೋಪಿತರ ಪತ್ತೆಗೆ ಶೋಧ ಕಾರ್ಯ ಮುಂದುವರೆದಿದೆ.

ಇದನ್ನೂ ಓದಿ: ಕೆಲಸ ಕೇಳಿ ಬಂದ ಯುವತಿಯನ್ನು ವೇಶ್ಯಾವಾಟಿಕೆಗೆ ತಳ್ಳಿದ ದುರುಳರು, ಮೂವರ ಬಂಧನ

ದಾವಣಗೆರೆ: ಗ್ರಿಂಡರ್ ಗೇ ಆ್ಯಪ್ (ಸಲಿಂಗರ ಡೇಟಿಂಗ್ ಆ್ಯಪ್/ Grindr gay application) ಮೂಲಕ ಜನರನ್ನು ವಂಚಿಸಿ, ದರೋಡೆ ಮಾಡುತ್ತಿದ್ದ ಇಬ್ಬರು ಆರೋಪಿಗಳು ಹಾಗೂ ಆರೋಪಿಗಳಿಗೆ ಆಶ್ರಯ ನೀಡಿದ್ದ ಕೆಆರ್​ಎಸ್ ಪಕ್ಷದ ಜಿಲ್ಲಾಧ್ಯಕ್ಷನನ್ನು ಬಂಧಿಸುವಲ್ಲಿ ದಾವಣಗೆರೆ ಪೋಲಿಸರು ಯಶಸ್ವಿಯಾಗಿದ್ದಾರೆ. ಉಳಿದವರ ಪತ್ತೆಗೆ ತನಿಖೆ ಚುರುಕುಗೊಂಡಿದೆ.

ಗ್ರಿಂಡರ್ ಗೇ ಆ್ಯಪ್ ಮೂಲಕ ವ್ಯಕ್ತಿಯೋರ್ವನನ್ನು ಪರಿಚಯಿಸಿಕೊಂಡು ಅವರನ್ನು ಕುಂದುವಾಡ ನಿರ್ಜನ ಪ್ರದೇಶಕ್ಕೆ ಕರೆಸಿ 5-6 ಆರೋಪಿಗಳು ಹಲ್ಲೆ ಮಾಡಿ ಅವರ ಬಳಿಯಿದ್ದ ಮೊಬೈಲ್ ಫೋನ್, 25 ಗ್ರಾಂನ ಬಂಗಾರದ ಸರ, 2000 ರೂ. ನಗದು ಹಾಗೂ ಎಟಿಎಂ ಕಾರ್ಡ್ ಮತ್ತು ಪಾಸ್​ವರ್ಡ್ ಪಡೆದುಕೊಂಡು 16,000 ರೂ. ಹಣವನ್ನು ವಿತ್ ಡ್ರಾ ಮಾಡಿಕೊಂಡು ಹಲ್ಲೆ ಮಾಡಿ ಕಾಲ್ಕಿತ್ತಿದ್ದರು.‌ ಈ ಸಲಿಂಗ ಕಾಮದ ಆ್ಯಪ್​​ ಮೂಲಕ ಮೋಸ ಹೋದ ವ್ಯಕ್ತಿಯ ದೂರಿನ ಮೇರೆಗೆ ಪೊಲೀಸರು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆ ಮಾಡಿದ್ದ ಗ್ಯಾಂಗ್‌ನ ಸದಸ್ಯ ಶ್ರೀನಿವಾಸ ಮತ್ತು ಒಬ್ಬ ಕಾನೂನು ಸಂಘರ್ಷಕ್ಕೆ ಒಳಪಟ್ಟ ಬಾಲಕನನ್ನು ಹಾಗೂ ದರೋಡೆ ಗ್ಯಾಂಗ್ ಸದಸ್ಯರಿಗೆ ಆಶ್ರಯ ನೀಡಿ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಕೆಆರ್​​ಸ್ ಪಕ್ಷದ ದಾವಣಗೆರೆ ಜಿಲ್ಲಾ ಯುವ ಘಟಕದ ಅಧ್ಯಕ್ಷನಾದ ಮಾಲತೇಶನನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ದರೋಡೆ ಮಾಡಿದ್ದ ಮೊಬೈಲ್ ಫೋನ್ ಮತ್ತು ದರೋಡೆ ಮಾಡಲು ಬಳಸಿದ್ದ 2 ಮೊಬೈಲ್ ಫೋನ್‌ಗಳು ಮತ್ತು ಒಂದು ಆಟೋ ರೀಕ್ಷಾ ವಶಕ್ಕೆ ಪಡೆದುಕೊಂಡು ಪೋಲಿಸರು ತನಿಖೆ ಕೈಗೊಂಡಿದ್ದಾರೆ. ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಆರೋಪಿತರ ಪತ್ತೆಗೆ ಶೋಧ ಕಾರ್ಯ ಮುಂದುವರೆದಿದೆ.

ಇದನ್ನೂ ಓದಿ: ಕೆಲಸ ಕೇಳಿ ಬಂದ ಯುವತಿಯನ್ನು ವೇಶ್ಯಾವಾಟಿಕೆಗೆ ತಳ್ಳಿದ ದುರುಳರು, ಮೂವರ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.